TOP NEWS
Congress government should cut off the fuel taxes BY Vijayendra

BY Vijayendra: ಇಂಧನ ದರ ಏರಿಕೆ: ತೆರಿಗೆ ಕಡಿತಕ್ಕೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತವಾಗಿ ಹೆಚ್ಚುತ್ತಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆರವಾಗಲು ರಾಜ್ಯ ಸರ್ಕಾರವು ತನ್ನ ಪಾಲಿನ ವ್ಯಾಟ್ (ತೆರಿಗೆ) ಅನ್ನು ತಕ್ಷಣವೇ ಕಡಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚುತ್ತಿರುವುದು ನಿಜವಾದರೂ, ರಾಜ್ಯ ಸರ್ಕಾರ ತೆರಿಗೆ ತಗ್ಗಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದಿದ್ದಾರೆ….

Read More
Cm siddaramaiah about building stadium

CM Siddaramaiah: 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸಜ್ಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ,…

Read More
bjp state president related discussion started

BJP: ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟಕ್ಕಾಗಿ ಶ್ರೀರಾಮುಲು ಭರ್ಜರಿ ಲಾಬಿ: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶುರುವಾಯ್ತು ಪೈಪೋಟಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಸದ್ಯಕ್ಕೆ ಸದ್ದಿಲ್ಲದೆಯೇ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಮೂರು ವರ್ಷಗಳ ಅಧಿಕಾರಾವಧಿಯು 2026ರ ನವೆಂಬರ್‌ಗೆ ಕೊನೆಗೊಳ್ಳಲಿದ್ದು, ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಾಜಿ ಸಚಿವ ಬಿ. ಶ್ರೀರಾಮುಲು ಈ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಸಾರಥ್ಯ ವಹಿಸಿಕೊಳ್ಳಲು ಅವರು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಶ್ರೀರಾಮುಲು ಬೇಡಿಕೆಗಳ ಸರಮಾಲೆ ಬಿಜೆಪಿ…

Read More
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More
SSLC exam 2 key answers released by board here is the details

SSLC: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆವರೆಗಷ್ಟೇ ಅವಕಾಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ವಿಷಯವಾರು ಕರಡು ಕೀ ಉತ್ತರಗಳನ್ನು (Key Answers) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರು ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ, ಅದಕ್ಕೆ ನಾಳೆ ಕಡೆಯ ದಿನವಾಗಿದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ನಾಳೆ ಸಂಜೆ 5.30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೂಲಕವೇ ತಮ್ಮ ಆಕ್ಷೇಪಣೆಗಳನ್ನು…

Read More
protest march against nuclear power plant in sagara besuru village

Sagara: ಬೇಸೂರಿನಲ್ಲಿ ಅಣುಸ್ಥಾವರ ವಿರೋಧಿಸಿ ಪಾದಯಾತ್ರೆ, NOC ಕೊಡದಂತೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪಾದಯಾತ್ರೆ ನಡೆಸಲಾಗಿದೆ. ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗಿ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಯಿಂದ ಬೇಸೂರಿನಿಂದ ಸಾಗರ ಎಸಿ ಕಚೇರಿಯ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನ ಬೆಳಿಗ್ಗೆ 7 ಗಂಟೆಗೆ ಬೇಸೂರು ನಿಂದ ಸಾಗರ ತಾಲೂಕು ಕಚೇರಿ ವರೆಗೆ ಸರಿಸುಮಾರು 30 ಕಿಲೋಮೀಟರ್…

Read More
No entry to hijab in sslc second exam also

Hijab: ರಾಜ್ಯದಲ್ಲಿ ಇಂದಿನಿಂದ ಎಸ್​​ಎಸ್​​ಎಲ್​​ಸಿ 2ನೇ ಪರೀಕ್ಷೆ ಆರಂಭ: ಹಿಜಾಬ್ ನಿಯಮದ ಸುತ್ತ ಗೊಂದಲ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮೇ 18) ಎಸ್​​ಎಸ್​​ಎಲ್​​ಸಿ (SSLC) ಎರಡನೇ ಪರೀಕ್ಷೆಗಳು ಆರಂಭಗೊಂಡಿವೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡುವ ಕುರಿತು ಸರ್ಕಾರ ಇತ್ತೀಚೆಗಷ್ಟೇ ಹೊಸ ಮಾರ್ಗಸೂಚಿ ಪ್ರಕಟಿಸಿತ್ತಾದರೂ, ಪ್ರಸಕ್ತ ಪರೀಕ್ಷೆಯಲ್ಲಿ ಹಿಜಾಬ್ (Hijab) ಧರಿಸಿ ಬರೆಯಲು ವಿದ್ಯಾರ್ಥಿನಿಯರಿಗೆ ಅವಕಾಶ ಸಿಕ್ಕಿಲ್ಲ. ಜನಿವಾರ, ಶಿವದಾರ, ಲಿಂಗ ಮತ್ತು ರುದ್ರಾಕ್ಷಿ ಧರಿಸಲು ಸಮ್ಮತಿ ಇದ್ದರೂ, ಹಿಜಾಬ್ ನಿಷೇಧ ಮುಂದುವರಿದಿದೆ. ಹಳೆಯ ನಿಯಮದಂತೆಯೇ ಪರೀಕ್ಷೆ ಮೊದಲನೇ ಪರೀಕ್ಷೆಯ ಮಾದರಿಯಲ್ಲೇ ಈ ಬಾರಿಯೂ ಪರೀಕ್ಷಾ ಪ್ರಕ್ರಿಯೆಗಳು ನಡೆಯುತ್ತಿವೆ. ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ…

Read More