TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Sdpi protest in Mysuru by opposing government decision to take back case against Pramod mutalik and Chaitra kundapur

SDPI: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ

ಮೈಸೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತೀವ್ರ…

Read More
West bengal election result mamata banerjee decided to go on court regarding her defeat

West Bengal: ಭವಾನಿಪುರ ಚುನಾವಣಾ ಫಲಿತಾಂಶ ಇವಿಎಂ ಪಿತೂರಿ; ಕೋರ್ಟ್ ಮೆಟ್ಟಿಲೇರಲು ಮಮತಾ ಬ್ಯಾನರ್ಜಿ ಸಿದ್ಧತೆ, ವಿರೋಧ ಪಕ್ಷಗಳ ಒಕ್ಕೂಟಕ್ಕೆ ಕರೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ವಾರಗಳು ಕಳೆದಿದ್ದರೂ, ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾದ ಅನಿರೀಕ್ಷಿತ ಪರಾಜಯದ ವಿವಾದ ಇನ್ನು ತಣ್ಣಗಾಗಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತ ಚುರುಕುಗೊಳಿಸಿದ್ದರೂ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಈ ಚುನಾವಣಾ ಫಲಿತಾಂಶವನ್ನು ವ್ಯವಸ್ಥಿತ ಆಡಳಿತಾತ್ಮಕ ಪಿತೂರಿ ಎಂದು ಕರೆದಿರುವ ಅವರು, ಈ ರಾಜಕೀಯ ಹೋರಾಟವನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಮುಂದುವರಿಸುವುದಾಗಿ ಪ್ರಕಟಿಸಿದ್ದಾರೆ….

Read More
good news India plans push subsidy for electric two wheelers on PM E-Drive

Good News: ಇ-ಸ್ಕೂಟರ್ ಖರೀದಿದಾರರಿಗೆ ಮತ್ತೆ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರದ ಬಂಪರ್ ಯೋಜನೆ

ನವದೆಹಲಿ: ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳಿಂದ ಕಂಗಾಲಾಗಿರುವ ಜನಸಾಮಾನ್ಯರ ತಿಂಗಳ ಬಜೆಟ್ ಮೇಲಿನ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು (Good News) ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ನಿರಂತರ ಇಂಧನ ಬೆಲೆ ಏರಿಕೆಯ ಮಧ್ಯೆಯೇ ದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (ಇ-ಸ್ಕೂಟರ್ ಮತ್ತು ಬೈಕ್) ಬಳಕೆಯನ್ನು ಮತ್ತಷ್ಟು ಪ್ರೋತ್ಸಾಹಿಸಲು ‘ಪ್ರಧಾನ ಮಂತ್ರಿ ಇ-ಡ್ರೈವ್’ ಯೋಜನೆಯಡಿ ಮರು ಸಬ್ಸಿಡಿ ನೀಡುವ ಕುರಿತು ಸರ್ಕಾರ ಉನ್ನತ ಮಟ್ಟದ ಚರ್ಚೆ ನಡೆಸುತ್ತಿದೆ. ಇದರಿಂದ ಪರಿಸರಸ್ನೇಹಿ ವಾಹನಗಳನ್ನು ಖರೀದಿಸಲು…

Read More
tmc lost deposit in west bengal fatta by poll election

West Bengal: ಫಾಲ್ಟಾ ಚುನಾವಣೆಯಲ್ಲಿ ಟಿಎಂಸಿಗೆ ಹೀನಾಯ ಸೋಲು: ಠೇವಣಿ ಕಳೆದುಕೊಂಡ ಮಮತಾ ಪಕ್ಷ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಅತ್ಯಂತ ಪ್ರಭಾವಿ ಕ್ಷೇತ್ರಗಳಲ್ಲೊಂದಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ಟಾ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವು ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪಾಲಿಗೆ ಭಾರಿ ಮುಖಭಂಗ ತಂದಿಟ್ಟಿದೆ. ಚುನಾವಣಾ ಪ್ರಚಾರದ ವೇಳೆ ತೀವ್ರ ಅಬ್ಬರ ಸೃಷ್ಟಿಸಿದ್ದ ಟಿಎಂಸಿ, ಮತ ಎಣಿಕೆಯ ನಂತರ ಕನಿಷ್ಠ ಪಕ್ಷ ತನ್ನ ಠೇವಣಿಯನ್ನು ಉಳಿಸಿಕೊಳ್ಳಲಾಗದೆ ಭೀಕರ ಸೋಲನ್ನು ಅನುಭವಿಸಿದೆ. ಎಲ್ಲಿಯೂ ಕಾಣಿಸಿಕೊಳ್ಳದ ಅಭಿಷೇಕ್‌ ಬ್ಯಾನರ್ಜಿ ವಾಸ್ತವವಾಗಿ, ಚುನಾವಣಾ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಟಿಎಂಸಿ ಈ ಕ್ಷೇತ್ರದಲ್ಲಿ ಸೋಲೊಪ್ಪಿಕೊಂಡ…

Read More
producer gives updated about vijays Jana Nayagan

Jana Nayagan: ಜನನಾಯಗನ್ ರಿಲೀಸ್‌ ಯಾವಾಗ? ನಿರ್ಮಾಪಕರು ಹೇಳಿದ್ದೇನು?

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಟನೆಯ, ಪ್ರೇಕ್ಷಕರು ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿರುವ ಅವರ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಸಿನಿಮಾದ ಬಿಡುಗಡೆ ಇನ್ನು ಕೂಡ ಅನಿಶ್ಚಿತತೆಯಲ್ಲೇ ಮುಂದುವರಿದಿದೆ. ಹಲವು ತಿಂಗಳುಗಳಿಂದ ವಿಳಂಬವಾಗುತ್ತಿರುವ ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ಇನ್ನು ಕೂಡ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ ಎಂಬುದನ್ನು ಚಿತ್ರದ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ನಿರ್ದೇಶಕ ಎಚ್. ವಿನೋತ್ ಸಾರಥ್ಯದ ಈ ರಾಜಕೀಯ ಆಕ್ಷನ್ ಡ್ರಾಮಾ…

Read More
cm siddaramaiah condolence for Uttar kannada tragedy

CM Siddaramaiah: ಉತ್ತರ ಕನ್ನಡ ಕಡಲತೀರದಲ್ಲಿ ಘೋರ ದುರಂತ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…

Read More
Dmk mk stalin big statement about cm vijay government

MK Stalin: ಟಿವಿಕೆ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ನಮ್ಮ ಕೃಪೆಯಿಂದ ಅಧಿಕಾರದಲ್ಲಿದೆ: ಮುಖ್ಯಮಂತ್ರಿ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ

ಚೆನ್ನೈ: ತಮಿಳುನಾಡಿನ ಇತ್ತೀಚಿನ ರಾಜಕೀಯ ಆಡಳಿತ ಬದಲಾವಣೆಯ ನಂತರ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಸಮರ ತಾರಕಕ್ಕೇರಿದೆ. ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ವಿರುದ್ಧ ಡಿಎಂಕೆ (DMK) ಮುಖ್ಯಸ್ಥ ಎಂ.ಕೆ. ಸ್ಟಾಲಿನ್ (MK Stalin) ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ಅವರ ನೇತೃತ್ವದ ಈ ಹೊಸ ಆಡಳಿತವು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿರುವ ಅವರು,…

Read More