TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Ram Mandir Donation Theft SC Proposes Reforming SIT Warns Against Politicisation

Ram Mandir: ಶ್ರೀರಾಮ ಮಂದಿರದ ಕಾಣಿಕೆ ಎಣಿಕೆಯಲ್ಲೇ ವಂಚನೆ, ಎಸ್‌ಐಟಿ ಮರುರಚನೆಗೆ ಸುಪ್ರೀಂ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ದೇಣಿಗೆ ಹಣ ಕಳ್ಳತನವಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಅತ್ಯಂತ ಸೂಕ್ಷ್ಮ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸರ್ವೋಚ್ಚ ನ್ಯಾಯಾಲಯ, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ತನ್ನ…

Read More
Karnataka Mining Department Shaken Up 80% Staff Shunted as CM Approves Mega Transfer of 160 Officers

DK Shivakumar: ದಶಕಗಳ ಠಿಕಾಣಿಗೆ ಬ್ರೇಕ್: ಗಣಿ ಇಲಾಖೆಯ ಶೇ. 80ರಷ್ಟು ಸಿಬ್ಬಂದಿಗೆ ಎತ್ತಂಗಡಿ ಭಾಗ್ಯ, ಅಧಿಕಾರಿಗಳು ಶಾಕ್!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ಏಕಸ್ವಾಮ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಡಳಿತಾತ್ಮಕ ಚಾಟಿ ಬೀಸಿದ್ದಾರೆ. ಒಂದೇ ಸ್ಥಳದಲ್ಲಿ ವರ್ಷಗಟ್ಟಲೆ ಠಿಕಾಣಿ ಹೂಡಿದ್ದ ಇಲಾಖೆಯ ಶೇಕಡಾ 80 ರಷ್ಟು ಸಿಬ್ಬಂದಿಯನ್ನು ಎತ್ತಂಗಡಿ ಮಾಡುವ ಮೂಲಕ ಸರ್ಕಾರ ಬೃಹತ್ ಸರ್ಜರಿ ನಡೆಸಿದೆ. ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಾದರಿಯಲ್ಲಿ ಒಟ್ಟು 160 ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು…

Read More
Monsoon Session Day 1 Disrupted High Stakes Protests Over NEET Scam Force Centre Into Mediation Mode CJP

CJP; ದಿಢೀರ್ ರಣರಂಗವಾದ ದೆಹಲಿ: ಸಂಸತ್ ಚಲೋ ರ್ಯಾಲಿಯಲ್ಲಿ ಹಿಂಸಾಚಾರ

ನವದೆಹಲಿ: ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಡಿ ಈಗ ರಾಜಧಾನಿ ದೆಹಲಿಯಲ್ಲಿ ಭಾರಿ ಹಿಂಸಾಚಾರಕ್ಕೆ ಕಾರಣವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭದ ದಿನವೇ ವಿವಿಧ ಸಂಘಟನೆಗಳು ಹಾಗೂ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ‘ಸಂಸತ್ ಭವನ ಚಲೋ’ ಪ್ರತಿಭಟನಾ ರ್ಯಾಲಿ ದೆಹಲಿಯ ರಸ್ತೆಗಳಲ್ಲಿ ರಣರಂಗ ಸೃಷ್ಟಿಸಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಜಂತರ್ ಮಂತರ್‌ನಿಂದ ಸಂಸತ್ತಿನತ್ತ ನುಗ್ಗಲು ಯತ್ನಿಸಿದ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರನ್ನು ಪೊಲೀಸರು…

Read More
Mohanlal Captures Electric Atmosphere at MetLife Stadium as Spain Clinches FIFA 2026 Title Over Argentina

Mohanlal: ಫಿಫಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಿದ ಸೂಪರ್‌ಸ್ಟಾರ್ ಮೋಹನ್‌ಲಾಲ್; ಕ್ರೀಡಾಂಗಣದ ರೋಚಕ ವಿಡಿಯೋ ವೈರಲ್!

ನ್ಯೂಯಾರ್ಕ್: ಮಲೆಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್‌ಲಾಲ್ (Mohanlal) ಅವರು ನ್ಯೂಯಾರ್ಕ್‌ನ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ 2026ರ ಫಿಫಾ ವಿಶ್ವಕಪ್ ಫುಟ್‌ಬಾಲ್ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದ ಸುತ್ತಲೂ ಇದ್ದ ಹಬ್ಬದಂತಹ ವಾತಾವರಣವನ್ನು ವಿಡಿಯೋ ಮಾಡುವ ಮೂಲಕ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಇತಿಹಾಸ ಪ್ರಸಿದ್ಧ ಸ್ಪೇನ್ ಮತ್ತು ಅರ್ಜೆಂಟೀನಾ ನಡುವಿನ ಮಹಾ ಸಮರವನ್ನು ವೀಕ್ಷಿಸಲು ವಿಶ್ವದಾದ್ಯಂತದ ಫುಟ್‌ಬಾಲ್ ಪ್ರೇಮಿಗಳು ಕ್ರೀಡಾಂಗಣದತ್ತ ಹರಿದು ಬರುತ್ತಿರುವುದನ್ನು ಈ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ….

Read More
Is Salman Khan Unwell Bollywood Star Witty Reply to Netizens Health Concerns via Instagram Post

Salman Khan: ಆರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸಿದವರಿಗೆ ಸಲ್ಮಾನ್ ಖಾನ್ ಟಾಂಗ್

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಸದಾ ತಮ್ಮ ನೇರ ನುಡಿಯಿಂದಲೇ ಸುದ್ದಿಯಲ್ಲಿರುವವರು. ಇತ್ತೀಚೆಗೆ ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಬಿಸಿಬಿಸಿ ಚರ್ಚೆಗಳಿಗೆ ಸಲ್ಲು ಭಾಯ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದು, ಇದು ಅವರ ಅಭಿಮಾನಿಗಳ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಫೋಟೋ ಶೇರ್‌ ಮಾಡಿಕೊಂಡ ನಟ ಭಾನುವಾರ ತಡರಾತ್ರಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಕೆಲವು ಬ್ಲಾಕ್ ಆಂಡ್ ವೈಟ್ ಫೋಟೋಗಳನ್ನು ಹಂಚಿಕೊಂಡಿರುವ ಸಲ್ಮಾನ್ ಖಾನ್, “ನಿಮ್ಮೆಲ್ಲರ ಆರೋಗ್ಯ ಹೇಗಿದೆ?”…

Read More
Annu Kapoor Lashes Out Over Sai Pallavis Casting as Sita

Annu Kapoor: ರಾಮಾಯಣದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡೋದಕ್ಕೆ ಅನ್ನು ಕಪೂರ್ ಕಿಡಿ

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದರ ಕುರಿತು ಬಾಲಿವುಡ್‌ನ ಹಿರಿಯ ನಟ ಅನ್ನು ಕಪೂರ್ (Annu Kapoor) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಮಾಯಣದಂತಹ ಮಹಾಕಾವ್ಯಗಳನ್ನು ಮತ್ತೆ ಸಿನಿಮಾ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದ ಅನ್ನು ಕಪೂರ್, ಈಗ ಚಿತ್ರದ ಪಾತ್ರಧಾರಿಗಳ ಆಯ್ಕೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಸೀತೆಯ ಪಾತ್ರಕ್ಕೆ ಯಾರನ್ನ ಆಯ್ಕೆ ಮಾಡಿದ್ದಾರೆ? ಮಾಧ್ಯಮ…

Read More
RSS Affiliates Got 670 Cr ONGC Funds Despite No Registration Claim BK Hariprasad Demands Accountability

RSS: ನೋಂದಣಿ ಬೇಡ ಎಂದಿದ್ದ ಆರ್‌ಎಸ್‌ಎಸ್ ಅಂಗಸಂಸ್ಥೆಗಳಿಗೆ ಸರ್ಕಾರದ ಒಎನ್‌ಜಿಸಿಯಿಂದ 670 ಕೋಟಿ ಸಿಎಸ್‌ಆರ್ ನಿಧಿ! ತನಿಖಾ ವರದಿ ಬಹಿರಂಗ

ದೆಹಲಿ: ಆರ್‌ಎಸ್‌ಎಸ್ (RSS) ಸಂಘಟನೆಯನ್ನು ಕಾನೂನಾತ್ಮಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಸರ್ಕಾರದಿಂದ ಧನಸಹಾಯ ಪಡೆಯುವವರಿಗೆ ಮಾತ್ರ ನೋಂದಣಿ ಬೇಕು ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಆರ್‌ಎಸ್‌ಎಸ್ ಒಕ್ಕೂಟಕ್ಕೆ ಸೇರಿದ ನೋಂದಾಯಿತ ಸಂಸ್ಥೆಗಳು ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ದೇಣಿಗೆ ರೂಪದಲ್ಲಿ ಪಡೆಯುತ್ತಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದೆ. ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC), ಆರ್‌ಎಸ್‌ಎಸ್ ಸಂಪರ್ಕ…

Read More