TOP NEWS
Bikaji Foods founder Shiv Ratan Agarwal passes away

Shiv Ratan: ಬಿಕಾಜಿ ಫುಡ್ಸ್ ಸಂಸ್ಥಾಪಕ ಶಿವ ರತನ್ ಅಗರ್ವಾಲ್ ನಿಧನ

ಚೆನ್ನೈ: ಪ್ಯಾಕೇಜ್ಡ್ ಸ್ನ್ಯಾಕ್ಸ್ ಮತ್ತು ಸಿಹಿತಿಂಡಿಗಳ ಕ್ಷೇತ್ರದಲ್ಲಿ ದೇಶದ ಪ್ರಮುಖ ಕಂಪನಿಯಾಗಿರುವ ‘ಬಿಕಾಜಿ ಫುಡ್ಸ್ ಇಂಟರ್‌ನ್ಯಾಷನಲ್’ನ ಸಂಸ್ಥಾಪಕ ಮತ್ತು ಅಧ್ಯಕ್ಷ ಶಿವ ರತನ್ ಅಗರ್ವಾಲ್ (Shiv Ratan) ಅವರು ನಿಧನರಾಗಿದ್ದಾರೆ. ಏಪ್ರಿಲ್ 23 ರಂದು ಅಗರ್ವಾಲ್ ವಿಧಿವಶರಾಗಿರುವ ವಿಷಯವನ್ನು ಕಂಪನಿಯು ಷೇರುಪೇಟೆಗೆ ನೀಡಿರುವ ಅಧಿಕೃತ ಮಾಹಿತಿಯಲ್ಲಿ ಖಚಿತಪಡಿಸಿದೆ. ಸಾಂಪ್ರದಾಯಿಕ ಭಾರತೀಯ ತಿಂಡಿ ತಿನಿಸುಗಳನ್ನು ದೇಶ-ವಿದೇಶಗಳಲ್ಲಿ ಜನಪ್ರಿಯಗೊಳಿಸುವಲ್ಲಿ ಅಗರ್ವಾಲ್ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ನಿಧನದ ಕಾರಣವನ್ನು ಕಂಪನಿ ಬಹಿರಂಗಪಡಿಸಿಲ್ಲ. ಕಂಪನಿ ಹೇಳಿದ್ದೇನು? ನಿಯಮಗಳ ಪ್ರಕಾರ ಶಿವ…

Read More
Am I a criminal? Pawan Khera asks as SC

Pawan Khera: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಎಫ್‌ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮಗೆ ನೀಡಲಾಗಿದ್ದ ಸಾರಿಗೆ ನಿಬಂಧಿತ ಜಾಮೀನು (Transit Bail) ಅವಧಿಯನ್ನು ಮಂಗಳವಾರದವರೆಗೆ ವಿಸ್ತರಿಸಬೇಕು ಎಂದು ಖೇರಾ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠವು ಈ ಆದೇಶ ನೀಡಿದ್ದು, ಅಸ್ಸಾಂನ…

Read More
china becomes indias biggest trade partner

CHINA: ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾದ ಚೀನಾ

ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದ್ದ ಅಮೆರಿಕವನ್ನು ಹಿಂದಿಕ್ಕಿ ಚೀನಾ (China) ಮತ್ತೆ ಮೊದಲ ಸ್ಥಾನಕ್ಕೇರಿದೆ. ಸರ್ಕಾರದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಭಾರತ ಮತ್ತು ಚೀನಾ ನಡುವಿನ ಒಟ್ಟು ದ್ವಿಪಕ್ಷೀಯ ವ್ಯಾಪಾರವು ಬರೋಬ್ಬರಿ 151.1 ಬಿಲಿಯನ್ ಡಾಲರ್‌ಗೆ ತಲುಪಿದೆ. ಈ ಮೂಲಕ 2021-22ರಿಂದ ಸತತವಾಗಿ ಅಗ್ರಸ್ಥಾನದಲ್ಲಿದ್ದ ಅಮೆರಿಕವನ್ನು ಚೀನಾ ಎರಡನೇ ಸ್ಥಾನಕ್ಕೆ ತಳ್ಳಿದ್ದು, ಜಾಗತಿಕ ವ್ಯಾಪಾರ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೇಗಿದೆ ರಫ್ತು-ಆಮದು ಅಂಕಿಅಂಶ? ಕಳೆದ ಹಣಕಾಸು…

Read More
Israeli forces strike Hezbollah positions

Israel: ಹಿಜ್ಬುಲ್ಲಾ ಉಗ್ರರ ಮೇಲೆ ಮತ್ತೆ ಇಸ್ರೇಲ್‌ ದಾಳಿ

ಬೈರುತ್: ದಕ್ಷಿಣ ಲೆಬನಾನ್‌ನ ಆಯಕಟ್ಟಿನ ಪ್ರದೇಶವಾದ ಬಿಂಟ್ ಜಬೀಲ್ ನಗರವನ್ನು ಗುರಿಯಾಗಿಸಿಕೊಂಡು ಇಸ್ರೇಲ್ (Israel) ಸೇನೆ ತನ್ನ ಭೀಕರ ದಾಳಿಯನ್ನು ಮುಂದುವರಿಸಿದೆ. ಹಿಜ್ಬುಲ್ಲಾ ಉಗ್ರರ ವಿರುದ್ಧ ಸಮರ ಸಾರಿರುವ ಇಸ್ರೇಲ್ ಕಮಾಂಡೋಗಳು, ಸರಣಿ ದಾಳಿಗಳ ಮೂಲಕ ಸಂಘಟನೆಯ ಹತ್ತಾರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಮತ್ತು ಅವರ ಪ್ರಮುಖ ನೆಲೆಗಳನ್ನು ನಾಶಪಡಿಸಿರುವುದಾಗಿ ಘೋಷಿಸಿವೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ತೀವ್ರ ರಕ್ತಪಾತ ಮುಂದುವರಿದಿದ್ದು, ಇಡೀ ಪ್ರದೇಶವು ಯುದ್ಧ ಭೂಮಿಯಾಗಿ ಮಾರ್ಪಟ್ಟಿದೆ. ಇಸ್ರೇಲ್‌ ಹೇಳಿದ್ದೇನು? ಇಸ್ರೇಲ್ ಪ್ರಧಾನಿ ಬೆಂಜಮಿನ್…

Read More
Why opposition are against delimitation Mallikarjun Kharge taunts center

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ, ಸಂಸತ್ತು ಹೈಜಾಕ್‌ ಮಾಡೋಕೆ ಬಿಡಲ್ಲ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೆಂಡಕಾರಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ನೆಪದಲ್ಲಿ ಕೇಂದ್ರ ಸರ್ಕಾರವು ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಕಳ್ಳತನದಿಂದ ಜಾರಿಗೆ ತರಲು ಸಂಚು ರೂಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ಮೀಸಲಾತಿಯ ಮುಖವಾಡ ಧರಿಸಿ ಸಂವಿಧಾನ ಮತ್ತು ಸಂಸತ್ತನ್ನು…

Read More
Tejasvi Surya taunts opposition regarding delimitation

Tejasvi Surya: ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಬ್ಯಾಟಿಂಗ್: ವಿರೋಧ ಪಕ್ಷಗಳದ್ದು ಮೊಸಳೆ ಕಣ್ಣೀರು ಎಂದು ವಾಗ್ದಾಳಿ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಕ್ಷೇತ್ರ ಪುನರ್ ವಿಂಗಡಣೆ (ಡೆಲಿಮಿಟೇಶನ್) ಕುರಿತಾದ ಚರ್ಚೆಯಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಾದವನ್ನ ಲೇವಡಿ ಮಾಡಿದ ಸೂರ್ಯ ವಿರೋಧ ಪಕ್ಷಗಳ ತರ್ಕವನ್ನು ಕಟುವಾಗಿ ಪ್ರಶ್ನಿಸಿದ ಅವರು, ಸಂವಿಧಾನಬದ್ಧವಾಗಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವುದರ ಹಿಂದೆ ಯಾವುದೇ ಸಕಾರಣವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್‌ನ ವಾದವನ್ನು ಲೇವಡಿ ಮಾಡಿದ ಸೂರ್ಯ, ಅವರ ತರ್ಕದ ಪ್ರಕಾರ ಹೋದರೆ ಮುಖೇಶ್ ಅಂಬಾನಿಯಂತಹ ಶ್ರೀಮಂತರಿಗೆ ಲಕ್ಷಾಂತರ ಮತಗಳು…

Read More
Narendra modi talks in parliament regarding women reservation

Narendra Modi: ಮೀಸಲಾತಿ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ: ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…

Read More