TOP NEWS
State Politics samarth mallikarjun and umesh meti took oath

Politics: ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಮಲ್ಲಿಕಾರ್ಜುನ್ ಪ್ರಮಾಣ ವಚನ: ಸಂಪುಟ ಪುನಾರಚನೆಯ ಸುಳಿವು ನೀಡಿದ ಸಿಎಂ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (Politics) ಇಂದು ಮಹತ್ವದ ವಿದ್ಯಮಾನಗಳು ಜರುಗಿದ್ದು, ಇತ್ತೀಚಿನ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ನೂತನ ಶಾಸಕರು ಅಧಿಕೃತವಾಗಿ ಶಾಸನಸಭೆ ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡುವ ಮೂಲಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ನೂತನ ಶಾಸಕರ ಪದಗ್ರಹಣ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ದಾವಣಗೆರೆ ದಕ್ಷಿಣದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಶಾಸಕರಾಗಿ ಪ್ರಮಾಣ…

Read More
Kollywood karuppu film morning show cancelled

Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು

ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…

Read More
kerala vd satheesan selected as cm from congress high command

Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್‌ನಿಂದ ಹಿಂದೆ ಸರಿದ ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?

ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…

Read More
japan and south Korea using AI robotic monks

Japan: ಆಧ್ಯಾತ್ಮಿಕ ಲೋಕದಲ್ಲಿ ಎಐ ಕ್ರಾಂತಿ: ಜಪಾನ್ ಮತ್ತು ದಕ್ಷಿಣ ಕೊರಿಯಾದಲ್ಲಿ ‘ರೋಬೋಟ್ ಸನ್ಯಾಸಿ’ಗಳ ಧರ್ಮ ಬೋಧನೆ!

ಟೋಕಿಯೋ: ಆಧ್ಯಾತ್ಮಿಕ ಲೋಕದಲ್ಲಿ ಈಗ ಕೃತಕ ಬುದ್ಧಿಮತ್ತೆಯ (AI) ಹೊಸ ಶಕೆ ಆರಂಭವಾಗಿದೆ. ಜಪಾನ್ (Japan) ಮತ್ತು ದಕ್ಷಿಣ ಕೊರಿಯಾದ ಬೌದ್ಧ ಮಂದಿರಗಳಲ್ಲಿ ಮನುಷ್ಯರ ಬದಲಿಗೆ ರೋಬೋಟ್‌ಗಳೇ ಧರ್ಮ ಬೋಧನೆ ಮಾಡುತ್ತಿದ್ದು, ಈ ‘ಹೈಟೆಕ್ ಸನ್ಯಾಸಿಗಳು’ ಭಕ್ತರಲ್ಲಿ ಅಚ್ಚರಿ ಮೂಡಿಸುತ್ತಿದ್ದಾರೆ. ಧರ್ಮ ಪ್ರಚಾರಕ್ಕೆ ನಿಂತ ರೋಬೋಟ್‌ಗಳು ದಕ್ಷಿಣ ಕೊರಿಯಾದ ಸೋಲ್ ನಗರದ ಪ್ರಸಿದ್ಧ ‘ಜೋಗ್ಯೆಸಾ’ ದೇವಾಲಯದಲ್ಲಿ ‘ಗಾಬಿ’ ಎಂಬ ಹೆಸರಿನ ರೋಬೋಟ್ ಸನ್ಯಾಸಿಯನ್ನು ಪರಿಚಯಿಸಲಾಗಿದೆ. ಸಾಂಪ್ರದಾಯಿಕ ಕಾಷಾಯ ವಸ್ತ್ರ ಧರಿಸಿರುವ ಈ ಯಂತ್ರ ಸನ್ಯಾಸಿ, ಧರ್ಮ ದೀಕ್ಷೆ…

Read More
supreme court mandate tracking device and Speed Governor in transport vehicle

Supreme Court: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ: ಸುಪ್ರೀಂ ಆದೇಶ

ನವದೆಹಲಿ: ಭಾರತದ ರಸ್ತೆಗಳಲ್ಲಿ ‘ಲೇನ್ ಶಿಸ್ತು’ ಎಂಬ ಪರಿಕಲ್ಪನೆಯೇ ಇಲ್ಲದಂತಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ದೇಶದಲ್ಲಿ ಸಂಭವಿಸುವ ಬಹುತೇಕ ಅಪಘಾತಗಳಿಗೆ ಲೇನ್ ಶಿಸ್ತು ಪಾಲಿಸದಿರುವುದೇ ಮುಖ್ಯ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿದರೆ ಅಪಘಾತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ನ್ಯಾಯಾಲಯ ಕಿವಿಮಾತು…

Read More
donald trump visit to china iran gave shock regarding Hormuz strait

Iran: ಚೀನಾಗೆ ಟ್ರಂಪ್‌ ಭೇಟಿ, ದೊಡ್ಡ ಶಾಕ್‌ ನೀಡಿದ ಇರಾನ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಪ್ರವಾಸ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ (Iran) ಸರ್ಕಾರವು ಅಂತರಾಷ್ಟ್ರೀಯ ರಾಜತಾಂತ್ರಿಕ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಬಲ್ಲ ಇರಾನ್‌ನ ಈ ಅನಿರೀಕ್ಷಿತ ನಡೆ, ಚೀನಾ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದೆ. ಚೀನಾದ ಆರ್ಥಿಕತೆಗೆ ಪೆಟ್ಟು? ವಿಶ್ವದ ಅತಿಮುಖ್ಯ ತೈಲ ಸಾಗಣೆ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯ ನಿಯಮಗಳನ್ನು ಇರಾನ್ ಏಕಪಕ್ಷೀಯವಾಗಿ ಬದಲಿಸಿದೆ. ಅಂತರಾಷ್ಟ್ರೀಯ ಜಲಮಾರ್ಗವಾಗಿದ್ದ ಈ ಪ್ರದೇಶವನ್ನು ಈಗ ತನ್ನ…

Read More
delhi high court sends notice to google and apple company regarding sensitive content

High Court: ಆಪಲ್‌ ಹಾಗೂ ಗೂಗಲ್‌ಗೆ ದೆಹಲಿ ಹೈಕೋರ್ಟ್‌ ನೋಟೀಸ್

ನವದೆಹಲಿ: ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ಗಳಲ್ಲಿ ಲಭ್ಯವಿರುವ (‌Delhi High Court) ಅಶ್ಲೀಲತೆ, ವೇಶ್ಯಾವಾಟಿಕೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ಅಪ್ಲಿಕೇಶನ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ (‌Delhi High Court) ಬುಧವಾರ ಮಹತ್ವದ ಆದೇಶ ನೀಡಿದೆ. ಇಂತಹ ಆಪ್‌ಗಳ ಪ್ರಭಾವದಿಂದ ದೇಶದ ಇಡೀ ಯುವ ಪೀಳಿಗೆಯು ಹಾದಿ ತಪ್ಪುವುದನ್ನು ನಾವು ಸಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದೆ. ನೋಟೀಸ್‌ ನೀಡಿದ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ…

Read More