Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Ranveer Singh to reword his apology

Ranveer Singh: ‘ಕಾಂತಾರ’ ವಿವಾದ: ಅಫಿಡವಿಟ್ ತಿದ್ದುಪಡಿ ಮಾಡಲು ನಟ ರಣವೀರ್ ಸಿಂಗ್ ಸಮ್ಮತಿ

ಬೆಂಗಳೂರು: ‘ಕಾಂತಾರ’ ಚಲನಚಿತ್ರದ ದೃಶ್ಯವೊಂದನ್ನು ಅನುಕರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh), ತಮ್ಮ ಕ್ಷಮೆಯಾಚನೆ ಪತ್ರವನ್ನು (ಅಫಿಡವಿಟ್) ದೂರುದಾರರ ಸಮಾಧಾನಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಒಪ್ಪಿಕೊಂಡಿದ್ದಾರೆ. ಈ ಕುರಿತು ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ರಣವೀರ್ ಪರ ವಕೀಲರು ನ್ಯಾಯಾಲಯಕ್ಕೆ ಈ ಭರವಸೆ ನೀಡಿದ್ದಾರೆ. ಕಳೆದ ವರ್ಷ ಮಿಮಿಕ್ರಿ ಮಾಡಿದ್ದ ನಟ ಕಳೆದ ವರ್ಷ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

Read More
Crime Kerala Girl who was Missing Found Dead

CRIME: ಕೇರಳ ಬಾಲಕಿ ನಾಪತ್ತೆ ಪ್ರಕರಣ, ಮೃತದೇಹ ಪತ್ತೆ

ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (15) ಅವರ ಮೃತದೇಹ ಶುಕ್ರವಾರ (Crime) ಪತ್ತೆಯಾಗಿದೆ. ಅರಿಶಿನಗುಪ್ಪೆ ಬೆಟ್ಟದ ಸಾಲಿನ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದರೊಂದಿಗೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ. ಪೋಷಕರ ಜೊತೆ ಬಂದಿದ್ದ ಬಾಲಕಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಅವರು ತಮ್ಮ ಕುಟುಂಬದ ಸುಮಾರು 40 ಮಂದಿ ಸಂಬಂಧಿಕರ ಜೊತೆ ಪ್ರವಾಸಕ್ಕೆ…

Read More

Supreme Court: ಜಾತಿ ಗಣತಿ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ಅರ್ಜಿದಾರರ ಭಾಷೆಗೆ ಸಿಜೆಐ ಗರಂ

ನವದೆಹಲಿ: ದೇಶದಲ್ಲಿ ಮುಂಬರುವ ಜಾತಿ ಗಣತಿಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯಲ್ಲಿ ಬಳಸಿರುವ ಭಾಷೆಯ ಬಗ್ಗೆ ಅರ್ಜಿದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.‌ ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠದ ಮುಂದೆ ಈ ವಿಚಾರದ ಸುದೀರ್ಘ…

Read More
CM Siddaramaiah announces 5 lakh compensation

CM Siddaramaiah: ಹುಲಿಕಲ್‌ ಘಾಟ್‌ ಮಣ್ಣು ಕುಸಿತ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರು: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ಬಹಳ ದುಃಖವಾಯಿತು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಅವರು, ನನಗೆ ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು…

Read More
Crime dosa batter death case cops suspects parents

Crime: ಅಹಮದಾಬಾದ್ ಪುಟ್ಟ ಮಕ್ಕಳ ಸಾವು ಪ್ರಕರಣ: ದೋಸೆ ಹಿಟ್ಟಿನ ನಿಗೂಢತೆ ಬೆನ್ನತ್ತಿದ ಪೊಲೀಸರು

ಗುಜರಾತ್:‌ ಅಹಮದಾಬಾದ್‌ನ ಚಾಂದ್‌ಖೇಡಾದಲ್ಲಿ ದೋಸೆ ಸೇವಿಸಿದ ನಂತರ ಇಬ್ಬರು ಪುಟ್ಟ ಸಹೋದರಿಯರು ಮೃತಪಟ್ಟ ಘಟನೆ ಈಗ ತೀವ್ರ (Crime) ತನಿಖೆಗೆ ಒಳಪಟ್ಟಿದೆ. ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ (FSL) ತಂಡ ಹರಸಾಹಸ ಪಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವು ಮೃತ ಮಕ್ಕಳ ಮನೆಗೆ ಭೇಟಿ ನೀಡಿ, ಅಂದು ಬಳಸಿದ್ದ ಪಾತ್ರೆಗಳು, ಬಟ್ಟೆಗಳು, ಚಾಪೆ ಹಾಗೂ ಮಕ್ಕಳಿಗೆ ನೀಡಲಾಗಿದ್ದ ಔಷಧಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ. ಏನಿದು ಘಟನೆ?…

Read More
Elon Musk says he cant trust whatsapp

Elon Musk: ವಾಟ್ಸಾಪ್‌ ನಂಬಲು ಅರ್ಹವಲ್ಲ ಎಂದ ಎಲಾನ್‌ ಮಸ್ಕ್

ನವದೆಹಲಿ: ಖಾಸಗಿ ಸಂದೇಶಗಳ ರಕ್ಷಣೆ ವಿಚಾರದಲ್ಲಿ ವಾಟ್ಸಾಪ್ ತನ್ನ ಬಳಕೆದಾರರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂಬ ಆರೋಪದ ಮೇಲೆ ಮೆಟಾ ಕಂಪನಿಯು ಅಮೆರಿಕದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದೆ. ಈ ವಿವಾದ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಎಕ್ಸ್ ಮಾಲೀಕ ಎಲಾನ್ ಮಸ್ಕ್ (Elon Musk) ಅವರು ವಾಟ್ಸಾಪ್ ಅನ್ನು ನಂಬಬೇಡಿ ಎಂದು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್ ಸುರಕ್ಷಿತವಲ್ಲ ಎಂದು ಹೇಳಿರುವ ಮಸ್ಕ್, ಸುರಕ್ಷಿತ ಕರೆಗಳಿಗಾಗಿ ತಮ್ಮದೇ ಆದ ‘ಎಕ್ಸ್’ ವೇದಿಕೆಯನ್ನು ಬಳಸುವಂತೆ…

Read More
davangere and bagalkote by election voting percentage information

By Election: ದಾವಣಗೆರೆ-ಬಾಗಲಕೋಟೆ ಉಪಚುನಾವಣೆ, ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಮತದಾನ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ಬಾಗಲಕೋಟೆಯಲ್ಲಿ ಶೇ. 54.82 ಹಾಗೂ ದಾವಣಗೆರೆಯಲ್ಲಿ ಶೇ. 49.66 ರಷ್ಟು ದಾಖಲೆ ಪ್ರಮಾಣದ ಮತದಾನವಾಗಿದೆ. ಆರಂಭದಲ್ಲಿ ಮಂದಗತಿಯಲ್ಲಿದ್ದ ಪ್ರಕ್ರಿಯೆಯು ಮಧ್ಯಾಹ್ನವಾಗುತ್ತಿದ್ದಂತೆ ವೇಗ ಪಡೆದುಕೊಂಡಿದ್ದು, ಮತದಾರರು ಬಿಸಿಲನ್ನೂ ಲೆಕ್ಕಿಸದೆ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ….

Read More