ಶಿವಮೊಗ್ಗ: ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಸಹಾಯಕ ಆಗಲಿದೆ
ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387 ಕೋಟಿ ರೂಪಾಯಿ ಮತ್ತು ಐದು ವರ್ಷಗಳಲ್ಲಿ 63 ಸಾವಿರದ 50 ಕೋಟಿ ರೂಪಾಯಿ ಆದಾಯ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
