TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
kangana ranut shares important message to women regarding safety

Kangana Ranaut: ವರದಕ್ಷಿಣೆ ಕಿರುಕುಳದ ದುರಂತಗಳ ಬೆನ್ನಲ್ಲೇ ಹೆಣ್ಣುಮಕ್ಕಳಿಗೆ ಕಂಗನಾ ಮಹತ್ವದ ಕಿವಿಮಾತು: ಮೊದಲು ಆರ್ಥಿಕ ಸ್ವಾವಲಂಬನೆ, ಆಮೇಲೆ ಮದುವೆ!

ಮುಂಬೈ: ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಭೋಪಾಲ್ ಹಾಗೂ ನೋಯ್ಡಾದ ವರದಕ್ಷಿಣೆ ದೌರ್ಜನ್ಯ ಮತ್ತು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳ ಬೆನ್ನಲ್ಲೇ, ಖ್ಯಾತ ನಟಿ ಹಾಗೂ ಸಂಸದೆ ಕಂಗನಾ ರನೌತ್ (Kangana Ranaut) ಅವರು ಹೆಣ್ಣುಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖ ಸಂದೇಶವೊಂದನ್ನು ನೀಡಿದ್ದಾರೆ. ಮಹಿಳೆಯರು ಮದುವೆಗಿಂತ ಮುಂಚಿತವಾಗಿ ಆರ್ಥಿಕವಾಗಿ ತಮ್ಮ ಕಾಲಿನ ಮೇಲೆ ನಿಲ್ಲುವುದರ ಕಡೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿರುವ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ….

Read More
bollywood deepika padukone shooting add in Bengaluru

Deepika Padukone: ದಕ್ಷಿಣ ಆಫ್ರಿಕಾದಿಂದ ಬಂದ ಬೆನ್ನಲ್ಲೇ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ ದೀಪಿಕಾ ಪಡುಕೋಣೆ: ವಿಡಿಯೋ ವೈರಲ್

ಬೆಂಗಳೂರು: ಬಾಲಿವುಡ್‌ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಗರ್ಭಿಣಿಯಾಗಿದ್ದರೂ ತಮ್ಮ ವೃತ್ತಿಬದುಕಿನಲ್ಲಿ ಸಖತ್ ಬ್ಯುಸಿಯಾಗಿದ್ದು, ವಿಶ್ರಾಂತಿ ಪಡೆಯದೆ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ನಟ ಶಾರುಖ್ ಖಾನ್ ಜೊತೆಗಿನ ‘ಕಿಂಗ್’ ಚಿತ್ರದ ಪ್ರಮುಖ ಶೂಟಿಂಗ್ ಶೆಡ್ಯೂಲ್ ಮುಗಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದ ದೀಪಿಕಾ, ಇದೀಗ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಈ ಶೂಟಿಂಗ್ ಸೆಟ್‌ನ ತೆರೆಮರೆಯ ವಿಡಿಯೋವೊಂದು ಲೀಕ್…

Read More
bjp state president related discussion started

BJP: ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟಕ್ಕಾಗಿ ಶ್ರೀರಾಮುಲು ಭರ್ಜರಿ ಲಾಬಿ: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶುರುವಾಯ್ತು ಪೈಪೋಟಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಸದ್ಯಕ್ಕೆ ಸದ್ದಿಲ್ಲದೆಯೇ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಮೂರು ವರ್ಷಗಳ ಅಧಿಕಾರಾವಧಿಯು 2026ರ ನವೆಂಬರ್‌ಗೆ ಕೊನೆಗೊಳ್ಳಲಿದ್ದು, ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಾಜಿ ಸಚಿವ ಬಿ. ಶ್ರೀರಾಮುಲು ಈ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಸಾರಥ್ಯ ವಹಿಸಿಕೊಳ್ಳಲು ಅವರು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಶ್ರೀರಾಮುಲು ಬೇಡಿಕೆಗಳ ಸರಮಾಲೆ ಬಿಜೆಪಿ…

Read More
dk shivakumar accepted debate challenge by hd kumara swamy

DK Shivakumar: ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…

Read More
crime bengaluru police arrested 8 drug peddlers

Crime: ದೆಹಲಿ-ಬೆಂಗಳೂರು ಅಂತರರಾಜ್ಯ ಡ್ರಗ್ಸ್ ಜಾಲದ 8 ಪೆಡ್ಲರ್‌ಗಳ ಬಂಧನ, 34 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿಯ ಹೆಬ್ಬಾಳ ಠಾಣೆಯ (Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಮೂರು ಹಂತಗಳಲ್ಲಿ (ಲೇಯರ್ಸ್) ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಡ್ರಗ್ಸ್ ಸಾಗಾಟಕ್ಕೆ ಕಲ್ಪನಾತೀತ ದಾರಿಗಳನ್ನು ಕಂಡುಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಿಫ್ಟ್ ಬಾಕ್ಸ್,…

Read More
belagavi shivam associates owner link with film industry

Belagavi: ವಂಚಕನ ಸಿನಿಮಾದಲ್ಲಿ ಕುಣಿದಿದ್ದ ಸನ್ನಿ ಲಿಯೋನ್: ಹುಬ್ಬಳ್ಳಿಯ ಶಿವಾನಂದ್ ನೀಲಣ್ಣನವರ್ ಅಸಲಿ ಮುಖ ಬಯಲು

ಹುಬ್ಬಳ್ಳಿ: ಕರ್ನಾಟಕವನ್ನೇ ಬೆಚ್ಚಿಬೀಳಿಸಿರುವ ಸುಮಾರು 4500 ಕೋಟಿ ರೂಪಾಯಿಗಳ ದೋಖಾ ಹಗರಣದ ಮುಖ್ಯ ಸೂತ್ರಧಾರಿ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ್ ನೀಲಣ್ಣನವರ್‌ಗೆ (Belagavi) ಸ್ಯಾಂಡಲ್‌ವುಡ್ ಹಾಗೂ ಬಾಲಿವುಡ್‌ನ ಗ್ಲಾಮರ್ ಲೋಕದ ಜೊತೆಗಿದ್ದ ನಂಟು ಈಗ ಬಯಲಾಗಿದೆ. ತಲಾ ಲೋಕದ ಹೂಡಿಕೆದಾರರಿಂದ ಹಿಡಿದು ಸಾಮಾನ್ಯ ಜನರವರೆಗೂ ಸುಮಾರು 35 ಸಾವಿರಕ್ಕೂ ಹೆಚ್ಚು ಜನರಿಗೆ ನಾಮ ಇಟ್ಟು ಜೈಲು ಪಾಲಾಗಿರುವ ಈ ವಂಚಕ, ಲೂಟಿ ಮಾಡಿದ ದುಡ್ಡಿನಲ್ಲಿ ಐಷಾರಾಮಿ ಜೀವನದ ಜೊತೆಗೆ ಸಿನಿಮಾ ರಂಗದಲ್ಲೂ ಕೈಯಿಟ್ಟಿದ್ದ ಎಂಬ ಇಂಟ್ರೆಸ್ಟಿಂಗ್ ಮಾಹಿತಿ…

Read More
virat kohli shares about his panic attack and thanked rahul Dravid

Virat Kohli: ವಿರಾಟ್ ಕೊಹ್ಲಿ ಮಾನಸಿಕ ಹೋರಾಟದ ಕಹಿಸತ್ಯ ಬಹಿರಂಗ: ಕಠಿಣ ಸಮಯದಲ್ಲಿ ನೆರವಾದ ದ್ರಾವಿಡ್‌ಗೆ ‘ಕಿಂಗ್’ ಕೃತಜ್ಞತೆ

ಬೆಂಗಳೂರು: ಕ್ರಿಕೆಟ್ ಮೈದಾನದಲ್ಲಿ ಸದಾ ರಗಡ್ ಆಗಿ ಕಾಣಿಸುವ ರನ್ ಮಷೀನ್ ವಿರಾಟ್ ಕೊಹ್ಲಿ (Virat Kohli) ಕೂಡ ತಮ್ಮ ವೃತ್ತಿಜೀವನದಲ್ಲಿ ತೀವ್ರವಾದ ಮಾನಸಿಕ ಒತ್ತಡ ಮತ್ತು ಆತಂಕವನ್ನು ಎದುರಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಯಶಸ್ಸಿನ ಉತ್ತುಂಗದಲ್ಲಿರುವ ಕ್ರೀಡಾಪಟುಗಳು ಸದಾ ಮಾನಸಿಕವಾಗಿ ಸದೃಢರಾಗಿರುತ್ತಾರೆ ಎಂಬ ಸಾರ್ವಜನಿಕರ ನಂಬಿಕೆಯನ್ನು ಸುಳ್ಳು ಮಾಡಿರುವ ಕೊಹ್ಲಿ, ತಮ್ಮ ಕಷ್ಟದ ದಿನಗಳಲ್ಲಿ ತಮಗೆ ಬೆನ್ನೆಲುಬಾಗಿ ನಿಂತ ಟೀಮ್ ಇಂಡಿಯಾದ ಮಾಜಿ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ….

Read More