TOP NEWS
West Bengal Suvendu Adhikari Cabinet Expands

West Bengal: ಆರ್.ಜಿ. ಕರ್ ಪ್ರಕರಣ, ಮೂವರು ಅಧಿಕಾರಿಗಳ ವಜಾ

ಪಶ್ಚಿಮ ಬಂಗಾಳ: ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು (West Bengal) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದ ಮೇಲೆ ಅಂದಿನ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿನೀತ್ ಗೋಯಲ್ ಅವರೊಂದಿಗೆ ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖೋಪಾಧ್ಯಾಯ ಅವರನ್ನೂ ಅಮಾನತು ಮಾಡಲಾಗಿದ್ದು, ಇವರ…

Read More
ksrtc employs protest on may 20 what is government plan

Protest: ಸಾರಿಗೆ ನೌಕರರ ವೇತನ ಸಮರ: ಮೇ 20ರಿಂದ ಬಸ್‌ ಸಂಚಾರ ಸ್ತಬ್ಧ; ಮುಷ್ಕರ ಹತ್ತಿಕ್ಕಲು ಸರ್ಕಾರದ ‘ಆಪರೇಷನ್ ಖಾಸಗಿ’ ಸಿದ್ಧ!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ವೇತನ ಭಿನ್ನಾಭಿಪ್ರಾಯ ಈಗ ಬೀದಿ ಜಗಳಕ್ಕೆ ಬಂದು ನಿಂತಿದೆ. ಸರ್ಕಾರ ಇತ್ತೀಚೆಗೆ ಘೋಷಿಸಿದ ಶೇ. 12.5ರಷ್ಟು ವೇತನ ಏರಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ಕರೆದಿರುವ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ (Protest) ಘೋಷಿಸಿದೆ. ಈ ಬಿಕ್ಕಟ್ಟಿನಿಂದಾಗಿ ರಾಜ್ಯದ ಜನತೆಗೆ ಸಾರಿಗೆ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ನೌಕರರ ಪಟ್ಟು ಮತ್ತು ಆಕ್ರೋಶಕ್ಕೆ ಕಾರಣವೇನು? ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೂಲ…

Read More
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
Cm siddaramaiah asks questions to modi and bjp regarding nEET scam

CM Siddaramaiah: ನೀಟ್ ಅಕ್ರಮದ ಬಗ್ಗೆ ಮೋದಿಯವರ ಮೌನವೇಕೆ? ವಿದ್ಯಾರ್ಥಿಗಳ ಭವಿಷ್ಯದ ಜೊತೆ ಬಿಜೆಪಿ ಚೆಲ್ಲಾಟ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಹಾಗೂ ರಾಜ್ಯದ ಶಾಲಾ-ಕಾಲೇಜುಗಳ ವಸ್ತ್ರಸಂಹಿತೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೀಟ್ ಅಕ್ರಮ: ಮೋದಿಯವರ ಮೌನಕ್ಕೆ ಸಿಎಂ ಪ್ರಶ್ನೆ “ದೇಶಾದ್ಯಂತ ನೀಟ್…

Read More
SIR will be reason for GBA election delay

GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…

Read More
by vijayendra angry about permission to hijab in school and college

BY Vijayendra: ಹಿಜಾಬ್‌ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ…

Read More
Davanagere vachanananda swamiji talks about pocso case after interrogations

Davanagere: ಹರಿಹರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿಚಾರಣೆ: ಕಾನೂನು ಗೌರವಿಸುತ್ತೇವೆ ಎಂದ ಸ್ವಾಮೀಜಿ.

ದಾವಣಗೆರೆ: ಪೋಕ್ಸೋ ಕಾಯ್ದೆಯಡಿ ಗಂಭೀರ ಆರೋಪ (Davanagere) ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿಯವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾಗಿದ್ದ ಶ್ರೀಗಳಿಗೆ ತನಿಖಾಧಿಕಾರಿಗಳು ಸುದೀರ್ಘ 4 ಗಂಟೆಗಳ ಕಾಲ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ. ಖಾಕಿ ಪಡೆಯಿಂದ 50ಕ್ಕೂ ಹೆಚ್ಚು ಪ್ರಶ್ನೆಗಳು: ಹರಿಹರ ಗ್ರಾಮಾಂತರ ಠಾಣೆಯ ಡಿವೈಎಸ್‌ಪಿ ಬಸವರಾಜ ಹಾಗೂ ಪಿಎಸ್‌ಐ ಮಂಜುಳಾ ಅವರ ನೇತೃತ್ವದಲ್ಲಿ ನಡೆದ ಈ ವಿಚಾರಣೆಯಲ್ಲಿ, ಸ್ವಾಮೀಜಿಯವರಿಗೆ ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ. ಮಠದಲ್ಲಿ ನಡೆದಿದೆ ಎನ್ನಲಾದ ಘಟನೆಗಳ…

Read More