TOP NEWS
Warm Welcome for Former IPS Officer Annamalai During His Visit to Udupi Sri Krishna Matha

Annamalai: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಅಣ್ಣಾಮಲೈ: ಮಠದಲ್ಲಿ ಗೌರವ ಸತ್ಕಾರ

ಉಡುಪಿ: ತಮಿಳುನಾಡಿನ ಪ್ರಮುಖ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (Annamalai) ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಮಠದ ಆಡಳಿತ ಮಂಡಳಿ ಹಾಗೂ ಅರ್ಚಕರು ಮಾಜಿ ಪೊಲೀಸ್ ಅಧಿಕಾರಿಯನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ಸಂಪ್ರದಾಯದಂತೆ ಕನಕನ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಅಣ್ಣಾಮಲೈ ಅವರು ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ಶ್ರೀಮಠದ ತೀರ್ಥ ಪ್ರಸಾದ ಸ್ವೀಕರಿಸಿದ ಅವರಿಗೆ,…

Read More
Big news Karnataka Bans Production Sale of Tobacco and Nicotine Mixed Pan Masala

Big News: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಕರ್ನಾಟಕ ಸರ್ಕಾರ, ಬುಧವಾರದಂದು ಮಹತ್ವದ (Big News) ತೀರ್ಮಾನವೊಂದನ್ನು ಪ್ರಕಟಿಸಿದೆ. ತಂಬಾಕು ಹಾಗೂ ನಿಕೋಟಿನ್ ಅಂಶಗಳನ್ನು ಒಳಗೊಂಡಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಬಳಕೆಯ ಮೇಲೆ ಮುಂದಿನ ಒಂದು ವರ್ಷದ ಅವಧಿಗೆ ಸಂಪೂರ್ಣ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯಮದ ಪ್ರಕಾರ, ನಿಕೋಟಿನ್ ಮತ್ತು ತಂಬಾಕು ಮಿಶ್ರಿತ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…

Read More
Good news for Bengaluru Pourakarmikas as GBA Greenlights Bonus After Three Years

GBA: ಪೌರಕಾರ್ಮಿಕರಿಗೆ ಜಿಬಿಎ ಸಿಹಿಸುದ್ದಿ: ಮೂರು ವರ್ಷಗಳ ಬಳಿಕ ಸಿಗಲಿದೆ ಬೋನಸ್ ಭಾಗ್ಯ!

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಬೋನಸ್ ಸಿಗದೆ ಕಾಯುತ್ತಿದ್ದ ರಾಜಧಾನಿಯ ಪೌರಕಾರ್ಮಿಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಸಿಹಿಸುದ್ದಿ ನೀಡಿದೆ. ಜಿಬಿಎ ವ್ಯಾಪ್ತಿಯ ಒಟ್ಟು ಐದು ನಗರಪಾಲಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 14 ಸಾವಿರ ಕಾರ್ಮಿಕರಿಗೆ ಈ ಬಾರಿ ಬೋನಸ್ ವಿತರಿಸಲು ಪ್ರಾಧಿಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಡಿ ಸುಮಾರು 12,600 ಕಾಯಂ ನೌಕರರು ಹಾಗೂ 1,500 ಗುತ್ತಿಗೆ ಆಧಾರಿತ ಪೌರಕಾರ್ಮಿಕರು ಸೌಲಭ್ಯ ಪಡೆಯಲಿದ್ದಾರೆ. ಪ್ರತಿಯೊಬ್ಬ ಕಾರ್ಮಿಕನಿಗೂ ತಲಾ 22 ಸಾವಿರ ರೂಪಾಯಿ ಬೋನಸ್…

Read More
Land Acquisition Delay Bidadi Farmers Submit Memorandum to CM Demanding Final Notification

Bidadi: ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ರೆಡ್ ಜೋನ್ ನಿಂದ ನಮಗೆ ಮುಕ್ತಿ ಬೇಕು, ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬಿಡದಿ ರೈತರ ಮನವಿ

ಬೆಂಗಳೂರು: “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ (Bidadi) ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ತಮ್ಮ ಕಷ್ಟವನ್ನ ಸಿಎಂಗೆ ವಿವರಿಸಿದ ರೈತರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ…

Read More
Lets All Work Together as Team Karnataka CM DK Shivakumar Calls for Unity

DK Shivakumar: ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ಕೊಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು. “ನಮ್ಮನ್ನು ಸೇರಿದಂತೆ ರಾಜ್ಯದ ಜನರ ಸೇವೆ…

Read More
Bengaluru Crackdown Gottigere Indira Canteen Snagged and Sealed After Rats Prowl in Dirty Kitchen

Indira Canteen: ಸ್ಟಾರ್ ಹೋಟೆಲ್ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೂ ಶಾಕ್: ಅಡುಗೆ ಮನೆಯಲ್ಲೇ ಹೆಗ್ಗಣ ಪತ್ತೆ, ಗೊಟ್ಟಿಗೆರೆ ಕ್ಯಾಂಟೀನ್ ಸೀಜ್!

ಬೆಂಗಳೂರು: ಐಷಾರಾಮಿ ಪಂಚತಾರಾ ಹೋಟೆಲ್‌ಗಳಿಗೆ ಶಾಕ್ ನೀಡಿದ್ದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ಗಳ (Indira Canteen) ಅಡುಗೆಮನೆಗಳ ಮೇಲೆಯೂ ಗದಾಪ್ರಹಾರ ನಡೆಸಿದ್ದಾರೆ. ರಾಜಧಾನಿಯ ಹಲವೆಡೆ ಏಕಾಏಕಿ ದಾಳಿ ನಡೆಸಿ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸಿಗುವ ಆಹಾರದ ತಯಾರಿಕಾ ಸ್ಥಳಗಳ ಭೀಕರ ದುರಾವಸ್ಥೆ ಕಂಡು ಬೆಚ್ಚಿಬೀಳುವಂತಾಗಿದೆ. ಹೆಗ್ಗಣ, ಇಲಿಗಳ ಕಾಟ: ಗೊಟ್ಟಿಗೆರೆ ಕ್ಯಾಂಟೀನ್ ಸೀಜ್! ನಗರದ ಗೊಟ್ಟಿಗೆರೆ, ಲಿಂಗರಾಜಪುರ ಸೇರಿದಂತೆ ವಿವಿಧ ಭಾಗಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ…

Read More
Confusion Looms Over August 13 Karnataka Bandh Defiant Vatal Nagaraj Pushes Ahead Amid Faction Split

Vatal Nagaraj: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲೇ ಬಿರುಕು; ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ವಾಟಾಳ್ ಹಠ!

ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್‌ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…

Read More