CJP: ದೆಹಲಿ ಚಲೋ ದಿಢೀರ್ ರದ್ದು: ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ಗೆ ಕೇಂದ್ರ ಒಪ್ಪಿಗೆ, ಸಿಜೆಪಿ ನಿರ್ಧಾರ!
ನವದೆಹಲಿ: ಕೇಂದ್ರ ಸರ್ಕಾರವು ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ವಿವಿಧ ಪ್ರಕರಣಗಳನ್ನು ವಾಪಸ್ ಪಡೆಯಲು ಹಾಗೂ ಎಫ್ಐಆರ್ ರದ್ದುಗೊಳಿಸಲು ಸಮ್ಮತಿಸಿರುವ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸೆಪ್ಟೆಂಬರ್ 5ರಂದು ನಡೆಸಲು ಉದ್ದೇಶಿಸಿದ್ದ ಬೃಹತ್ ಮೆರವಣಿಗೆಯನ್ನು ರದ್ದುಗೊಳಿಸಿದೆ. ಇಂಡಿಯಾ ಗೇಟ್ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಆಯೋಜಿಸಲಾಗಿದ್ದ ಈ ಪಾದಯಾತ್ರೆಯನ್ನು ಹಿಂಪಡೆಯಲಾಗಿದ್ದು, ಸರ್ಕಾರದ ಈ ಧನಾತ್ಮಕ ನಿಲುವನ್ನು ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಗೌರವಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್…
