Sandeep

Belagavi cyber police strict warning to social media group admins

Cyber Police: ಸೋಷಿಯಲ್ ಮೀಡಿಯಾ ದುರ್ಬಳಕೆದಾರರಿಗೆ ಬೆಳಗಾವಿ ಪೊಲೀಸರ ಖೆಡ್ಡಾ: ಉಲ್ಲಂಘಿಸಿದರೆ ಅಕೌಂಟ್ ಕ್ಲೋಸ್!

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಜಾಲತಾಣಗಳಲ್ಲಿ ದ್ವೇಷ ಬಿತ್ತುವ ಹಾಗೂ ಸಮಾಜದ ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ (Cyber Police) ಸಮರ ಸಾರಿದೆ. ಸಾರ್ವಜನಿಕ ಸೌಹಾರ್ದತೆಗೆ ಹಾನಿ ಉಂಟುಮಾಡುವ ಯಾವುದೇ ವಿಡಿಯೋ, ಬರಹ ಅಥವಾ ಚಿತ್ರಗಳ ಮೇಲೆ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಈಗ ತೀವ್ರ ನಿಗಾ ವಹಿಸುತ್ತಿದ್ದಾರೆ. ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಭಾಷಾ ವಿವಾದಗಳು, ಗಡಿ ಕದನಗಳು ಹಾಗೂ ಧಾರ್ಮಿಕ ಹಬ್ಬ ಹರಿದಿನಗಳ ಸಂದರ್ಭವನ್ನು ಬಳಸಿಕೊಂಡು ಉದ್ವಿಗ್ನತೆ ಹರಡಲು ಕೆಲವರು ಸಾಮಾಜಿಕ ಮಾಧ್ಯಮಗಳನ್ನು…

Read More
toxic film important update on june 8th

Toxic Film: ಜೂನ್ 8ರಂದು ಟಾಕ್ಸಿಕ್‌ ಅಪ್‌ಡೇಟ್, ಅಭಿಮಾನಿಗಳಿಗೆ ಗುಡ್‌ನ್ಯೂಸ್‌?

ಬೆಂಗಳೂರು: ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಚಿತ್ರ ‘ಟಾಕ್ಸಿಕ್’ (Toxic Film) ತೀವ್ರ ಕುತೂಹಲ ಕೆರಳಿಸಿದೆ. ಕನ್ನಡ ಚಿತ್ರರಂಗದ ಗಡಿಯನ್ನು ದಾಟಿ ಜಾಗತಿಕ ವೇದಿಕೆಯಲ್ಲಿ ಹೊಸ ದಾಖಲೆ ಬರೆಯುವ ಉದ್ದೇಶದಿಂದ, ಭಾರಿ ಬಜೆಟ್‌ನಲ್ಲಿ ಈ ಸಿನಿಮಾವನ್ನು ರೂಪಿಸಲಾಗುತ್ತಿದ್ದು, ಸದ್ಯ ಎಲ್ಲರ ಕಣ್ಣು ಜೂನ್ 8ರ ಮೇಲೆ ನೆಟ್ಟಿದೆ. ನಿರ್ದೇಶಕಿಯ ಜನ್ಮದಿನದಂದೇ ಬಿಗ್ ಸರ್ಪ್ರೈಸ್? ಚಿತ್ರದ ಬಿಡುಗಡೆ ತಡವಾಗುತ್ತಿರುವುದರಿಂದ ಫ್ಯಾನ್ಸ್‌ನಲ್ಲಿ ಕೌತುಕ ಹೆಚ್ಚಾಗಿದೆ. ಸದ್ಯದ…

Read More
raghava Lawrence to contest in trichy east from TVK

TVK: ಉಪಚುನಾವಣೆ ಕಣಕ್ಕೆ ರಾಘವ ಲಾರೆನ್ಸ್? ಟಿವಿಕೆ ಮುಖ್ಯಸ್ಥ ವಿಜಯ್ ಹೊಸ ರಾಜಕೀಯ ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ವೇಳೆ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳೆರಡರಲ್ಲೂ ಗೆದ್ದು ಬೀಗಿದ್ದ ಮುಖ್ಯಮಂತ್ರಿ ವಿಜಯ್ ಅವರು, ಬಳಿಕ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನವನ್ನು ತೆರವುಗೊಳಿಸಿದರು. ಹೀಗೆ ತೆರವಾಗಿರುವ ಈ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ಎದುರಾಗಲಿದ್ದು, ಇಲ್ಲಿ ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಭ್ಯರ್ಥಿಯಾಗಿ ಖ್ಯಾತ ನಟ ರಾಘವ ಲಾರೆನ್ಸ್ ಅವರನ್ನು ಕಣಕ್ಕಿಳಿಸಲು ವಿಜಯ್ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಗುರು ರಜನಿಕಾಂತ್ ಮಾರ್ಗದರ್ಶನದಲ್ಲಿ ಲಾರೆನ್ಸ್…

Read More
one nation one election concept is not good for country says dk shivakumar

DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್‌ ನೇಷನ್‌, ಒನ್‌ ಎಲೆಕ್ಷನ್‌) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…

Read More
viral news women delivered 4 babies over 5 days

Viral News: ವೈದ್ಯಕೀಯ ಇತಿಹಾಸದಲ್ಲೇ ಅಪರೂಪದ ಪವಾಡ: 5 ದಿನಗಳ ಅಂತರದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ!

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವೈದ್ಯಕೀಯ ಲೋಕವೇ ಬೆರಗಾಗುವಂತಹ ಅತ್ಯಂತ (Viral News) ಅಪರೂಪದ ಹಾಗೂ ಸವಾಲಿನ ಹೆರಿಗೆ ಪ್ರಕರಣವೊಂದು ವರದಿಯಾಗಿದೆ. ಜಿಲ್ಲೆಯ ಸಂಭಲ್ ಮೂಲದ 31 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ ಐದು ದಿನಗಳ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ಇಂತಹ ಹೆಚ್ಚು ಅಪಾಯವಿರುವ (ಹೈ-ರಿಸ್ಕ್) ಗರ್ಭಧಾರಣೆಯ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ (ಸಿಜೇರಿಯನ್) ಅನಿವಾರ್ಯ ಇರುತ್ತದೆ. ಆದರೆ ಇಲ್ಲಿ ಯಾವುದೇ ಸರ್ಜರಿ ಇಲ್ಲದೆ, ನಾಲ್ಕೂ ಮಕ್ಕಳು ಸಹಜ ಹೆರಿಗೆಯ (ನಾರ್ಮಲ್ ಡೆಲಿವರಿ) ಮೂಲಕವೇ ಜನಿಸಿರುವುದು ಜಾಗತಿಕ…

Read More
good news Karnataka state gets 1122 extra medical seat from central

Good News: ವೈದ್ಯಕೀಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದ ಭರ್ಜರಿ ಉಡುಗೊರೆ: ಕರ್ನಾಟಕಕ್ಕೆ ದಾಖಲೆಯ 1,122 ಹೆಚ್ಚುವರಿ ಮೆಡಿಕಲ್ ಸೀಟುಗಳು ಮಂಜೂರು

ಬೆಂಗಳೂರು: ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣಪ್ರಕಾಶ ಪಾಟೀಲ್ ಅವರು, ಒಂದೇ ರಾಜ್ಯಕ್ಕೆ ಏಕಕಾಲದಲ್ಲಿ ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳು (Good News) ಹಂಚಿಕೆಯಾಗಿರುವುದು ಒಂದು ಐತಿಹಾಸಿಕ ಮತ್ತು ದಾಖಲೆಯ ಸಾಧನೆಯಾಗಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ ಎಂದ ಅವರು, ಈ ನೂತನ ಸೀಟುಗಳನ್ನು ಕೊಪ್ಪಳ, ಗದಗ್, ಚಾಮರಾಜನಗರ, ಕಾರವಾರ ಮತ್ತು ಕಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹಂಚಿಕೆ ಮಾಡಲಾಗುವುದು, ಇದರಿಂದ ಆಯಾ…

Read More
CBSE changed makes indian language mandatory

CBSE: ಸಿಬಿಎಸ್‌ಇ ಪ್ರೌಢಶಾಲಾ ಭಾಷಾ ನೀತಿ ಪರಿಷ್ಕರಣೆ: ಮುಂಬರುವ ಶೈಕ್ಷಣಿಕ ಸಾಲಿನಿಂದ ಮೂರು ಭಾಷೆಗಳ ಕಲಿಕೆ ಕಡ್ಡಾಯ

ನವದೆಹಲಿ: ಹೊಸ ನಿಯಮಾವಳಿಗಳ ಪ್ರಕಾರ, ಸಿಬಿಎಸ್‌ಇ (CBSE) ಅಡಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್ಮುಂದೆ ಕಡ್ಡಾಯವಾಗಿ ಮೂರು ಭಾಷೆಗಳನ್ನು (R1, R2 ಮತ್ತು R3) ಕಲಿಯಬೇಕಾಗುತ್ತದೆ. ಈ ಮೂರರಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳೇ ಆಗಿರಬೇಕು ಎಂದು ಮಂಡಳಿ ಕಡ್ಡಾಯಗೊಳಿಸಿದೆ. ಮುಂಬರುವ ಜುಲೈ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಇಆರ್‌ಟಿ (NCERT) ಪಠ್ಯಕ್ರಮವನ್ನು ಪರಾಮರ್ಶಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ತರಗತಿಗಳು…

Read More