ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು ಬಾವಿಗಿಳಿದು ಧರಣಿ ನಡೆಸಿದೆ.
ಸಚಿವರ ರಾಜೀನಾಮೆಗೆ ಒತ್ತಾಯ
ಈ ಸಂದರ್ಭದಲ್ಲಿ ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ, ಈ ಹಿಂದೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಸಭಾಧ್ಯಕ್ಷ ಯು.ಟಿ. ಖಾದರ್, ಈ ವಿಚಾರವಾಗಿ ಮಧ್ಯಾಹ್ನದ ಬಳಿಕ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಧರಣಿಯನ್ನು ಹಿಂಪಡೆಯಲಾಯಿತು. ಇದಕ್ಕೂ ಮುನ್ನ ಸದನದಲ್ಲಿ ಪದ್ಮಪ್ರಶಸ್ತಿ ಪುರಸ್ಕೃತರು ಹಾಗೂ ಉತ್ತಮ ಸೇವೆಗಾಗಿ ರಾಷ್ಟ್ರಪತಿಯವರ ಪದಕ ಪಡೆದ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದರು .
ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ
