DK Shivakumar: ಹಳೇ ದ್ವೇಷ ಮರೆತು ಮುನ್ನಡೆಯಿರಿ, 2028 ಕ್ಕೆ ಮತ್ತೆ ಕಾಂಗ್ರೆಸ್ ಗೆಲ್ಲಿಸುವುದೇ ನಿಮ್ಮ ಟಾರ್ಗೆಟ್: ಕಾರ್ಯಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!
ಬೆಂಗಳೂರು: “ಹಳೆಯ ಮುನಿಸು, ದ್ವೇಷ ಹಾಗೂ ಪ್ರತೀಕಾರದ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗಿಟ್ಟು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ. ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಧ್ವಜ ಹಾರಿಸುವುದೇ ನಿಮ್ಮ ಮುಂದಿನ ಅಂತಿಮ ಗುರಿಯಾಗಿರಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮುಖಂಡರ ಭೇಟಿ ವೇಳೆ ಸಿಎಂ ಕಿವಿಮಾತು ಮೈಸೂರು ಜಿಲ್ಲೆಯ ಹಿರಿಯ ನಾಯಕ, ಮಾಜಿ ಶಾಸಕ ಮಂಜುನಾಥ್ ಹಾಗೂ ಕೆಪಿಸಿಸಿ…
