Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
Crime Maharashtra Man Got His Wife Killed

Crime: ಆಕ್ಸಿಡೆಂಟ್‌ ಮಾಡಿಸಿ ಹೆಂಡತಿ ಸಾಯಿಸಿದ ಭೂಪ, ಪೊಲೀಸರಿಗೆ ಆರೋಪಿ ಸಿಕ್ಕಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಬುಲ್ದಾನದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಆಹಾರಕ್ಕೆ ವಿಷ ಬೆರೆಸಿ ಮೂರು ಬಾರಿ ಕೊಲ್ಲಲು ಯತ್ನಿಸಿ, ವಿಫಲವಾಗಿದ್ದು ನಂತರ ಮತ್ತೆ ಪ್ಲ್ಯಾನ್‌ ಮಾಡಿ ಕೊಲೆ (Crime) ಮಾಡಿರುವ ಘಟನೆ ನಡೆದಿದೆ. ಕಾರಿನಿಂದ ಅಪಘಾತ ಮಾಡಿಸಿದ್ದ ಆರೋಪಿ ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಯಾವಾಗ ಆ ವ್ಯಕ್ತಿ ತನ್ನ ಹೆಂಡತಿಯ ಕೊಲೆ ಮಾಡಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲ ಆಯಿತೋ ಆಗ ಆತ  1 ಲಕ್ಷಕ್ಕೆ ಸುಪಾರಿ ಕೊಟ್ಟು ಅಪಘಾತ ಎನ್ನುವ ರೀತಿ ಆಕೆಯ ಕೊಲೆ ಮಾಡಿಸಿದ್ದಾನೆ….

Read More
Theft crime Mysuru police returned lost items to people

Theft: ಮೈಸೂರಿನಲ್ಲಿ ಕಳವು ಪ್ರಕರಣ ಭೇದಿಸಿದ ಪೊಲೀಸರು, ಮಾಲೀಕರಿಗೆ ವಸ್ತುಗಳ ಹಸ್ತಾಂತರ

ಮೈಸೂರು: ನಗರದಲ್ಲಿ ಕಳವು ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಚಿನ್ನ, ಬೆಳ್ಳಿ, ವಾಹನ, ನಗದು ಸೇರಿದಂತೆ ಕದ್ದ ವಸ್ತುಗಳನ್ನು (Theft) ಅವುಗಳ ಮಾಲೀಕರಿಗೆ ತಲುಪಿಸಲಾಗಿದೆ ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.  2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಸುದ್ದಿಗೋಷ್ಠಿಯಲ್ಲಿ ಅವರು, ಸರಸ್ವತಿಪುರಂ, ಕುವೆಂಪುನಗರ, ಲಷ್ಕರ್‌, ವಿದ್ಯಾರಣ್ಯಪುರಂ, ವಿಜಯನಗರ, ಮೇಟಗಳ್ಳಿ, ಮಂಡಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಸುಮಾರು 2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣವನ್ನು…

Read More
Horror Punjab Woman body found in iron trunk

Horror: 99ರ ವೃದ್ಧೆಯ ಬರ್ಬರ ಹತ್ಯೆ, ಟ್ರಂಕ್‌ನಲ್ಲಿ ಪತ್ತೆಯಾದ ದೇಹ

ಹೋಶಿಯಾರ್‌ಪುರ: 99 ವರ್ಷದ ವೃದ್ಧೆಯೊಬ್ಬಳನ್ನು ದರೋಡೆಕೋರನೊಬ್ಬ ಕೊಲೆ (Horror) ಮಾಡಿ, ಆಕೆಯ ದೇಹವನ್ನು ಕಬ್ಬಿಣದ ಟ್ರಂಕಿನೊಳಗೆ ತುಂಬಿಸಿರುವ ಘಟನೆ ಹೋಶಿಯಾರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ವಾಸ ಮಾಡುತ್ತಿದ್ದ ಮಹಿಳೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವೃದ್ಧೆಯನ್ನ ಜೋಗಿಂದರ್ ಕೌರ್ ಎಂದು ಗುರುತಿಸಲಾಗಿದೆ. ಇನ್ನು ಚಬ್ಬೇವಾಲ್ ಪ್ರದೇಶದ ಭಾಮ್ ಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿದ್ದರು ಎನ್ನಲಾಗಿದ್ದು,  ಹಿಂದಿನ ಬುಧವಾರ ಸಂಜೆ ಆಕೆಯ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು…

Read More
G Parameshwar reaction on byrati Basavaraj case

G Parameshwar: ಬೈರತಿ ಬಸವರಾಜು ವಿರುದ್ಧ ಪೊಲೀಸರು ಕಾನೂನು ಕ್ರಮ: ಜಿ ಪರಮೇಶ್ವರ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಬೈರತಿ ಬಸವರಾಜು ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಬಸವರಾಜು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮೌನವಾಗಿರುವಂತೆ ಹೈಕಮಾಂಡ್‌ ಸೂಚನೆ  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮೌನವಾಗಿರುವಂತೆ ಎಐಸಿಸಿ ಪಕ್ಷದ ನಾಯಕರಿಗೆ ಸೂಚನೆ…

Read More
Crime nanjangud rural police found selling ration rice black market arrested one person

Crime: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು

ನಂಜನಗೂಡು: ರಾಜ್ಯದಲ್ಲಿ ಕಾಳಸಂತೆ (Crime) ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಇದೀಗ ಈ ಶನಿವಾರ ನಂಜನಗೂಡು ಗ್ರಾಮಾಂತರ ಪೊಲೀಸರು ಪಡಿತರ ಅಕ್ಕಿ ಮಾರಾಟ ಮಾಡುವವರನ್ನ ಸೆರೆ ಹಿಡಿದಿದ್ದಾರೆ. 90 ಮೂಟೆ ಪಡಿತರ ಅಕ್ಕಿ ಸೆರೆ ಇದೇ ಶನಿವಾರ ಫೆಬ್ರವರಿ 7ರಂದು ಪಡಿತರ ಅಕ್ಕಿಯನ್ನ ಕಾಳಸಂತೆಗೆ ಮಾರಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಿಕ್ಕ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ 90 ಮೂಟೆ ಅಕ್ಕಿ ಸಾಗಿಸುತ್ತಿದ್ದ ಗಾಡಿ ಹಿಡಿದು ದಕ್ಷತೆ ಮೆರೆದಿದ್ದಾರೆ. ಓರ್ವ…

Read More
Cyber Crime mangaluru police arrested 11 people

Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ…

Read More