TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
NEET UG central education minister Dharmendra Pradhan resigns

NEET UG: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಸಚಿವರ ಪದತ್ಯಾಗಕ್ಕೆ ಆಗ್ರಹಿಸಿ ದೇಶದಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಯುತ್ತಿದ್ದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್ ಅವರು, ಈ…

Read More
Iran is Now Serious donald Trump Says No Immediate Decision on Large Scale Strike

Donald Trump: ಇರಾನ್‌ ಈಗ ಗಂಭೀರವಾಗಿದೆ’: ಬೃಹತ್ ದಾಳಿಯ ಕುರಿತು ತಕ್ಷಣಕ್ಕೆ ನಿರ್ಧಾರವಿಲ್ಲ ಎಂದ ಟ್ರಂಪ್

ಅಮೆರಿಕ: ಇರಾನ್ ವಿರುದ್ಧ ಬೃಹತ್ ಪ್ರಮಾಣದ ಮಿಲಿಟರಿ ದಾಳಿ ನಡೆಸುವ ಕುರಿತು ತಾವು ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶುಕ್ರವಾರ ತಿಳಿಸಿದ್ದಾರೆ. ವಾಷಿಂಗ್ಟನ್‌ನೊಂದಿಗೆ ನಡೆಯುತ್ತಿರುವ ಮಾತುಕತೆಯಲ್ಲಿ ಟೆಹ್ರಾನ್ (ಇರಾನ್) ಈಗ ಹೆಚ್ಚು ‘ಗಂಭೀರತೆ’ ತೋರಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಇರಾನ್ ಮೇಲೆ ಬೃಹತ್ ದಾಳಿಗೆ ಟ್ರಂಪ್ ತಮ್ಮ ಹಿರಿಯ ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ. ಫಲಿತಾಂಶ…

Read More
Delhi Police Block Over 400 Pakistani Accounts Fuelling Fake NEET UG Protest Content

NEET UG: ನೀಟ್ ಆಂದೋಲನ ಹೆಸರಲ್ಲಿ ಪಾಕ್ ಸಂಚು: 400ಕ್ಕೂ ಹೆಚ್ಚು ಖಾತೆಗಳು ಬ್ಲಾಕ್!

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ಪ್ರತಿಭಟನೆಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಅಂಶಗಳನ್ನು ಹರಡುತ್ತಿದ್ದ ಪಾಕಿಸ್ತಾನ ಮೂಲದ ನೂರಾರು ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕೇಂದ್ರ ದೆಹಲಿ ವಿಭಾಗದ ಡಿಸಿಪಿ ರೋಹಿತ್ ರಾಜ್‌ಬೀರ್ ಸಿಂಗ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ…

Read More
Crime Punjabi Woman Murdered in Canada Indian Origin Boyfriend Arrested

Crime: ಕೆನಡಾದಲ್ಲಿ ಪಂಜಾಬ್ ಮೂಲದ ಯುವತಿ ಹತ್ಯೆ: ಭಾರತೀಯ ಮೂಲದ ಪ್ರೇಮಿ ಬಂಧನ

ಕೆನಡಾ: ಇಲ್ಲಿನ ಎಡ್ಮಂಟನ್‌ನಲ್ಲಿ ಪಂಜಾಬ್ ಮೂಲದ 23 ವರ್ಷದ ಯುವತಿ ದಮನ್‌ಪ್ರೀತ್ ಕೌರ್ ಅವರನ್ನು ಆಕೆಯ ಮನೆಯಲ್ಲೇ ಕತ್ತು ಹಿರಚಿ ಕೊಲೆ ಮಾಡಿರುವ (Crime) ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾರತೀಯ ಮೂಲದ ಪ್ರೇಮಿ ರಿತಿಶ್ ಕುಮಾರ್ (22) ಎಂಬಾತನನ್ನು ಕೆನಡಾ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ದ್ವಿತೀಯ ಹಂತದ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮೃತ ಯುವತಿ ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಸಮ್ರಾಲಾ ಮೂಲದವರಾಗಿದ್ದಾರೆ. ಏನಿದು ಪ್ರಕರಣ?ಜುಲೈ 9 ರಂದು ಸಂಜೆ ಎಡ್ಮಂಟನ್‌ನ ಸಿಲ್ವರ್‌ಬೆರ್ರಿ…

Read More
With a Mammoth 375 Crore Publicity Budget Will Ramayana Rewrite Indian Box Office Records

Ramayana: ರಾಮಾಯಣ ಪ್ರಚಾರಕ್ಕೆ ಸೋನಿ ಪಿಕ್ಚರ್ಸ್ ಅಖಾಡಕ್ಕೆ: ಕೇವಲ ಪಬ್ಲಿಸಿಟಿಗೇ ನೂರಾರು ಕೋಟಿ ಸುರಿಯಲಿರುವ ಚಿತ್ರತಂಡ

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರತಿಷ್ಠಿತ ಮತ್ತು ಅದ್ದೂರಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ (Ramayana) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಸ್ಯಾಂಡಲ್‌ವುಡ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಎರಡು ಭಾಗಗಳ ಮಹಾಕಾವ್ಯ ಕೇವಲ ಮೇಕಿಂಗ್ ಬಜೆಟ್‌ನಿಂದ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದ ಪ್ರಚಾರದ ಕಾರಣಕ್ಕೂ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾ…

Read More
Even Leftover Food Tastes Like Wedding Meal Ex India Star ramesh On Shreyas Iyers First Win

Shreyas Iyer: ‘ಹಸಿದಾಗ ಹಳಸಿದ ಅನ್ನವೂ ಮದುವೆ ಊಟದಂತೆ’: ಶ್ರೇಯಸ್ ಅಯ್ಯರ್ ಗೆಲುವಿಗೆ ಮಾಜಿ ಕ್ರಿಕೆಟಿಗ ರಮೇಶ್ ಹಾಸ್ಯಮಯ ಪ್ರತಿಕ್ರಿಯೆ

ನವದೆಹಲಿ: ಟಿ20 ಕ್ರಿಕೆಟ್‌ನಲ್ಲಿ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ಭಾರತ ತಂಡಕ್ಕೆ ಕೊನೆಗೂ ಜಿಂಬಾಬ್ವೆ ವಿರುದ್ಧ ಜಯ ಸಿಕ್ಕಿದೆ. ಸೂರ್ಯಕುಮಾರ್ ಯಾದವ್ ಅವರಿಂದ ನಾಯಕತ್ವ ವಹಿಸಿಕೊಂಡ ನಂತರ ಸತತ ಆರು ಪಂದ್ಯಗಳಲ್ಲಿ ಮುಖಭಂಗ ಅನುಭವಿಸಿದ್ದ ಶ್ರೇಯಸ್ ಅಯ್ಯರ್, (Shreyas Iyer) ಟಿ20 ನಾಯಕನಾಗಿ ತಮ್ಮ ಮೊದಲ ಗೆಲುವಿನ ಸಿಹಿ ಉಂಡಿದ್ದಾರೆ. ಹರಾರೆಯಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಟಿ20ಯಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸೋಲಿನ ಸರಣಿಗೆ ತೆರೆ ಎಳೆದಿದೆ. ಹಸಿದ…

Read More
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More