TOP NEWS
Narendra modi talks in parliament regarding women reservation

Narendra Modi: ಮೀಸಲಾತಿ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ: ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…

Read More
cyber fraud delhi police arrested accused

Cyber Fraud: ಮದುವೆ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ಅಂದರ್

ನವದೆಹಲಿ: ದೇಶಾದ್ಯಂತ ಡೇಟಿಂಗ್ ಆ್ಯಪ್‌ಗಳ ಮೂಲಕ ಮಹಿಳೆಯರನ್ನು ನಂಬಿಸಿ, ಭಾವನಾತ್ಮಕವಾಗಿ ವಂಚಿಸುತ್ತಿದ್ದ 35 ವರ್ಷದ ಕಿಲಾಡಿ ಆನಂದ್ ಕುಮಾರ್ ಎಂಬಾತನನ್ನು ದೆಹಲಿ (Cyber Fraud) ಪೊಲೀಸರು ಬಂಧಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಮಹಿಳೆಯರಿಗೆ ಮದುವೆಯ ಸುಳ್ಳು ಭರವಸೆ ನೀಡಿ 2 ಕೋಟಿ ರೂಪಾಯಿಗೂ ಅಧಿಕ ಹಣ ಪೀಕಿದ್ದ ಈತನ ಬಣ್ಣದ ಬದುಕು ಈಗ ಜೈಲು ಪಾಲಾಗಿದೆ. ಹತ್ತಾರು ಮುಖವಾಡ, ನೂರಾರು ವಂಚನೆ: ಆರೋಪಿ ಆನಂದ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹತ್ತಾರು ನಕಲಿ ಪ್ರೊಫೈಲ್‌ಗಳನ್ನು ಹೊಂದಿದ್ದ. ತಾನು ದೊಡ್ಡ…

Read More
Breaking Terrorist Amir Hamza shot in Lahore

BREAKING: ಮೋಸ್ಟ್ ವಾಂಟೆಡ್ ಉಗ್ರ ಅಮೀರ್ ಹಮ್ಜಾ ಮೇಲೆ ಭೀಕರ ಗುಂಡಿನ ದಾಳಿ

ಲಾಹೋರ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಸದಸ್ಯ ಅಮೀರ್ ಹಮ್ಜಾ ಮೇಲೆ ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು (Breaking) ಗುಂಡಿನ ದಾಳಿ ನಡೆಸಿದ್ದಾರೆ. ಲಾಹೋರ್‌ನ ಹಮ್ದರ್ದ್ ಚೌಕ್ ಬಳಿಯ ಸುದ್ದಿ ವಾಹಿನಿಯೊಂದರ ಕಚೇರಿಯ ಹೊರಗೆ ಈ ಘಟನೆ ನಡೆದಿದ್ದು, ಸದ್ಯ ಹಮ್ಜಾನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ದಾಳಿ ನಡೆಸಿದ್ದ ಉಗ್ರ ಲಷ್ಕರ್ ಸಂಘಟನೆಯ ಮತ್ತೊಬ್ಬ ಕುಖ್ಯಾತ ಉಗ್ರ ಹಫೀಜ್ ಸಯೀದ್…

Read More
Karnataka 12 MLA meets randeep surjewala regarding cabinet expansion

Cabinet: ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಿದ 12 ಶಾಸಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ (Cabinet) ಪುನಾರಚನೆಯ ಚರ್ಚೆಗಳು ಮತ್ತೊಮ್ಮೆ ತೀವ್ರಗೊಂಡಿವೆ. ತಮಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರ ತಂಡ, ಸಂಪುಟದಲ್ಲಿ ಬದಲಾವಣೆ ತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಟಿ.ಬಿ. ಜಯಚಂದ್ರ, ಅಶೋಕ್ ಪಟ್ಟಣ್, ರಾಘವೇಂದ್ರ ಹಿಟ್ನಾಳ್…

Read More
Vinod Kambli Has Brain Clot friend revealed shocking truth

Vinod Kambli: ವಿನೋದ್ ಕಾಂಬ್ಳೆಗೆ ಕಾಡುತ್ತಿದೆಯಂತೆ ಈ ರೋಗ

ಮುಂಬೈ: ಭಾರತೀಯ ಕ್ರಿಕೆಟ್‌ನ ಹಿರಿಯ ಆಟಗಾರ ವಿನೋದ್ ಕಾಂಬ್ಳೆ (Vinod Kambli) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಸದ್ಯ ಅವರು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ (Brain Clot) ಸಮಸ್ಯೆಯಿಂದ ಬಳಲುತ್ತಿದ್ದು, ಮುಂದಿನ ದಿನಗಳಲ್ಲಿ ಪಾರ್ಶ್ವವಾಯು (Brain Stroke) ಸಂಭವಿಸುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಈ ಆತಂಕಕಾರಿ ವಿಷಯವನ್ನು ಅವರ ಆಪ್ತ ಗೆಳೆಯ ಮಾರ್ಕಸ್ ಕೌಟೊ ಬಹಿರಂಗಪಡಿಸಿದ್ದಾರೆ. ಮರೆಯಾಗುತ್ತಿದೆ ನೆನಪಿನ ಶಕ್ತಿ: ಕಳೆದ ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಕಾಂಬ್ಳೆ ಅವರಿಗೆ ನೆನಪಿನ ಶಕ್ತಿ ಕುಂದುತ್ತಿದ್ದು, ದೇಹದ…

Read More
China is not suppling weapon to iran says Donald trump

Donald Trump: ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿಲ್ಲ ಎಂದು ಟ್ರಂಪ್‌ಗೆ ಭರವಸೆ ನೀಡಿದ ಚೀನಾ

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆಯೇ ಜಾಗತಿಕ ಮಟ್ಟದ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದೆ. ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್ ಅವರು ಇರಾನ್‌ಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿಲ್ಲ ಎಂದು ತಮಗೆ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. “ಚೀನಾ ಮತ್ತು ಇಡೀ ಜಗತ್ತಿಗಾಗಿ ನಾನು ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದ್ದೇನೆ, ಇದಕ್ಕಾಗಿ ಜಿನ್‌ಪಿಂಗ್ ನನ್ನನ್ನು ಭೇಟಿಯಾದಾಗ ಪ್ರೀತಿಯಿಂದ ಅಪ್ಪಿಕೊಳ್ಳಲಿದ್ದಾರೆ” ಎಂದು ಟ್ರಂಪ್ (Donald Trump) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರ ವ್ಯವಹಾರದ ಮೂಲಕ ಸಂಧಾನ:…

Read More
Commander In Grief Iran Cheeky Job application to Italy

IRAN: ಇಟಲಿಗೆ ‘ಬೆಸ್ಟ್ ಫ್ರೆಂಡ್’ ಆಗಲು ಇರಾನ್ ಆಫರ್

ನವದೆಹಲಿ: ಅಂತರಾಷ್ಟ್ರೀಯ ರಾಜತಾಂತ್ರಿಕ ವಲಯದಲ್ಲಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ವಾಕ್ಸಮರ ಸಂಚಲನ ಸೃಷ್ಟಿಸಿದೆ. ಪೋಪ್ ಲಿಯೋ XIV ಅವರ ಶಾಂತಿ ಮಂತ್ರವನ್ನು ಬೆಂಬಲಿಸಿದ್ದಕ್ಕಾಗಿ ಮೆಲೋನಿ ವಿರುದ್ಧ ಟ್ರಂಪ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬೆಳವಣಿಗೆಯಿಂದಾಗಿ ಉಭಯ ನಾಯಕರ ಸ್ನೇಹದಲ್ಲಿ ಬಿರುಕು ಮೂಡಿದ್ದು, ಇದೇ ಸಮಯ ಕಾದು ಕುಳಿತಿದ್ದ ಇರಾನ್ (Iran), ಇಟಲಿಗೆ ಫ್ರೆಂಡ್‌ಶಿಪ್ ಆಫರ್ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ವಾಷಿಂಗ್ಟನ್ ಸ್ಥಾನಕ್ಕೆ ಇರಾನ್…

Read More