Nirmala Sitharaman submits financial amendments

Nirmala Sitharaman: ಹಣಕಾಸು ಮಸೂದೆ ಪರಿಗಣನೆ ಮಂಡನೆ ಮಾಡಿದ ವಿತ್ತ ಸಚಿವೆ

ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು 2026ರ ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ.  ಆರ್ಥಿಕ ಬೆಳವಣಿಗೆ ಆದ್ಯತೆ ಈ ಮಸೂದೆ 2026-27ರ ಹಣಕಾಸು ವರ್ಷಕ್ಕೆ ಕೇಂದ್ರ ಸಕಾರದ ಹಣಕಾಸು ಪ್ರಸ್ತಾವನೆಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.ಈ ವೇಳೆ ನಿರ್ಮಲಾ ಸೀತಾರಾಮನ್ , ವಿಧೇಯಕ,  2026-27ನೇ ಸಾಲಿನ ಸರ್ಕಾರದ ವಿತ್ತೀಯ ಯೋಜನೆಗಳನ್ನು ಒಳಗೊಂಡಿದ್ದು, ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂಎಲ್ಲರನ್ನೊಳಗೊಂಡ ಅಭಿವೃದ್ಧಿಯ ಪ್ರಮುಖ ಪ್ರಸ್ತಾವನೆಗಳಿಗೆ ಆದ್ಯತೆ ನೀಡಿದೆ ಎಂದರು. ಬಳಿಕ  ಕಾಂಗ್ರೆಸ್ ಸದಸ್ಯ…

Read More
Male Mahadeshwara rathotsava ended

Male Mahadeshwara: ವಿಜೃಂಭಣೆಯಿಂದ ನಡೆದ ಮಲೆ ಮಹದೇಶ್ವರ ರಥೋತ್ಸವ

ಚಾಮರಾಜನಗರ:  ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ (Male Mahadeshwara) ಬೆಟ್ಟದಲ್ಲಿ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಕಳೆದ ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ರಥೋತ್ಸವದ ಮೂಲಕ ತೆರೆಬಿದ್ದಿತು. ಜಿಲ್ಲಾಡಳಿತದಿಂದ ಅದ್ಭುತ ವ್ಯವಸ್ಥೆ  ರಾಜ್ಯ ಹಾಗೂ ತಮಿಳುನಾಡು ಭಾಗದಿಂದ ಬಂದಿದ್ದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ದಾಸೋಹ ವ್ಯವಸ್ಥೆಯನ್ನು ಜಿಲ್ಲಾಡಳಿತ ವ್ಯವಸ್ಥಿತವಾಗಿ ಮಾಡಿತ್ತು. ಯುಗಾದಿ ಹಬ್ಬದ ದಿನದಂದು ಚಾಮರಾಜನಗರ ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದರು. ಎತ್ತುಗಳು, ಎತ್ತಿನಬಂಡಿಗೆ ಅಲಂಕಾರ ಮಾಡಿ…

Read More
Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More
Karnataka By Election congress high command decision is final says dk shivakumar

By Election: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ (By Election) ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  ಮುಖ್ಯಮಂತ್ರಿಗಳ ಜೊತೆ ಚರ್ಚೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
CM Siddaramaiah letter to central government regarding LPG issue

CM Siddaramaiah: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯಕ್ಕೆ ಸೂಕ್ತ ರೀತಿಯಲ್ಲಿ ವಾಣಿಜ್ಯ ಹಾಗೂ ಆಟೋ ಎಲ್‌ಪಿಜಿ ಹಂಚಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ. ಗೃಹ ಬಳಕೆಗೆ ಆದ್ಯತೆ ನೀಡಿರುವ ರಾಜ್ಯ ಸಚಿವಾಲಯದ ನಿರ್ದೇಶನದಂತೆ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿಜಿ ಪೂರೈಕೆಗೆ ಆದ್ಯತೆ ನೀಡಿರುವುದರಿಂದ ವಾಣಿಜ್ಯ ಎಲ್‌ಪಿಜಿ ಸಿಗದಂತಾಗಿದೆ. ರೆಸ್ಟೋರೆಂಟ್, ಹೋಟೆಲ್, ಪಿಜಿ ಮತ್ತಿತರರಿಂದ 50 ಸಾವಿರ ಎಲ್ ಪಿಜಿ…

Read More
West Asia war minister meeting regarding sea transport

War: ಮಧ್ಯ ಪ್ರಾಚ್ಯ ಸಂಘರ್ಷ, ಕೇಂದ್ರ ಜಲ ಸಾರಿಗೆ ಸಚಿವರ ಸಭೆ

ನವದೆಹಲಿ: ಮಧ್ಯ ಪ್ರಾಚ್ಯ ಸಂಘರ್ಷದ (War) ಹಿನ್ನೆಲೆಯಲ್ಲಿ ಸಾಗರಯಾನ ಹಾಗೂ ವ್ಯಾಪಾರ ವಹಿವಾಟುಗಳನ್ನು ನಿರ್ವಿಘ್ನವಾಗಿ ನಡೆಸಲು ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಕೇಂದ್ರ ಬಂದರು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ  ಬಂದರು ಮತ್ತು ಸಮುದ್ರ ಯಾನದ ಬಾಧ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.  ಜಾಗತಿಕ ಸರಬರಾಜನ್ನು ಸಕ್ರಿಯವಾಗಿ ಕಾಯ್ದುಕೊಳ್ಳಲು ಅನುಸರಿಸಬೇಕಾದ ಪ್ರಮಾಣಿತ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.  ಸರಕು ಸಾಗಾಣಿಕೆದಾರರು, ಬಂದರುಗಳ ನಿರ್ವಾಹಣೆಗಾರರು ಮತ್ತು ವ್ಯಾಪಾರ…

Read More