TOP NEWS
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More
crime bride to be and her family takes life due to harassment

Crime: ಮದುವೆ ಮಂಟಪ ಏರಬೇಕಿದ್ದ ಯುವತಿ ತಂದೆ-ತಾಯಿಯೊಂದಿಗೆ ಆತ್ಮಹತ್ಯೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆಯ ಸಂಭ್ರಮ ಸಡಗರದಲ್ಲಿದ್ದ ಮನೆಯೊಂದು ಒಂದೇ ಕ್ಷಣದಲ್ಲಿ (Crime) ಸ್ಮಶಾನ (Self Harmimg) ಸದೃಶವಾಗಿದೆ. ಸ್ಥಳೀಯ ಯುವಕನೊಬ್ಬ ನೀಡಿದ ಅತಿಯಾದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಹಾಗೂ ಆಕೆಯ ಹೆತ್ತವರು ಒಟ್ಟಿಗೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಜೂನ್ 24 ರಂದು ರಕ್ಷಿತಾ ಅವರ ವಿವಾಹ ನಿಶ್ಚಯವಾಗಿತ್ತು. ಇನ್ನೇನು ಎರಡು…

Read More
Cow urine can solve Chikunguny related health issues IIT rookee research

Chikungunya: ಚಿಕನ್‌ಗುನ್ಯಾ ವೈರಸ್ ನಿಯಂತ್ರಣಕ್ಕೆ ಗೋಮೂತ್ರ ರಾಮಬಾಣ!

ಬೆಂಗಳೂರು: ಸೊಳ್ಳೆಗಳಿಂದ ಹರಡುವ ಹಾಗೂ ಕೀಲು ನೋವಿನಿಂದ ನರಕಯಾತನೆ ನೀಡುವ ಚಿಕನ್‌ಗುನ್ಯಾ (Chikungunya) ವೈರಸ್ ಸೋಂಕಿಗೆ ಭಾರತೀಯ ಆಯುರ್ವೇದದಲ್ಲಿ ಪರಿಹಾರವಿರುವುದು ಐಐಟಿ ರೂರ್ಕಿಯ (IIT Roorkee) ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಸಾಬೀತಾಗಿದೆ. ಗೋಮೂತ್ರ ಡಿಸ್ಟಿಲೇಟ್ (Cow Urine Distillate – CUD) ಚಿಕನ್‌ಗುನ್ಯಾ ವೈರಸ್ ಅನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ನಮ್ಮ ದೇಶದ ಪ್ರಾಚೀನ ಆಯುರ್ವೇದ ಜ್ಞಾನಕ್ಕೆ ಆಧುನಿಕ ವೈರಾಲಜಿ (Virology) ವಿಜ್ಞಾನದ ತಂತ್ರಜ್ಞಾನವನ್ನು ಜೋಡಿಸಿ ನಡೆಸಿರುವ ಈ ಅಪರೂಪದ ಸಂಶೋಧನೆಯು, ಭವಿಷ್ಯದಲ್ಲಿ…

Read More
Keir Starmer resigned who is next PM of UK

Keir Starmer: ಒಂದೇ ದಶಕದಲ್ಲಿ ಬ್ರಿಟನ್‌ಗೆ 7ನೇ ಪ್ರಧಾನಿ; ಆಡಳಿತಾವಧಿ ಮುಗಿಯುವ ಮುನ್ನವೇ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ!

ಲಂಡನ್:‌ ಬ್ರಿಟನ್ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ದೇಶವು ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಲೇಬರ್ ಪಕ್ಷದ ಸರ್ಕಾರವನ್ನು ಮುನ್ನಡೆಸುತ್ತಿದ್ದ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer ) ಅವರು ಸುಮಾರು 23 ತಿಂಗಳುಗಳ ಅಧಿಕಾರಾವಧಿಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದ ಮುಂಭಾಗ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟನ್ ಲೇಬರ್ ಪಕ್ಷದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ….

Read More
MES high drama in Belagavi district office

Belagavi: ಸರ್ಕಾರಿ ಆದೇಶದ ಪ್ರತಿ ಹರಿದು ಎಂಇಎಸ್ ಪುಂಡಾಟ; ಕರವೇ ಆಕ್ರೋಶ, ಸಂಘಟನೆ ನಿಷೇಧಕ್ಕೆ ಆಗ್ರಹ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ಏಕೀಕರಣ ಸಮಿತಿಯ (MES) ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಗೂಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ರಾಜ್ಯಾದ್ಯಂತ ಕನ್ನಡವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲೇ ಭಾರೀ ಗದ್ದಲ ಸೃಷ್ಟಿಸಿದ್ದಾರೆ. ಸ್ಥಳದಲ್ಲೇ ರಕ್ಷಣಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ, ಸರ್ಕಾರದ ಅಧಿಕೃತ ಸುತ್ತೋಲೆಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಅದರೊಂದಿಗೆ, ಗಡಿ ಪ್ರದೇಶಗಳಲ್ಲಿ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲೆಗಳು ಹಾಗೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ಪಟ್ಟು…

Read More
Two parallel voter list revision surveys in Bengaluru spark confusion residents move High Court against State Election Commission over SIR

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More
Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More