TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
director hansal mehta announces scam 3

Scam: ಮತ್ತೆ ತೆರೆ ಮೇಲೆ ಬರಲಿದೆ ‘ಸ್ಕ್ಯಾಮ್ 3’, ಇಲ್ಲಿದೆ ಮಾಹಿತಿ

ಮುಂಬೈ: ಅಪಾರ ಜನಪ್ರಿಯತೆ ಗಳಿಸಿರುವ ‘ಸ್ಕ್ಯಾಮ್’ (Scam) ಸರಣಿಯ ಮುಂದಿನ ಭಾಗವು ಶೀಘ್ರದಲ್ಲೇ ತೆರೆಯ ಮೇಲೆ ಬರಲು ಸಜ್ಜಾಗುತ್ತಿದೆ. ಹರ್ಷದ್ ಮೆಹ್ತಾ ಮತ್ತು ಅಬ್ದುಲ್ ಕರೀಂ ತೆಲಗಿ ಅವರ ಕಥೆಗಳ ಯಶಸ್ಸಿನ ನಂತರ, ನಿರ್ದೇಶಕ ಹನ್ಸಲ್ ಮೆಹ್ತಾ ಅವರು ಈಗ ಸಹಾರಾ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಾಗಿದ್ದ ದಿವಂಗತ ಸುಬ್ರತಾ ರಾಯ್ ಅವರ ಜೀವನ ಮತ್ತು ಹಣಕಾಸು ಹಗರಣದ ಕಥೆಯನ್ನು ತೆರೆದಿಡಲು ಸಿದ್ಧರಾಗಿದ್ದಾರೆ. ‘ಸ್ಕ್ಯಾಮ್ 2010 – ದ ಸುಬ್ರತಾ ರಾಯ್ ಸಾಗಾ’ ಎಂಬ ಹೆಸರಿನ ಈ ಸರಣಿಯ…

Read More
NEET UG paper leak cbi digging tin to matter accused MBBS daughter goes missing

NEET: ನೀಟ್ ಹಗರಣಕ್ಕೆ ಸಿನಿಮೀಯ ತಿರುವು: ತಂದೆಯ ಬಂಧನದ ಬೆನ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ

ರಾಜಸ್ಥಾನ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದ್ದು, ಈಗ ಯಾವುದೋ ಕ್ರೈಂ ಸಿನಿಮಾದ ಕಥೆಯಂತೆ ಭಾಸವಾಗುತ್ತಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಈ ಜಾಲದ ತನಿಖೆ ಈಗ ದೌಸಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೆಟ್ಟಿಲೇರಿದ್ದು, ಅಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಗತಿ ಬಿವಾಲ್ ಎಂಬಾಕೆ ದಿಢೀರ್ ನಾಪತ್ತೆಯಾಗಿರುವುದು ಹೊಸ ಸಂಚಲನ ಮೂಡಿಸಿದೆ. ಈಕೆಯ ತಂದೆ ಮಾಂಗಿಲಾಲ್ ಬಿವಾಲ್ ಮತ್ತು ಚಿಕ್ಕಪ್ಪ ದಿನೇಶ್ ಬಿವಾಲ್ ಅವರನ್ನು ಪತ್ರಿಕೆ ಸೋರಿಕೆ ಹಗರಣದಲ್ಲಿ…

Read More
karnataka election commissioner statement about SIR

SIR: ಮತದಾರರ ಪಟ್ಟಿ ಅಪ್‌ಡೇಟ್: ಜೂನ್ 30ರಿಂದ ಮನೆ ಬಾಗಿಲಿಗೆ ಬರಲಿದ್ದಾರೆ ಅಧಿಕಾರಿಗಳು; ಅಕ್ಟೋಬರ್‌ನಲ್ಲಿ ಫೈನಲ್ ಲಿಸ್ಟ್!

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲು ಚುನಾವಣಾ ಆಯೋಗ ಸಜ್ಜಾಗಿದೆ. ಈ ಬಾರಿ ಹೈಟೆಕ್ ಸ್ಪರ್ಶದೊಂದಿಗೆ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಅಕ್ಟೋಬರ್ 7ರಂದು (SIR) ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಈ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ. ಪರಿಷ್ಕರಣೆಯ ಮಹತ್ವದ ಹಂತಗಳು: ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯಕ್ಕೆ ಜೂನ್ 20ರಿಂದಲೇ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಸಿಬ್ಬಂದಿಗೆ ತರಬೇತಿ ಹಾಗೂ ಫಾರಂಗಳ…

Read More
Narendra Modi UAE visit signs agreements

Narendra Modi: ಇರಾನ್ ಯುದ್ಧದ ಮಧ್ಯೆ ಭಾರತ-ಯುಎಇ ರಕ್ಷಣಾ ಪಾಲುದಾರಿಕೆ: ತೈಲ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮೋದಿ ಮಾಸ್ಟರ್ ಪ್ಲಾನ್!

ನವದೆಹಲಿ/ದುಬೈ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಭಾರತ ಮತ್ತು ಸಂಯುಕ್ತ (Narendra Modi) ಅರಬ್ ಎಮಿರೇಟ್ಸ್ (UAE) ನಡುವಿನ ರಕ್ಷಣಾ ಮತ್ತು ಇಂಧನ ಬಾಂಧವ್ಯ ಹೊಸ ಎತ್ತರಕ್ಕೆ ತಲುಪಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳು ವ್ಯೂಹಾತ್ಮಕ ರಕ್ಷಣಾ ಪಾಲುದಾರಿಕೆಯ ಚೌಕಟ್ಟಿಗೆ ಅಂಕಿತ ಹಾಕಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮೀಸಲು ಮತ್ತು ದ್ರವೀಕೃತ ಪೆಟ್ರೋಲಿಯಂ…

Read More
There is a similarities with Babri Masjid judgment says Asaduddin Owaisi

Asaduddin Owaisi: ಭೋಜಶಾಲಾ ಮಂದಿರ ಎಂದು ಘೋಷಿಸಿದ ಹೈಕೋರ್ಟ್; ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಓವೈಸಿ ಸಜ್ಜು

ಇಂದೋರ್: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಮೂಲತಃ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ. ಈ ಸಂಕೀರ್ಣವು ಪರಮಾರ ರಾಜವಂಶದ ರಾಜ ಭೋಜ ನಿರ್ಮಿಸಿದ ಸಂಸ್ಕೃತ ಕಲಿಕಾ ಕೇಂದ್ರ ಮತ್ತು ವಾಗ್ದೇವಿ ಮಂದಿರವಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆದರೆ, ಈ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ತೀವ್ರವಾಗಿ ಟೀಕಿಸಿದ್ದು, ಸುಪ್ರೀಂ ಕೋರ್ಟ್…

Read More
RG Kar case west Bengal suvendu Adhikari government suspends 3 IPS officers for misleading case

West Bengal: ಆರ್.ಜಿ. ಕರ್ ಪ್ರಕರಣ, ಮೂವರು ಅಧಿಕಾರಿಗಳ ವಜಾ

ಪಶ್ಚಿಮ ಬಂಗಾಳ: ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು (West Bengal) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದ ಮೇಲೆ ಅಂದಿನ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿನೀತ್ ಗೋಯಲ್ ಅವರೊಂದಿಗೆ ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖೋಪಾಧ್ಯಾಯ ಅವರನ್ನೂ ಅಮಾನತು ಮಾಡಲಾಗಿದ್ದು, ಇವರ…

Read More
Crime deadly accident in koppal 4 lost life

Crime: ಕೊಪ್ಪಳದಲ್ಲಿ ಘೋರ ದುರಂತ: ಸೇತುವೆ ಗೋಡೆ ಮುರಿದು ನದಿಗೆ ಉರುಳಿದ ಟ್ರ್ಯಾಕ್ಟರ್

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ರಕ್ತಸಿಕ್ತ ಅಧ್ಯಾಯವೊಂದು ಸಂಭವಿಸಿದೆ. ತುಂಗಭದ್ರಾ ನದಿಯ ಸೇತುವೆಯ ಮೇಲೆ ವೇಗವಾಗಿ (Crime) ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಹತೋಟಿ ತಪ್ಪಿ, ರಕ್ಷಣಾ ಗೋಡೆಯನ್ನು ಅಪ್ಪಳಿಸಿ ನೇರವಾಗಿ ಕೆಳಕ್ಕೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ದುರ್ದೈವಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಲುಗಿ ಹೋದ ಜೀವಗಳು: ವಾಹನವು ಎತ್ತರದಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಟ್ರ್ಯಾಕ್ಟರ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿರುವ ಶಂಕೆ ವ್ಯಕ್ತವಾಗಿದ್ದು, ಕೆಳಕ್ಕೆ ಉರುಳಿದಾಗ…

Read More