Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….
