Congress angry about modi silence on ram mandir issue

Ram Mandir: ರಾಮ ಮಂದಿರ ದೇಣಿಗೆ ಹಗರಣಕ್ಕೆ ರಾಜಕೀಯ ಟ್ವಿಸ್ಟ್: ಪ್ರಧಾನಿ ಮೋದಿ ಮೌನಕ್ಕೆ ಕಾಂಗ್ರೆಸ್ ಕಿಡಿ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಮತ್ತು ಹಣ ದುರುಪಯೋಗದ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ಈ ಹಗರಣದ ಕುರಿತು ಪ್ರಧಾನಿಯವರು ಮೌನ ವಹಿಸಿರುವುದು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಮಾಡಿದ ನೇರ ದ್ರೋಹ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ, ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಯೋಜಿಸಿದ್ದ ಕಾಂಗ್ರೆಸ್ ನಿಯೋಗದ ನೇತೃತ್ವ…

Read More
shocking terrorist facilitator arrested in kathua

Shocking: ಭದ್ರತಾ ಪಡೆಗಳ ಬಿಗ್ ಆಪರೇಷನ್: ಕಥುವಾದಲ್ಲಿ ಉಗ್ರರ ಸಹಚರನ ಹೆಡೆಮುರಿ ಕಟ್ಟಿದ ಪೊಲೀಸರು!

ಜಮ್ಮು-ಕಾಶ್ಮೀರ: ವಾರ್ಷಿಕ ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಯಶಸ್ಸು ಸಾಧಿಸಿವೆ. ಜಮ್ಮು-ಕಾಶ್ಮೀರದ ಕಥುವಾ ಪೊಲೀಸರು ನಡೆಸಿದ ಬಿಗಿ ಕಾರ್ಯಾಚರಣೆಯಲ್ಲಿ (Shocking) ಪಾಕಿಸ್ತಾನಿ ಉಗ್ರರಿಗೆ ನೆರವು ನೀಡುತ್ತಿದ್ದ ಪ್ರಮುಖ ಸಂಚುಕೋರ ಹಾಜಿ ಲತೀಫ್ ಎಂಬಾತನನ್ನು ಬಂಧಿಸಲಾಗಿದೆ. ಜುಲೈ 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಿ ನಿಗಾ ವಹಿಸಲಾಗಿದ್ದ ಸಂದರ್ಭದಲ್ಲೇ ಈ ಮಹತ್ವದ ಬಂಧನ ನಡೆದಿದೆ. 12ಕ್ಕೂ…

Read More
paper leak rajasthan paramedical exam cancelled

Paper Leak: ಲಕ್ಷ ಲಕ್ಷ ಹಣ ಪಡೆದು ಪರೀಕ್ಷೆ ಪಾಸ್ ಮಾಡಿಸಲು ಡೀಲ್: ರಾಜಸ್ಥಾನದಲ್ಲಿ ಪೇಪರ್ ಲೀಕ್ ಬೆನ್ನಲ್ಲೇ ಭಾರಿ ವಂಚನೆ ಬಯಲು!

ರಾಜಸ್ಥಾನ: ಜೈಪುರದಲ್ಲಿ ಪ್ಯಾರಾ ಮೆಡಿಕಲ್ ಕೌನ್ಸಿಲ್ (RPMC) ಪರೀಕ್ಷೆಯಲ್ಲಿ ಭಾರಿ ಅಕ್ರಮ ಎಸಗಲು ಯತ್ನಿಸಿದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮೊದಲ ವರ್ಷದ 45 ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವ ಭರವಸೆ ನೀಡಿ, ಅವರಿಂದ ತಲಾ 5.5 ಲಕ್ಷ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಕಾಲೇಜು ಅಧಿಕಾರಿಗಳು ಸೇರಿದಂತೆ ನಾಲ್ವರನ್ನು (Paper Leak) ಜೈಪುರ ಪೊಲೀಸರು ಬಂಧಿಸಿದ್ದಾರೆ. ಜೂನ್ 29 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗೂ ಮುನ್ನವೇ ಜೂನ್ 27 ರಂದು ಲಭ್ಯವಾದ ಖಚಿತ…

Read More
Ram mandir donation row accused revealed all story

Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….

Read More
supreme court declined plea about ram mandir urgent hearing application for cbi investigation

Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….

Read More
good news CBSE class 7 8 9 students can continue learning foreign languages

CBSE: ಸಿಬಿಎಸ್‌ಇ ದಿಢೀರ್ ಭಾಷಾ ನೀತಿ ಬದಲಾವಣೆಗೆ ಬ್ರೇಕ್: ಹಳೇ ಬ್ಯಾಚ್ ವಿದ್ಯಾರ್ಥಿಗಳಿಗೆ ಹಳೇ ನಿಯಮವೇ ಅನ್ವಯ

ನವದೆಹಲಿ: ಸಿಬಿಎಸ್‌ಇ (CBSE) ಶಾಲೆಗಳಲ್ಲಿ ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ಭಾರಿ ಸಮಾಧಾನಕರ ಸುದ್ದಿ ನೀಡಿದೆ. ಪ್ರಸ್ತುತ 7, 8 ಮತ್ತು 9ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಮುಗಿಯುವವರೆಗೆ ತ್ರಿಭಾಷಾ ನೀತಿಯಡಿ ವಿದೇಶಿ ಭಾಷೆಗಳ ಕಲಿಕೆಯನ್ನು ಮುಂದುವರಿಸಬಹುದು ಎಂದು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿವೆ. ಈ ಹೊಸ ನಿರ್ಧಾರದಿಂದಾಗಿ ದಿಢೀರ್ ಭಾಷಾ ಬದಲಾವಣೆಯ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಳರಾಗಿದ್ದಾರೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆ ನಿಯಮ ಮುಂಬರುವ ಜುಲೈ…

Read More
Minister Bhagirath Choudhary takes subsidy for his cucumber crop

Subsidy: ನಾನೊಬ್ಬ ರೈತ, ನಿಯಮಬದ್ಧವಾಗಿಯೇ ಸಬ್ಸಿಡಿ ಪಡೆದಿದ್ದೇನೆ: ವಿವಾದಕ್ಕೆ ಕೇಂದ್ರ ಸಚಿವ ಭಾಗೀರಥ್ ಚೌಧರಿ ಸ್ಪಷ್ಟನೆ!

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಯ ಯೋಜನೆಯೊಂದರ ಅಡಿಯಲ್ಲಿ ಸೌತೆಕಾಯಿ ಬೇಸಾಯಕ್ಕಾಗಿ ಬರೋಬ್ಬರಿ 99 ಲಕ್ಷ 60 ಸಾವಿರ ರೂಪಾಯಿ ಸರ್ಕಾರಿ ಸಬ್ಸಿಡಿ (Subsidy) ಪಡೆದಿರುವುದು ಇದೀಗ ದೇಶಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತಂದಿರುವ ವಿರೋಧ ಪಕ್ಷಗಳು, ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಷ್ಟು ದೊಡ್ಡ ಮೊತ್ತದ ಸಬ್ಸಿಡಿ ಲಪಟಾಯಿಸಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿವೆ….

Read More