TOP NEWS
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More
pro KS bhagavan controversial statement about lord rama

KS Bhagavan: ಶ್ರೀರಾಮನ ಚಾರಿತ್ರ್ಯ ವಿಮರ್ಶಿಸಿ ಮತ್ತೆ ಕಿಡಿ ಹೊತ್ತಿಸಿದ ಪ್ರೊ. ಭಗವಾನ್; ಡಿಜಿಪಿಗೆ ದೂರು

ಬೆಂಗಳೂರು: ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ (KS Bhagavan) ಅವರು ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತೊಮ್ಮೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ‘ಹಿಂದೂ ಜನಜಾಗೃತಿ ಸಮಿತಿ’ಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಗುರುವಾರ ಅಧಿಕೃತ ದೂರು ನೀಡಿದೆ. ದಾವಣಗೆರೆ ಭಾಷಣದಲ್ಲಿ ಭಗವಾನ್ ವಾದಿಸಿದ ಜಟಾಪಟಿ ಅಂಶಗಳೇನು? ದಾವಣಗೆರೆ ಜಿಲ್ಲೆಯ ಹರಿಹರ…

Read More
government warns private schools regarding extra high fee

Private School: ನಿಯಮ ಮೀರಿ ಡೊನೇಷನ್ ಪೀಕುವ ಖಾಸಗಿ ಶಾಲೆಗಳಿಗೆ ಡಿಡಿಪಿಐ ವಾರ್ನಿಂಗ್

ಶಿವಮೊಗ್ಗ: ನಿಯಮಬಾಹಿರವಾಗಿ ಪೋಷಕರಿಂದ ಭಾರಿ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಮತ್ತು ಅನುದಾನರಹಿತ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯು (Private School) ಬೀಗ ಜಡಿಯುವ ಎಚ್ಚರಿಕೆ ನೀಡಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಾರಿಗೆ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ತಾಲೂಕಿನ ಎಲ್ಲಾ ಅನ್‌ಎಡೆಡ್ ಶಾಲೆಗಳ ಮುಖ್ಯಸ್ಥರ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮನಬಂದಂತೆ ವರ್ತಿಸುವ ನೀತಿಗೆ ಕಡಕ್ ಬ್ರೇಕ್ ಹಾಕಿದ್ದಾರೆ. ಜನರಿಂದ ದೂರುಗಳ ಮಹಾಪೂರ ಖಾಸಗಿ ಶಾಲೆಗಳು ವಿಧಿಸುತ್ತಿರುವ…

Read More
Bjp leader smriti irani name missing from panchayat voter final list

Smriti Irani: ಪಂಚಾಯತ್‌ ಚುನಾವಣೆ ಅಂತಿಮ ಮತದಾರರ ಪಟ್ಟಿಯಿಂದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರೇ ಗಾಯಬ್!

ಅಮೇಠಿ: ಉತ್ತರ ಪ್ರದೇಶದಲ್ಲಿ ತ್ರಿಸ್ಟರ ಪಂಚಾಯತ್ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಾಜಿ ಕೇಂದ್ರ ಸಚಿವೆ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಸ್ಮೃತಿ ಇರಾನಿ (Smriti Irani) ಅವರ ಹೆಸರೇ ನಾಪತ್ತೆಯಾಗಿರುವುದು ಭಾರಿ ಸಂಚಲನ ಮೂಡಿಸಿದೆ. ಅಮೇಠಿಯ ಮಾಜಿ ಸಂಸದೆಯೂ ಆಗಿರುವ ಸ್ಮೃತಿ ಇರಾನಿ ಅವರ ಹೆಸರು ವೋಟರ್ ಲಿಸ್ಟ್‌ನಿಂದ ಕೈಬಿಟ್ಟು ಹೋಗಿರುವುದು ತಿಳಿಯುತ್ತಿದ್ದಂತೆಯೇ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಹಠಾತ್ ಗೊಂದಲ ಹಾಗೂ ಆತಂಕ ನಿರ್ಮಾಣವಾಗಿದೆ. ಈ ಗಂಭೀರ ಲೋಪದ…

Read More
cm vijay super hit film mersal to re release on his birthday

CM Vijay: ದಳಪತಿ ವಿಜಯ್ ಜನ್ಮದಿನದ ಸಂಭ್ರಮ: ಜೂನ್ 19ಕ್ಕೆ ಆಯ್ದ ಚಿತ್ರಮಂದಿರಗಳಲ್ಲಿ ಸೂಪರ್ ಹಿಟ್ ‘ಮೆರ್ಸಲ್’ ಸಿನಿಮಾ ರೀ-ರಿಲೀಸ್!

ಚೆನ್ನೈ: ಇತ್ತೀಚೆಗಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಜೋಸೆಫ್ ವಿಜಯ್ (CM Vijay) ಅವರ ಅಭಿಮಾನಿಗಳಿಗೆ ಅವರ ಹುಟ್ಟುಹಬ್ಬದ ಮುನ್ನವೇ ಚಿತ್ರಮಂದಿರಗಳಲ್ಲಿ ಸಂಭ್ರಮಿಸಲು ದೊಡ್ಡ ಅವಕಾಶವೊಂದು ಸಿಕ್ಕಿದೆ. ಸಿಎಂ ವಿಜಯ್ ಅವರ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಮಂಡಳಿ (CBFC) ಪ್ರಮಾಣಪತ್ರದ ಗೊಂದಲದಿಂದಾಗಿ ಬಿಡುಗಡೆ ತಡವಾಗುತ್ತಿರುವ ಬೆನ್ನಲ್ಲೇ, ಅವರ ವೃತ್ತಿಜೀವನದ 2017ರ ಬ್ಲಾಕ್‌ಬಸ್ಟರ್ ಸಿನಿಮಾ ‘ಮೆರ್ಸಲ್’ (Mersal) ಜೂನ್ 19 ರಂದು ಮತ್ತೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಜ್ಜಾಗಿದೆ. ಜೂನ್ 22…

Read More
big announcement from government no hike in MBBS fee

MBBS: ಮೆಡಿಕಲ್ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್: ಈ ಬಾರಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳವಿಲ್ಲ!; ಯಥಾಸ್ಥಿತಿ ಮುಂದುವರಿಕೆ

ಬೆಂಗಳೂರು: ರಾಜ್ಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ (MBBS), ದಂತ ವೈದ್ಯಕೀಯ (BDS) ಮತ್ತು ಸ್ನಾತಕೋತ್ತರ (PG) ಕೋರ್ಸ್‌ಗಳ ದಾಖಲಾತಿ ಫೀಸ್ ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ಹೆಚ್ಚುವರಿ ಶುಲ್ಕ ಭರಿಸುವ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಖಾಸಗಿ ಒಕ್ಕೂಟಗಳ ಬೇಡಿಕೆಗೆ ಮಣಿಯದ ಸರ್ಕಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ….

Read More
Giorgia Meloni wishes narendra modi

Narendra Modi: ಜಾಗತಿಕ ಮಟ್ಟದಲ್ಲಿ ಮತ್ತೆ ‘ಮೆಲೋಡಿ’ ಸೌಂಡ್

ಬೆಂಗಳೂರು: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ದೇಶದ ರಾಜಕೀಯ ಮುಕುಟಕ್ಕೆ ಮತ್ತೊಂದು ಅಪ್ರತಿಮ ಗರಿ ಮುಡಿಗೇರಿಸಿಕೊಂಡಿದ್ದಾರೆ. ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸಿದ ಪ್ರಜಾಸತ್ತಾತ್ಮಕ ‘ಚುನಾಯಿತ’ (Elected) ಪ್ರಧಾನಿ ಎಂಬ ಅಪ್ರತಿಮ ಮೈಲಿಗಲ್ಲನ್ನು ಮೋದಿ ಸ್ಥಾಪಿಸಿದ್ದಾರೆ. ಈ ಐತಿಹಾಸಿಕ ಸಾಧನೆಯ ಸಡಗರದ ಬೆನ್ನಲ್ಲೇ ಜಾಗತಿಕ ರಂಗದ ಪ್ರಮುಖ ನಾಯಕರು ಮೋದಿಯವರನ್ನು ಕೊಂಡಾಡುತ್ತಿದ್ದು, ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕಳುಹಿಸಿರುವ ಅತ್ಯಂತ ಆತ್ಮೀಯ ಶುಭಾಶಯ ಸಂದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ…

Read More