TOP NEWS
supreme court declined plea about ram mandir urgent hearing application for cbi investigation

Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….

Read More
BJP DV Sadananda audio about BY Vijayendra goes viral

BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…

Read More
shocking tamil nadu woman made delivery by seeing youtube video lost life

Shocking: ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ; ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಸಾವು

ತಿರುಪುರ್: ಯೂಟ್ಯೂಬ್ (YouTube) ವಿಡಿಯೋ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ (Shocking) ಧೃತಿಗೆಡಿಸುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ. ಹಿಂದಿನ ಹೆರಿಗೆಯ ವೇಳೆ ಆದ ಸಿಜೇರಿಯನ್ (C-Section) ಕಹಿ ನೆನಪಿನಿಂದಾಗಿ ಆಕೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏನಿದು ಪ್ರಕರಣ? ತಿರುಪುರ್ ಜಿಲ್ಲೆಯ ಉತ್ತಕುಳಿ ಸಮೀಪದ ಪುಂಜೈ ತಲವಾಯಿಪಾಳ್ಯಂ ನಿವಾಸಿ ಶಶಿಕಲಾ (32) ಜೂನ್ 24ರ ಮುಂಜಾನೆ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ…

Read More
Actor yash new film story leaked viral on social media

Actor Yash: ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಕಥೆ ಲೀಕ್? ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ರಾಕಿ ಭಾಯ್ ಯಶ್, (Actor Yash) ಪ್ರಸ್ತುತ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅವರ ಮುಂದಿನ ಪ್ರಾಜೆಕ್ಟ್ ಕುರಿತು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆ ಶುರುವಾಗಿದೆ. ಪ್ರಸಿದ್ಧ ಚಲನಚಿತ್ರ ಮಾಹಿತಿ ಜಾಲತಾಣವಾದ ಐಎಂಡಿಬಿ (IMDb) ಪುಟದಲ್ಲಿ ಯಶ್ ಅವರ ಮುಂಬರುವ ಸಿನಿಮಾದ ಲೈನ್ ಹಾಗೂ ಕಲಾವಿದರ ವಿವರಗಳು ಪ್ರಕಟವಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ‘ಮ್ಯಾಡ್ ಪೊಲೀಸ್’ ಕಥೆ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

Read More
good news CBSE class 7 8 9 students can continue learning foreign languages

CBSE: ಸಿಬಿಎಸ್‌ಇ ದಿಢೀರ್ ಭಾಷಾ ನೀತಿ ಬದಲಾವಣೆಗೆ ಬ್ರೇಕ್: ಹಳೇ ಬ್ಯಾಚ್ ವಿದ್ಯಾರ್ಥಿಗಳಿಗೆ ಹಳೇ ನಿಯಮವೇ ಅನ್ವಯ

ನವದೆಹಲಿ: ಸಿಬಿಎಸ್‌ಇ (CBSE) ಶಾಲೆಗಳಲ್ಲಿ ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ಭಾರಿ ಸಮಾಧಾನಕರ ಸುದ್ದಿ ನೀಡಿದೆ. ಪ್ರಸ್ತುತ 7, 8 ಮತ್ತು 9ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಮುಗಿಯುವವರೆಗೆ ತ್ರಿಭಾಷಾ ನೀತಿಯಡಿ ವಿದೇಶಿ ಭಾಷೆಗಳ ಕಲಿಕೆಯನ್ನು ಮುಂದುವರಿಸಬಹುದು ಎಂದು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿವೆ. ಈ ಹೊಸ ನಿರ್ಧಾರದಿಂದಾಗಿ ದಿಢೀರ್ ಭಾಷಾ ಬದಲಾವಣೆಯ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಳರಾಗಿದ್ದಾರೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆ ನಿಯಮ ಮುಂಬರುವ ಜುಲೈ…

Read More
Sandalwood producer ba ma harish son lost life due to heart attack while trekking

Sandalwood: ಟ್ರೆಕ್ಕಿಂಗ್ ವೇಳೆಹೃದಯಾಘಾತ: ಖ್ಯಾತ ಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ!

ಶಿವಮೊಗ್ಗ: ಕನ್ನಡ ಚಿತ್ರರಂಗದ (Sandalwood) ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (28) ಅವರು ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟದಲ್ಲಿ ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ತೆರಳಿದ್ದ ಯುವಕ ಅತ್ಯಂತ ಸಣ್ಣ ವಯಸ್ಸಿನಲ್ಲೇ ದುರಂತ ಅಂತ್ಯ ಕಂಡಿರುವುದು ಇಡೀ ಚಿತ್ರರಂಗ ಹಾಗೂ ಅವರ ಕುಟುಂಬ ವರ್ಗದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಬೆಂಗಳೂರಿನಿಂದ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಟ್ರಾವೆಲರ್ (T.T) ವಾಹನದಲ್ಲಿ ಕೊಡಚಾದ್ರಿಗೆ ಬಂದಿದ್ದ ಉಲ್ಲಾಸ್…

Read More
Kempegowda jayanthi will be celebrated in 28 vidhansabha constituency DK shivakumar

DK Shivakumar: ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ: ಗಿನ್ನೆಸ್ ದಾಖಲೆಗಾಗಿ ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿಶೇಷ ಮೆರುಗು ನೀಡಿದೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯ ಆಚರಣೆಯು ಕೇವಲ ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ನಂತಹ ನಿರ್ದಿಷ್ಟ ಸ್ಥಳಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ, ರಾಜಧಾನಿಯ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲೂ ಇದನ್ನು ಸರದಿಯಂತೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಜಯಂತಿ…

Read More