TOP NEWS
Khameneis Funeral Iran Signals Defiance to US Israel Asserts Dominance in Middle East Politics

Iran: ಖಮೇನಿ ಅಂತ್ಯಕ್ರಿಯೆಯನ್ನೇ ಜಾಗತಿಕ ರಾಜತಾಂತ್ರಿಕ ಅಸ್ತ್ರವಾಗಿಸಿಕೊಂಡ ಇರಾನ್: ವಿಶ್ವದ 70ಕ್ಕೂ ಹೆಚ್ಚು ದೇಶಗಳ ಭಾಗಿ, ಪ್ರತೀಕಾರದ ಎಚ್ಚರಿಕೆ!

ಟೆಹರಾನ್: ಇರಾನ್‌ನ (Iran) ಪರಮೋಚ್ಚ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ವಾರವಿಡೀ ನಡೆಯಲಿರುವ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಇರಾನ್ ಸರ್ಕಾರವು ತನ್ನ ರಾಜಕೀಯ ಶಕ್ತಿ ಪ್ರದರ್ಶನ ಹಾಗೂ ಧಾರ್ಮಿಕ ಸಂದೇಶ ರವಾನಿಸುವ ಜಾಗತಿಕ ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ. ಕಳೆದ ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ್ದ ಜಂಟಿ ವೈಮಾನಿಕ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದರು. ಈ ದುರಂತ ಸಂಭವಿಸಿ ದೀರ್ಘ ಅವಧಿಯ ನಂತರ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲಾಗಿರುವ ಈ ಅಂತಿಮಯಾತ್ರೆಯು ಇಡೀ ವಿಶ್ವದ ಗಮನ ಸೆಳೆದಿದೆ. ಅಮೆರಿಕ-ಇಸ್ರೇಲ್ ವಿರುದ್ಧದ…

Read More
Pahalgam Tourist Massacre NIA Files Supplementary Chargesheet Naming LeT Chief Hafiz Saeed as Mastermind

NIA: ಪಹಲ್ಗಾಮ್ ಪ್ರವಾಸಿಗರ ಹತ್ಯಾಕಾಂಡ: ಲಷ್ಕರ್ ಹಫೀಜ್ ಸಯೀದ್ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಕೆ!

ನವದೆಹಲಿ: ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಅಮಾಯಕ ಪ್ರವಾಸಿಗರ ಭೀಕರ ಹತ್ಯಾಕಾಂಡದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹತ್ವದ ಹೆಜ್ಜೆ ಇಟ್ಟಿದೆ. ಈ ರಕ್ತಪಾತದ ಜಾಲ ಹೆಣೆದಿದ್ದ ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಸೂತ್ರಧಾರಿ ಹಫೀಜ್ ಸಯೀದ್‌ನನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ದೋಷಾರೋಪ ಪಟ್ಟಿ (Supplementary Chargesheet) ಸಲ್ಲಿಸಿದೆ. ಜಮ್ಮುವಿನ ವಿಶೇಷ ಎನ್‌ಐಎ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಈ ಚಾರ್ಜ್‌ಶೀಟ್‌ನಲ್ಲಿ, ಲಷ್ಕರ್-ಎ-ತೊಯ್ಬಾ…

Read More
Yogi Adityanath Government Big Move Jalalabad Officially Renamed Parashuramapuri

Yogi Adityanath: ಉತ್ತರ ಪ್ರದೇಶದಲ್ಲಿ ಮತ್ತೊಂದು ನಗರದ ಹೆಸರು ಬದಲಾವಣೆ: ಜಲಾಲಾಬಾದ್ ಇನ್ಮುಂದೆ ‘ಪರಶುರಾಮಪುರಿ’

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಸರ್ಕಾರವು ಮತ್ತೊಂದು ಮಹತ್ವದ ಹೆಸರು ಬದಲಾವಣೆಯ ತೀರ್ಮಾನ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಷಹಜಹಾನ್‌ಪುರ ಜಿಲ್ಲೆಯ ಪ್ರಮುಖ ಪಟ್ಟಣವಾದ ಜಲಾಲಾಬಾದ್ ಹೆಸರನ್ನು ಅಧಿಕೃತವಾಗಿ ‘ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಈ ಐತಿಹಾಸಿಕ ತೀರ್ಮಾನದ ಮೂಲಕ ಈ ಪ್ರಾಚೀನ ಪಟ್ಟಣಕ್ಕೆ ಹೊಸ ಸಾಂಸ್ಕೃತಿಕ ಹಾಗೂ ಧಾರ್ಮಿಕ ಗುರುತು ಸಿಕ್ಕಂತಾಗಿದೆ. ಸ್ಥಳದ ಹಿನ್ನಲೆ ಏನು? ಪೌರಾಣಿಕ ಹಿನ್ನೆಲೆಯ ಪ್ರಕಾರ, ಈ ಜಲಾಲಾಬಾದ್ ಪ್ರದೇಶವು…

Read More
Ram mandir Trust chief Nritya Gopal Das breaks silence on donation row

Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್‌ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…

Read More
Who will succeed Champat Rai as Ram mandir Trust General Secretary

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…

Read More
RSS releases video statement regarding ram mandir donation row

Ram Mandir: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣಕ್ಕೆ ಆರ್‌ಎಸ್‌ಎಸ್ ತೀವ್ರ ಬೇಸರ; ನಿಷ್ಪಕ್ಷಪಾತ ತನಿಖೆಗೆ ದತ್ತಾತ್ರೇಯ ಹೊಸಬಾಳೆ ಆಗ್ರಹ!

ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಒತ್ತಾಯಿಸಿದೆ. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಪ್ಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಅತ್ಯಗತ್ಯ ಎಂದು ಶುಕ್ರವಾರ ಹೇಳಿಕೆ ನೀಡಿರುವ ಆರ್‌ಎಸ್‌ಎಸ್, ಈ ವಂಚನೆಯಿಂದಾಗಿ ರಾಮಭಕ್ತರ ಮನಸ್ಸಿಗೆ ತೀವ್ರ ‘ನೋವು’ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೇಳಿಕೆ ಬಿಡುಗಡೆ ಮಾಡಿದ ಆರ್‌ಎಸ್‌ಎಸ್‌ ವಿಡಿಯೋ ಹೇಳಿಕೆಯೊಂದನ್ನು…

Read More
Fuel Price Cut Likely in India If Global Crude oil Prices Remain Low

Crude Oil: ಕಚ್ಚಾ ತೈಲ ದರ ಕುಸಿತ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುತ್ತಾ?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ (Crude Oil) ದರಗಳು ಸತತವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶದ ಜನತೆಗೆ ಶೀಘ್ರದಲ್ಲೇ ಇಂಧನ ದರ ಇಳಿಕೆಯ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಮುಂದಿನ ಕೆಲವು ವಾರಗಳ ಕಾಲ ಇದೇ ರೀತಿ ಕಡಿಮೆ ಮಟ್ಟದಲ್ಲಿ ಮುಂದುವರಿದರೆ, ದೇಶೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಡಿತಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್…

Read More