Crime: ಕೊಪ್ಪಳದಲ್ಲಿ ಘೋರ ದುರಂತ: ಸೇತುವೆ ಗೋಡೆ ಮುರಿದು ನದಿಗೆ ಉರುಳಿದ ಟ್ರ್ಯಾಕ್ಟರ್
ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ರಕ್ತಸಿಕ್ತ ಅಧ್ಯಾಯವೊಂದು ಸಂಭವಿಸಿದೆ. ತುಂಗಭದ್ರಾ ನದಿಯ ಸೇತುವೆಯ ಮೇಲೆ ವೇಗವಾಗಿ (Crime) ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಹತೋಟಿ ತಪ್ಪಿ, ರಕ್ಷಣಾ ಗೋಡೆಯನ್ನು ಅಪ್ಪಳಿಸಿ ನೇರವಾಗಿ ಕೆಳಕ್ಕೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ದುರ್ದೈವಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಲುಗಿ ಹೋದ ಜೀವಗಳು: ವಾಹನವು ಎತ್ತರದಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಟ್ರ್ಯಾಕ್ಟರ್ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿರುವ ಶಂಕೆ ವ್ಯಕ್ತವಾಗಿದ್ದು, ಕೆಳಕ್ಕೆ ಉರುಳಿದಾಗ…
