BY Vijayendra: ಕಚ್ಚಾ ತೈಲ ಸಮಸ್ಯೆ ಇಲ್ಲ, ಆತಂಕ ಬೇಡ: ಬಿವೈ ವಿಜಯೇಂದ್ರ
ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ ಕ್ರಮಗಳು ದೇಶದ ಜನರ ಮೇಲೆ ಹೊರೆಯಾಗದಂತೆ ಕಾಪಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ದಾವಣಗೆರೆಯಲ್ಲಿಂದು ಹೇಳಿದ್ದಾರೆ. ಅಪಪ್ರಚಾರ ನಂಬಬೇಡಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿದ್ದಾರೆ. ಜೊತೆಗೆ ಕಚ್ಚಾತೈಲದ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ…
ಬೆಂಗಳೂರು: ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್ ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (Muniyappa) ಹೇಳಿದ್ದಾರೆ. ನಾಳೆಯಿಂದ ನಿರಂತರ ಸರಬರಾಜು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು, ಪ್ರಸಕ್ತ ರಾಜ್ಯದಲ್ಲಿ ಶೇಕಡ 20ರಷ್ಟು ಮಾತ್ರ ವಾಣಿಜ್ಯ ಅಡುಗೆ ಅನಿಲ ಸರಬರಾಜಾಗುತ್ತಿದೆ. ಆದರೆ, ಆಸ್ಪತ್ರೆಗಳಿಗೆ ಮಾತ್ರ ಶೇಕಡ 100ರಷ್ಟು ಗ್ಯಾಸ್ ಸಿಲಿಂಡರ್ ಗಳ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವ…
ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು ದೇಶದ ಜನರ ಮೇಲೆ ಪರಿಣಾಮ ಬೀರದಂತೆ ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ ಪಕ್ಷಗಳು ರಾಜಕೀಯ…
ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ
ಮಡಿಕೇರಿ: ಹಾಕಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ ಸಬ್-ಜೂನಿಯರ್ ಹಾಕಿ (Hockey) ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ 10ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಏಪ್ರಿಲ್ 1ರಿಂದ ಚಾಂಪಿಯನ್ಶಿಪ್ ವರ್ಣ ಬೋಜಮ್ಮ, ತೇಜಲ್ ಬೋಪಣ್ಣ ಮತ್ತು ಲಕ್ಷ್ಯ ಪೊನ್ನಕ್ಕ ಬೆಂಗಳೂರಿನ ಶಾಂತಿನಗರದ ಹಾಕಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಕ್ರೀಡಾ ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ. ಏಪ್ರಿಲ್ 1ರಿಂದ 6ರವರೆಗೆ ರಾಂಚಿಯಲ್ಲಿ ಸಬ್-ಜೂನಿಯರ್ ರಾಷ್ಟ್ರೀಯ…
ತುಮಕೂರು: ಜಿಲ್ಲೆಯಲ್ಲಿ ಮೇ 3 ರಿಂದ 10 ರವರೆಗೆ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ತುಮಕೂರು ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್ಶಿಪ್ (Tennis) ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 12 ದೇಶಗಳ ಆಟಗಾರರು ಬಾಗಿ ತುಮಕೂರು ಜಿಲ್ಲೆಯ ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂತರರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದೆ. ವಿಶ್ವಾದ್ಯಂತ…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ (Crime) ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಬಂಧನ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ನಗರ ಪಾಲಿಕೆ…