TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Crime Shikaripura Missing Case Twist Teen's Body Packed in Suitcase

Crime: ಶಿಕಾರಿಪುರದಲ್ಲಿ ಬಯಲಾಯ್ತು ಒಂದು ವರ್ಷದ ಹಿಂದಿನ ಕರಾಳ ರಹಸ್ಯ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ವರ್ಷದ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಕ್ತ ಹೆಪ್ಪುಗಟ್ಟಿಸುವ ಸತ್ಯವೊಂದು ಪೊಲೀಸರ (Crime) ತನಿಖೆಯಿಂದ ಹೊರಬಿದ್ದಿದೆ. ತಂಗಿದ್ದ ಪಿಜಿಯಲ್ಲೇ (PG) ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿಯ ಶವವನ್ನು, ತಮ್ಮ ಮರ್ಯಾದೆ ಉಳಿಸಿಕೊಳ್ಳುವ ಭೀತಿಯಿಂದ ದೊಡ್ಡ ಸೂಟ್‌ಕೇಸ್‌ನಲ್ಲಿ ಪ್ಯಾಕ್ ಮಾಡಿ ಪ್ರಪಾತಕ್ಕೆ ಎಸೆದು ಬಂದಿದ್ದ ಕೃತ್ಯ ಒಂದು ವರ್ಷದ ಬಳಿಕ ಅನಾವರಣಗೊಂಡಿದೆ. ಸಾಕ್ಷಿ ನಾಶ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಇಟ್ಟಿಗೆಹಳ್ಳಿಯ ಮುದ್ದನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ…

Read More
Death Threat to MLA Pradeep Eshwar Karnataka HC Pauses Probe Against HDK Fans Questions FIR

Pradeep Eshwar: ಪ್ರದೀಪ್ ಈಶ್ವರ್‌ಗೆ ಜೀವಬೆದರಿಕೆ ಹಾಕಿದ ಕೇಸ್: ಎಚ್‌ಡಿಕೆ ಬೆಂಬಲಿಗರಿಗೆ ಹೈಕೋರ್ಟ್‌ನಲ್ಲಿ ರಿಲೀಫ್, ತನಿಖೆಗೆ ಮಧ್ಯಂತರ ತಡೆ!

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (‌Pradeep Eshwar) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ಹೈಕೋರ್ಟ್‌ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ಮುಂದಿನ ತನಿಖೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಪೊಲೀಸರಿಗೆ ನೋಟಿಸ್ ತಮ್ಮ ವಿರುದ್ಧ ಚಿಕ್ಕಬಳ್ಳಾಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ…

Read More
No Govt Interference in SIT Process Dr G Parameshwara

SIR: ಎಸ್‌ಐಆರ್‌ನಲ್ಲಿ ಸರ್ಕಾರದ ಕೈವಾಡವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ತುಮಕೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಭಾರತೀಯ ಚುನಾವಣಾ ಆಯೋಗದ (ECI) ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿದ್ದು, ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಗೊಂದಲ, ಬಿಎಲ್‌ಒಗಳ ಕರ್ತವ್ಯ ಲೋಪ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿವಾದದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು,…

Read More
KRS Inflow Rises, But Farmers Take Up 'Whip Protest' For Irrigation Water

KRS: ವರುಣನ ಕೃಪೆಯಿಂದ ಜಲಾಶಯಗಳಿಗೆ ಜೀವಕಳೆ: ಕೆಆರ್‌ಎಸ್ ಒಳಹರಿವು ಹೆಚ್ಚಿದ್ರೂ ನೀರಿಗಾಗಿ ರೈತರ ‘ಚಾವಟಿ ಚಳುವಳಿ’!

ಮಂಡ್ಯ/ಶ್ರೀರಂಗಪಟ್ಟಣ: ರಾಜ್ಯದಾದ್ಯಂತ ತೀವ್ರ ಕಾಯುವಿಕೆಯ ನಂತರ ಮುಂಗಾರು ಮಳೆ ಬಿರುಸುಗೊಂಡಿದ್ದು, ಬತ್ತಿ ಹೋಗಿದ್ದ ಜಲಾಶಯಗಳಿಗೆ ಹೊಸ ಜೀವಕಳೆ ಬಂದಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಕಳೆದ ಆರು ತಿಂಗಳಿನಿಂದ ಕುಸಿದಿದ್ದ ಒಳಹರಿವು ಇದೀಗ 5,734 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದಾಗಿ ಡ್ಯಾಂ ನೀರಿನ ಮಟ್ಟ 82.45 ಅಡಿಗೆ ತಲುಪಿದ್ದು, ಸದ್ಯ ಕುಡಿಯುವ ನೀರು ಹಾಗೂ ನಾಲೆಗಳಿಗಾಗಿ 777 ಕ್ಯೂಸೆಕ್ ನೀರನ್ನು…

Read More
Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More
FIFA World Cup 2026 Egypt coach Hossam Hassan announces boycott

FIFA World Cup: ರೋಚಕ ಪಂದ್ಯದಲ್ಲಿ ಅರ್ಜೆಂಟೀನಾಗೆ ಒಲಿದ ಜಯ; ‘ಫೇರ್ ಪ್ಲೇ’ ಉಲ್ಲಂಘನೆಯಾಗಿದೆ ಎಂದು ಗುಡುಗಿದ ಈಜಿಪ್ಟ್ ತರಬೇತುದಾರ!

ಈಜಿಪ್ಟ್‌: ಫಿಫಾ ವಿಶ್ವಕಪ್‌ನ (FIFA World Cup) ಜಾಗತಿಕ ವೇದಿಕೆಯನ್ನು ಬಳಸಿಕೊಂಡಿರುವ ಈಜಿಪ್ಟ್ ಫುಟ್‌ಬಾಲ್ ತಂಡದ ಮುಖ್ಯ ತರಬೇತುದಾರ್ ಹೊಸಾಮ್ ಹಸನ್, ಗಜಾದಲ್ಲಿ ಪ್ಯಾಲೇಸ್ಟಿನಿಯನ್ ಜನರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಪ್ಯಾಲೇಸ್ಟಿನಿಯನ್ನರ ಸಂಕಷ್ಟವನ್ನು “ವಿಶ್ವಕ್ಕೇ ನಾಚಿಕೆಗೇಡು” ಎಂದು ಬಣ್ಣಿಸಿರುವ ಅವರು, ಅವರ ಧ್ವನಿಯಾಗಲು ಫುಟ್‌ಬಾಲ್ ಸಂಸ್ಥೆಗಳು, ಕ್ರೀಡಾಪಟುಗಳು ಮತ್ತು ಮಾಧ್ಯಮಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಟ್ಲಾಂಟಾದಲ್ಲಿ ಅರ್ಜೆಂಟೀನಾ ವಿರುದ್ಧ ನಡೆಯಲಿರುವ ಈಜಿಪ್ಟ್‌ನ ಪ್ರಮುಖ ಪಂದ್ಯಕ್ಕೂ ಮುನ್ನ ನಡೆದ…

Read More
Badrinath Temple Donation Scam CM Dhami Orders High Level Probe Senior Official Suspended

Badrinath: ಬದರಿನಾಥ ಧಾಮದ ಕಾಣಿಕೆ ಎಣಿಕೆಯಲ್ಲಿ ಭಾರಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ, ಹಿರಿಯ ಅಧಿಕಾರಿ ಸಸ್ಪೆಂಡ್!

ಉತ್ತರಾಖಂಡ: ಇಲ್ಲಿನ ಪ್ರಸಿದ್ಧ ಬದರಿನಾಥ (Badrinath) ದೇವಸ್ಥಾನಕ್ಕೆ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳ ಎಣಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಉತ್ತರಾಖಂಡ ಸರ್ಕಾರವು ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್ ಸಿಂಗ್ ಗರ್ಬಿಯಾಲ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಗರ್ವಾಲ್ ಕಮಿಷನರ್ ಆನಂದ್ ಸ್ವರೂಪ್ ನೇತೃತ್ವದ ಈ ಸಮಿತಿಯು…

Read More