DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…
