Rahul Gandhi: ಸಿಬಿಎಸ್ಇ ವಿರುದ್ಧ ರಾಹುಲ್ ಗಾಂಧಿ ಕಿಡಿ: ತಪ್ಪು ಮಂಡಳಿಯದ್ದು, ವಿದ್ಯಾರ್ಥಿಗಳಿಗೆ ಹಣದ ದಂಡ!
ನವದೆಹಲಿ: ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತಾನೇ ಎಡವಟ್ಟು ಮಾಡಿ, ಈಗ ಅದನ್ನು ಸರಿಪಡಿಸಲು ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿರುವ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSE) ಧೋರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕಟುವಾಗಿ ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೆ ‘ಜೇಬುಕಳ್ಳರು’ ಕುಳಿತಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ಮಂಡಳಿಯು ಜ್ಞಾನದಾನದ ಸೇವೆಯನ್ನು ಬದಿಗಿಟ್ಟು ಶಿಕ್ಷಣವನ್ನು ಕೇವಲ ಒಂದು ಲಾಭದಾಯಕ ಉದ್ಯಮವನ್ನಾಗಿ ಮಾಡಿಕೊಂಡಿದೆ ಎಂದು…
