TOP NEWS
Bengaluru Crackdown Food Safety Department to Storm Centralised Kitchens Screen Online Deliveries

Food Safety: ಹೋಟೆಲ್‌ಗಳ ಬೆನ್ನಲ್ಲೇ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಗಳಿಗೂ ಶಾಕ್

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಹಾಗೂ ಐಷಾರಾಮಿ ಹೋಟೆಲ್‌ಗಳ ಅಡುಗೆಮನೆಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಳಪೆ ಗುಣಮಟ್ಟವನ್ನು ಬಯಲಿಗೆಳೆದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು, ಇದೀಗ ತಮ್ಮ ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ. ಹೋಟೆಲ್‌ಗಳ ಕರ್ಮಕಾಂಡದ ಬೆನ್ನಲ್ಲೇ, ಸಾರ್ವಜನಿಕರು ಪ್ರತಿದಿನ ಅವಲಂಬಿಸಿರುವ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಹಾಗೂ (Food Safety) ಕ್ಲೌಡ್ ಕಿಚನ್‌ಗಳತ್ತ ಅಧಿಕಾರಿಗಳ ಬಾಣ ನೆಟ್ಟಿದೆ. ಆನ್‌ಲೈನ್ ಮೂಲಕ ಗ್ರಾಹಕರ ಮನೆಬಾಗಿಲಿಗೆ ಬರುವ ಊಟ-ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು…

Read More
Big news Karnataka Legislative Council Gets Pro tem Chairman Puttanna Takes Charge Following Governors Order

Big News: ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪ್ರೊಟೆಮ್ (ಹಂಗಾಮಿ) ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ನೇಮಿಸಿ (Big News) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಯು ಆಗಸ್ಟ್ 7 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದ್ದು, ಮೇಲ್ಮನೆಯಲ್ಲಿ ಅವರ ದೀರ್ಘಕಾಲದ ಸಂಸದೀಯ ಅನುಭವವನ್ನು ಆಧರಿಸಿ ಈ ಜವಾಬ್ದಾರಿ ವಹಿಸಲಾಗಿದೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಪುಟ್ಟಣ್ಣ ಅವರ ಅಧ್ಯಕ್ಷತೆಯಲ್ಲೇ ವಿಧಾನ ಪರಿಷತ್ತಿನ ಮುಂದಿನ ಶಾಸನಸಭಾ ಕಲಾಪಗಳು ಜರುಗಲಿವೆ. ಹೊರಟ್ಟಿ ಗೌರವಯುತ ನಿರ್ಗಮನ; ಸಿಎಂ…

Read More
I Am Capable of Handling Opposition Alone CM DK Shivakumar on Portfolio Allocation Delay

DK Shivakumar: ಖಾತೆ ಹಂಚಿಕೆಗೆ ಆತುರವಿಲ್ಲ, ಅಧಿವೇಶನ ಎದುರಿಸಲು ನಾನೊಬ್ಬನೇ ಸಾಕು: ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ!

ದೆಹಲಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮತ್ತು ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಆತುರವಿಲ್ಲ ಹಾಗೂ ನಾಳೆಯೇ ಇದನ್ನು ಪೂರ್ಣಗೊಳಿಸಬೇಕೆಂಬ ಒತ್ತಡವೂ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಲು ತಾವೊಬ್ಬರೇ ಸಮರ್ಥರಾಗಿರುವುದಾಗಿ ಹೆಮ್ಮೆಯಿಂದ ಹೇಳಿದರು. ಮಹಿಳಾ ಪ್ರಾತಿನಿಧ್ಯ ಮತ್ತು ಬಿಎಸ್…

Read More
Nagendra Blackmailed Congress High Command for Minister Post BJP State President BY Vijayendra

BY Vijayendra; ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ತಂತ್ರ: ಬಿ. ನಾಗೇಂದ್ರ ವಿರುದ್ಧ ಬಿ.ವೈ. ವಿಜಯೇಂದ್ರ ಬಾಂಬ್!

ಬೆಂಗಳೂರು: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬಿ. ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಬೆದರಿಕೆಯ ತಂತ್ರ ಅನುಸರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ನೇರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ಸಚಿವ ಸಂಪುಟ ಪುನರ್ರಚನೆಯ ವೈಖರಿಯನ್ನು ತೀವ್ರವಾಗಿ ತೊಳೆಯದರು. ಸಂಪುಟಕ್ಕೆ ಮರುಸೇರ್ಪಡೆ: ಗಂಭೀರ ಅಸಮಾಧಾನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ…

Read More
Lokayukta Probe Sought Over Alleged 100 Crore Land Grab Involving Minister HC Balakrishna Wife

HC Balakrishna: ಸರ್ಕಾರಿ ಭೂಮಿ ಕಬಳಿಕೆ: ಸಚಿವರ ಪತ್ನಿ, ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಮಾಡಿರುವ ಬೃಹತ್ ಭೂ ಹಗರಣವೊಂದು (HC Balakrishna) ಬೆಳಕಿಗೆ ಬಂದಿದೆ. 2006ರ ಎ.ಟಿ. ರಾಮಸ್ವಾಮಿ ವರದಿ ಪ್ರಕಾರ ಸರ್ಕಾರಿ ಜಮೀನಿನ ಪೋಡಿ ಹಾಗೂ ಖಾತೆ ಮಾಡುವುದು ಸಂಪೂರ್ಣ ನಿಷಿದ್ಧವಾಗಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರುಬರಹಳ್ಳಿಯಲ್ಲಿ…

Read More
My Body Has Aged Not My Mind HD Deve Gowda Hits Back at Congress Over Bidadi Township Protest

HD Deve Gowda: ದೇಹಕ್ಕೆ ವಯಸ್ಸಾಗಿದೆ, ಬುದ್ಧಿಗಲ್ಲ: ಬಿಡದಿ ಟೌನ್‌ಶಿಪ್‌ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ಗೆ ದೇವೇಗೌಡರ ಖಡಕ್ ಟಾಂಗ್!

ಬೆಂಗಳೂರು: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Deve Gowda) ಭಾಗವಹಿಸಿ ಕಾಂಗ್ರೆಸ್ ಸರ್ಕಾರಕ್ಕೆ ನೇರ ಟಾಂಗ್ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್‌ನ ಈ ಹೋರಾಟವನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಖಡಕ್ ತಿರುಗೇಟು ನೀಡಿದರು. ರಾಜ್ಯದ ಜನರೇ ಕಾದು ನೋಡಲಿದ್ದಾರೆ ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ…

Read More
Crackdown on Illegal Immigrants 1000 Foreigners Traced in 3 Months and Handed Over to FRO Says Priyank Kharge

Priyank Kharge: ಅಕ್ರಮ ವಲಸಿಗರ ವಿರುದ್ಧ ಸರ್ಕಾರದ ಬಿಗಿ ಕ್ರಮ: ಕಳೆದ 3 ತಿಂಗಳಲ್ಲಿ 1,000 ವಿದೇಶಿಗರ ಪತ್ತೆ, ಎಫ್‌ಆರ್‌ಒಗೆ ಹಸ್ತಾಂತರ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್‌ಗಿರಿ” (ಮಾರಲ್…

Read More