TOP NEWS
Legal Faceoff in Renukaswamy Case Prosecution Demands Re Cross Examination of Mother Darshan Counsel Opposes

Renukaswamy Case: ರೇಣುಕಾಸ್ವಾಮಿ ತಾಯಿ ಮರು ಪಾಟೀ ಸವಾಲಿಗೆ ಪ್ರಾಸಿಕ್ಯೂಷನ್ ಪಟ್ಟು

ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ದಿನಕ್ಕೊಂದು ಮಹತ್ವದ ತಿರುವುಗಳು ಸಿಗುತ್ತಿವೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಮೃತನ ತಾಯಿ ರತ್ನಪ್ರಭಾ ಅವರನ್ನು ‘ಪ್ರತಿಕೂಲ ಸಾಕ್ಷಿ’ (ಹೊಸ್ಟೈಲ್ ವಿಟ್ನೆಸ್) ಎಂದು ಪರಿಗಣಿಸಿ, ಅವರನ್ನು ಮರು ಪಾಟೀಸವಾಲಿಗೆ ಒಳಪಡಿಸಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಬುಧವಾರ (ಆಗಸ್ಟ್ 12) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಷೆಡ್‌ನಿಂದ ಬಂದಿದ್ದ ಕರೆಗಳೇ ಹೈಲೈಟ್ ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಅವರು ಕೋರ್ಟ್‌ನಲ್ಲಿ ಬಲವಾದ ವಾದ…

Read More
Tollywood Police Case Filed Against Singer Rahul Sipligunj and 11 Others for Threats

Tollywood: ಮದುವೆ ಆಮಿಷ, ಖಾಸಗಿ ವಿಡಿಯೋ ಲೀಕ್ ಬೆದರಿಕೆ: ವಿಶಾಖಪಟ್ಟಣಂನಲ್ಲಿ ರಾಹುಲ್ ಸಿಪ್ಲಿಗಂಜ್ ಸೇರಿ 12 ಜನರ ವಿರುದ್ಧ ಎಫ್‌ಐಆರ್!

ವಿಶಾಖಪಟ್ಟಣಂ: ಖ್ಯಾತ ಹಿನ್ನೆಲೆ ಗಾಯಕ ರಾಹುಲ್ ಸಿಪ್ಲಿಗಂಜ್ (Rahul Sipligunj) ಹಾಗೂ ಅವರ ಒಕ್ಕೂಟದ ಇತರ 11 ಜನರ ವಿರುದ್ಧ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಪೊಲೀಸ್ ಪ್ರಕರಣ (Tollywood) ದಾಖಲಾಗಿದೆ. ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ಗಂಭೀರ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.‌ ಮಹಿಳೆಗೆ ಬೆದರಿಕೆ ಹಾಕಿದ ಗಾಯಕ ಮಹಿಳೆಯ ದೂರಿನ ಪ್ರಕಾರ, ಗಾಯಕ ರಾಹುಲ್ ಸಿಪ್ಲಿಗಂಜ್ ಅವರ ಭಾವ ಮೈದುನನಾದ ಕರ್ಪೂರಪು ರಾಹುಲ್ ರೆಡ್ಡಿ ಎಂಬಾತ ತನಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ….

Read More
Tragedy in Bengaluru Mudslide at BDA Underpass Project Buries Two Laborers Alive

Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್‌ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್‌ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್‌ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…

Read More
Crime Kalaburagi Horror Suspicious Husband Triggers Gelatin Explosion to Kill Family Self and Daughter Killed

Crime: ಕಲಬುರಗಿಯಲ್ಲಿ ಭೀಕರ ದುರಂತ: ಪತ್ನಿ ಮೇಲಿನ ಅನುಮಾನಕ್ಕೆ ಮನೆಯಲ್ಲೇ ಜಿಲೆಟಿನ್ ಬ್ಲಾಸ್ಟ್; ತಂದೆ, ಮಗಳು ಸಾವು!

ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್‌ನ…

Read More
Renukaswamy Case Court Defers 14th Accuseds Approver Plea Giving Darshan and Co a Brief Breathing Space

Renukaswamy Case: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ನಟ ದರ್ಶನ್ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಚಿತ್ರರಂಗ ಹಾಗೂ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ಈ ಕೇಸ್‌ನ 14ನೇ ಆರೋಪಿ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಿತು. ಸತತ 3ನೇ ದಿನವೂ ನ್ಯಾಯಾಲಯದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಈ ವೇಳೆ ಸರ್ಕಾರದ…

Read More
Big News Pradosh Allowed to Become Approver in Renukaswamy Murder Case Fresh Trouble for Actor Darshan

Big News: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು; ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿದ್ದ ಅರ್ಜಿಯನ್ನು (Big News) ನ್ಯಾಯಾಲಯ ಪುರಸ್ಕರಿಸಿದ್ದು, ಇದರಿಂದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಭಾರಿ ಹಿನ್ನಡೆಯಾಗಿದೆ. ಆರೋಪಿಗಳ ಆಕ್ಷೇಪಣೆ ಅರ್ಜಿ ಕೋರ್ಟ್ ವಜಾ! ಪ್ರದೋಶ್ ಮಾಫಿ ಸಾಕ್ಷಿಯಾಗುವುದನ್ನು ವಿರೋಧಿಸಿ ದರ್ಶನ್ ಹಾಗೂ ಇತರ ಸಹ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More