TOP NEWS
Bengaluru Shocker Men Chase Water Tanker for 4 km Smash Windows and Brutally Attack Driver

Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್‌ಗೂ ಹೆಚ್ಚು ದೂರ ಬೈಕ್‌ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…

Read More
R ashok slams government over shivajnagar incident

R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್‌ ಅಶೋಕ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್‌ ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ  ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…

Read More
Good News for Namma Metro Yellow Line Commuters 14th Driverless Train Reaches Hebbagodi Depot

Namma Metro: ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೆಬ್ಬಗೋಡಿ ಡಿಪೋ ತಲುಪಿದ 14ನೇ ಡ್ರೈವರ್‌ಲೆಸ್ ರೈಲು!

ಬೆಂಗಳೂರು: ಸಿಲಿಕಾನ್ ಸಿಟಿಯ ಅತ್ಯಂತ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ‘ನಮ್ಮ ಮೆಟ್ರೋ’ (Namma Metro) ಹಳದಿ ಲೈನ್‌ನ (Yellow Line) ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಈ ಮಾರ್ಗದಲ್ಲಿ ಓಡಿಸಲು ಚೀನಾ ಕಂಪನಿಯಿಂದ ಆರ್ಡರ್ ಮಾಡಲಾಗಿದ್ದ ರೈಲುಗಳ ಪೈಕಿ ಮತ್ತೊಂದು ಹೊಸ ರೈಲು ನಗರವನ್ನು ತಲುಪಿದೆ. ಒಟ್ಟು 15 ಅತ್ಯಾಧುನಿಕ ಚಾಲಕರಹಿತ (Driverless) ರೈಲುಗಳ ಪೈಕಿ 14ನೇ ರೈಲು ಈಗಾಗಲೇ ಹೆಬ್ಬಗೋಡಿ ಮೆಟ್ರೋ ಡಿಪೋಗೆ ಬಂದು ಸೇರಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಈ ವಿಶೇಷ…

Read More
Permanent Relief from Garbage Menace in Bengaluru Minister Gives Green Signal for Cleanliness Drive GBA

GBA: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಮುಕ್ತಿ: ಸ್ವಚ್ಛತಾ ಆಂದೋಲನಕ್ಕೆ ಸಚಿವರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜಧಾನಿಯ ಅಂದವನ್ನು ಕೆಡಿಸುತ್ತಿರುವ ತ್ಯಾಜ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಜಂಟಿಯಾಗಿ ಮಹತ್ವದ ಮಾಸ್ಟರ್ ಪ್ಲಾನ್ ರೂಪಿಸಿವೆ. ಮುಂಬರುವ ಆಗಸ್ಟ್ ತಿಂಗಳಿನಿಂದ ನಗರದಾದ್ಯಂತ ಅತ್ಯಂತ ವಿಸ್ತಾರವಾದ “ಕಸಮುಕ್ತ ಬೆಂಗಳೂರು” ಮಹಾ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇರ ಉಸ್ತುವಾರಿಯಲ್ಲಿ ಈ ಸ್ವಚ್ಛತಾ ಆಂದೋಲನ ನಡೆಯಲಿದ್ದು, ಬಿಬಿಎಂಪಿ ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ರಾಜಧಾನಿಯನ್ನು ಹಸಿರು ನಗರಿಯನ್ನಾಗಿ ಮಾಡಲು…

Read More
NSUI different type protest Infront of KPCC office regarding Priyank kharge questions to RSS

RSS: ಆರ್‌ಎಸ್‌ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್‌ಎಸ್‌ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…

Read More
dengue case increasing in kids at Bengaluru doctors warns

Dengue: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆ ಸಿಂಚನ: ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ, ಪೋಷಕರು ಹೈ ಅಲರ್ಟ್!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ವರುಣನ ಆರ್ಭಟ ಜೋರಾಗಿದ್ದು, ಸುಡುವ ಬೇಸಿಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪಾದ ವಾತಾವರಣ ನೆಮ್ಮದಿ ತಂದಿದೆ. ಆದರೆ, ಈ ಆಹ್ಲಾದಕರ ಹವಾಮಾನದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ತಲೆನೋವು ಶುರುವಾಗಿದೆ. ಶಾಲೆಗಳು ಪುನರಾರಂಭಗೊಳ್ಳುತ್ತಿರುವ ಈ ಸಂದರ್ಭದಲ್ಲೇ ರಾಜಧಾನಿಯಲ್ಲಿ ಡೆಂಗ್ಯೂ (Dengue) ಜ್ವರದ ಹಾವಳಿ ದಿಢೀರ್ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ನಿಂತ ನೀರೇ ಇದಕ್ಕೆ ಮುಖ್ಯ ಕಾರಣ ಕಳೆದ ಸಾಲಿನಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಈ ಬಾರಿ ಮುಂಗಾರು ಆರಂಭದಲ್ಲೇ ಅಬ್ಬರಿಸುವ ಲಕ್ಷಣಗಳನ್ನು ತೋರಿಸುತ್ತಿದೆ….

Read More
kpcc president and dcm dk shivakumar big action

DK Shivakumar: ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…

Read More