TOP NEWS
Day after high court order many devotees worship in bhojshala

Bhojshala: ಭೋಜಶಾಲಾ ಮಂದಿರದಲ್ಲಿ ಮುಕ್ತವಾಗಿ ಪೂಜೆ ನೆರವೇರಿಸಿದ ಭಕ್ತರು!

ಧಾರ್ (ಮಧ್ಯಪ್ರದೇಶ): ವಿವಾದಿತ ಭೋಜಶಾಲಾ (Bhojshala) ಸಂಕೀರ್ಣವು ವಾಗ್ದೇವಿ ಅಂದರೆ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಹೈಕೋರ್ಟ್ ಘೋಷಿಸಿದ ಮರುದಿನವೇ ಹಿಂದೂ ಸಮುದಾಯದ ನೂರಾರು ಭಕ್ತರು ಅಲ್ಲಿಗೆ ಧಾವಿಸಿ ದರ್ಶನ ಪಡೆದಿದ್ದಾರೆ. ದೀರ್ಘ ವರ್ಷಗಳ ಹೋರಾಟದ ನಂತರ ಯಾವುದೇ ಅಡೆತಡೆಗಳಿಲ್ಲದೆ ದೇವಿಯ ದರ್ಶನ ಭಾಗ್ಯ ಸಿಕ್ಕಿರುವುದು ಇಡೀ ಹಿಂದೂ ಸಮಾಜಕ್ಕೆ ಸಿಕ್ಕ ದೊಡ್ಡ ಜಯ ಎಂದು ಸಂತಸ ಹಂಚಿಕೊಂಡಿರುವ ಭಕ್ತರು, ಇನ್ಮುಂದೆ ದಿನಾಲೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಭೋಜ ಉತ್ಸವ ಸಮಿತಿಯ ಸಂರಕ್ಷಕ ಅಶೋಕ್…

Read More
NEET CBI arrests mastermind who leaked Biology paper

NEET: ನೀಟ್ ಪತ್ರಿಕೆ ಲೀಕ್ ಹಗರಣ: ಎನ್‌ಟಿಎ (NTA) ಬಯಾಲಜಿ ತಜ್ಞೆ ಸಿಬಿಐ ವಶಕ್ಕೆ!

ನವದೆಹಲಿ: ದೇಶಾದ್ಯಂತ ತಲ್ಲಣ ಮೂಡಿಸಿರುವ ‘ನೀಟ್-ಯುಜಿ 2026’ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಭಾರಿ ಬೇಟೆಯಾಡಿದೆ. ಹಗರಣದ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಪ್ರೊಫೆಸರ್ ಮನಿಷಾ ಗುರುನಾಥ್ ಮಾಂಧರೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜೀವಶಾಸ್ತ್ರ (Biology) ವಿಭಾಗದ ಪತ್ರಿಕೆ ಸೋರಿಕೆಯಾಗಲು ಇವರೇ ಮುಖ್ಯ ಕಾರಣ ಎಂದು ಸಿಬಿಐ ಮೂಲಗಳು ತಿಳಿಸಿವೆ. ಪ್ರಶ್ನೆಪತ್ರಿಕೆಯ ಸಂಪೂರ್ಣ ಪ್ರವೇಶ ಹೊಂದಿದ್ದ ಪ್ರೊಫೆಸರ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮನಿಷಾ ಮಾಂಧರೆ…

Read More
SP leader azam khan sentenced with 2 years jail and 5 thousand fine

Azam Khan: ಅಧಿಕಾರಿಗಳ ವಿರುದ್ಧ ನಿಂದನೆ: ಆಜಂ ಖಾನ್‌ಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್

ನವದೆಹಲಿ: ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷದ (SP) ಪ್ರಭಾವಿ ನಾಯಕ ಆಜಂ ಖಾನ್ (Azam Khan) ಅವರಿಗೆ ಕಾನೂನು ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಕಳೆದ 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಸಾಬೀತಾಗಿದ್ದು, ವಿಶೇಷ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಏನಿದು ವಿವಾದಾತ್ಮಕ ಭಾಷಣ?: 2019ರಲ್ಲಿ ನಡೆದ ಚುನಾವಣಾ ಸಮಾವೇಶವೊಂದರಲ್ಲಿ ಮಾತನಾಡಿದ್ದ ಆಜಂ ಖಾನ್,…

Read More
Many states took steps towards Narendra modi suggestion

Narendra Modi: ತೈಲ ಬಿಕ್ಕಟ್ಟಿಗೆ ದೇಶಾದ್ಯಂತ ಮಿತವ್ಯಯದ ಬ್ರೇಕ್: ಕೇಂದ್ರ ಮತ್ತು ವಿವಿಧ ರಾಜ್ಯಗಳ ಮಹತ್ವದ ಕ್ರಮಗಳು

ನವದೆಹಲಿ: ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ತೈಲ ಬಿಕ್ಕಟ್ಟನ್ನು ಎದುರಿಸಲು ಮತ್ತು ವಿದೇಶಿ ವಿನಿಮಯ ಮೀಸಲನ್ನು ಕಾಯ್ದುಕೊಳ್ಳಲು ಕೇಂದ್ರ ಹಾಗೂ ದೇಶದ ವಿವಿಧ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಮಿತವ್ಯಯ ಕ್ರಮಗಳಿಗೆ ಮುಂದಾಗಿವೆ. ಪ್ರಧಾನಿ ಮೋದಿಯವರ (Narendra Modi) ಸಲಹೆಯ ಮೇರೆಗೆ ಆಡಳಿತ ವ್ಯವಸ್ಥೆಯಲ್ಲಿ ಇಂಧನ ವ್ಯಯವಾಗುವುದನ್ನು ತಡೆಯಲು ಭಾರಿ ಬದಲಾವಣೆಗಳನ್ನು ತರಲಾಗುತ್ತಿದೆ. ಮಾದರಿಯಾದ ಕೇಂದ್ರ ಸರ್ಕಾರ: ಮಿತವ್ಯಯದ ಹಾದಿಯಲ್ಲಿ ಕೇಂದ್ರ ಸರ್ಕಾರವೇ ಮೊದಲ ಹೆಜ್ಜೆ ಇಟ್ಟಿದ್ದು, ಪ್ರಧಾನಮಂತ್ರಿಯವರ ಅಧಿಕೃತ ಎಸ್‌ಪಿಜಿ (SPG) ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇಕಡಾ…

Read More
NEET 4 student took life after cancellation of exam

NEET: ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಎಫೆಕ್ಟ್: ಪರೀಕ್ಷೆ ರದ್ದತಿಯ ಆಘಾತಕ್ಕೆ ದೇಶಾದ್ಯಂತ ನಾಲ್ವರು ವಿದ್ಯಾರ್ಥಿಗಳ ಬಲಿ

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET) ಪರೀಕ್ಷೆಯನ್ನು ಹಠಾತ್ ರದ್ದುಗೊಳಿಸಿದ ಸರ್ಕಾರದ ತೀರ್ಪು ದೇಶದಲ್ಲಿ ಭಾರಿ ಆಕ್ರೋಶ ಮತ್ತು ಕಳವಳಕ್ಕೆ ಕಾರಣವಾಗಿದೆ. ಭವಿಷ್ಯದ ವೈದ್ಯರಾಗುವ ಕನಸು ಹೊತ್ತಿದ್ದ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಕಂಗಾಲಾಗಿ ಬೇರೆ ಬೇರೆ ರಾಜ್ಯಗಳಲ್ಲಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಕೈಗೆ ಬಂದ ಸೀಟು ಜಾರಿದ್ದಕ್ಕೆ ರಾಜಸ್ಥಾನದ ಪ್ರದೀಪ್ ಆತ್ಮಹತ್ಯೆ: ಕಳೆದ ಮೂರು ವರ್ಷಗಳಿಂದ ರಾಜಸ್ಥಾನದ ಸೀಕರ್‌ನಲ್ಲಿ ತಂಗಿ ಹಗಲಿರುಳು ಶ್ರಮಿಸುತ್ತಿದ್ದ ಪ್ರದೀಪ್ ಮೇಘವಾಲ್ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ….

Read More
medical shop shut down on may 20th nationwide to ban online service

Medical Shops: ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್!

ನವದೆಹಲಿ: ಮೇ 20 ರಂದು ದೇಶಾದ್ಯಂತ ವೈದ್ಯಕೀಯ ಅಂಗಡಿಗಳು (Medical Shops) ಮುಚ್ಚಲಿವೆ ಎಂಬ ಒಕ್ಕಣೆಯುಳ್ಳ ಪೋಸ್ಟರ್ ಹಾಗೂ ವಿಡಿಯೋಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಆರಂಭದಲ್ಲಿ ಸಾರ್ವಜನಿಕರು ಇದನ್ನು ಕೇವಲ ಇಂಟರ್ನೆಟ್ ವದಂತಿ ಎಂದು ನಿರ್ಲಕ್ಷಿಸಿದ್ದರಾದರೂ, ಈ ಸುದ್ದಿ ಈಗ ಅಧಿಕೃತವಾಗಿ ನಿಜವಾಗಿದೆ. ಭಾರತದ ಅತ್ಯಂತ ದೊಡ್ಡ ಔಷಧ ವ್ಯಾಪಾರಿಗಳ ಸಂಘಟನೆಯಾದ ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್’ (AIOCD) ಮೇ 20 ರಂದು 24 ಗಂಟೆಗಳ…

Read More
NEET UG paper leak cbi digging tin to matter accused MBBS daughter goes missing

NEET: ನೀಟ್ ಹಗರಣಕ್ಕೆ ಸಿನಿಮೀಯ ತಿರುವು: ತಂದೆಯ ಬಂಧನದ ಬೆನ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ

ರಾಜಸ್ಥಾನ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದ್ದು, ಈಗ ಯಾವುದೋ ಕ್ರೈಂ ಸಿನಿಮಾದ ಕಥೆಯಂತೆ ಭಾಸವಾಗುತ್ತಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಈ ಜಾಲದ ತನಿಖೆ ಈಗ ದೌಸಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೆಟ್ಟಿಲೇರಿದ್ದು, ಅಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಗತಿ ಬಿವಾಲ್ ಎಂಬಾಕೆ ದಿಢೀರ್ ನಾಪತ್ತೆಯಾಗಿರುವುದು ಹೊಸ ಸಂಚಲನ ಮೂಡಿಸಿದೆ. ಈಕೆಯ ತಂದೆ ಮಾಂಗಿಲಾಲ್ ಬಿವಾಲ್ ಮತ್ತು ಚಿಕ್ಕಪ್ಪ ದಿನೇಶ್ ಬಿವಾಲ್ ಅವರನ್ನು ಪತ್ರಿಕೆ ಸೋರಿಕೆ ಹಗರಣದಲ್ಲಿ…

Read More