Priyank Kharge: ಮತದಾರರ ಪಟ್ಟಿ ಪರಿಷ್ಕರಣೆ ಗೊಂದಲ: ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ಸಚಿವ ಪ್ರಿಯಾಂಕ್ ಖರ್ಗೆ!
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿವೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಈ ಗೊಂದಲಗಳಿಗೆ ರಾಜ್ಯ ಸರ್ಕಾರ ಕಾರಣವಲ್ಲ, ಬದಲಿಗೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ? ಜವಾಬ್ದಾರಿ ಅವರದ್ದೇ ತಾನೆ?” ಎಂದು ಆಕ್ರೋಶ…
