TOP NEWS
high court gives big shock to yogesh gowda case ex inspector chennakeshava tingrikar

High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…

Read More
BJP angry on congress government giving permission to hijab in schools and college

BJP: ಹಿಜಾಬ್ ಬಂದರೆ ಕೇಸರಿ ಶಾಲೂ ಬಂದೇ ಬರುತ್ತೆ, ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab) ಮೇಲಿದ್ದ ನಿರ್ಬಂಧವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಿರ್ಧಾರವು ಶಾಲಾ ಆವರಣದಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಕದಡಲಿದೆ ಎಂದು ಆಪಾದಿಸಿರುವ ಬಿಜೆಪಿ ನಾಯಕರು, ಒಂದು ಸಮುದಾಯಕ್ಕೆ ವಿಶೇಷ ರಿಯಾಯಿತಿ ನೀಡಿದರೆ ಹಿಂದೂ ವಿದ್ಯಾರ್ಥಿಗಳೂ ಕೇಸರಿ ಶಾಲು ಧರಿಸಿ ಬರಲು ಅನುಮತಿ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸಿ.ಟಿ. ರವಿ ಕಿಡಿ: “ಸಮವಸ್ತ್ರದ ಪರಿಕಲ್ಪನೆಗೆ ಧಕ್ಕೆ” ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಕಿಡಿಕಾರಿದ ವಿಧಾನಪರಿಷತ್…

Read More
CM Siddaramaiah clarification regarding hijab and saffron turban

CM Siddaramaiah: ಹೊಸ ರೂಪದ ಕೇಸರಿ ಪೇಟಾ ಧರಿಸುವಂತಿಲ್ಲ; ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳ ಮಹತ್ವದ ಹೇಳಿಕೆ

ಮೈಸೂರು: ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೇಸರಿ ಪೇಟಾ ಮತ್ತು ಹಿಜಬ್ ಧರಿಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಶಾಲೆಗಳಿಗೆ ಕೇಸರಿ ಶಾಲು ಅಥವಾ ಹೊಸ ಮಾದರಿಯ ಕೇಸರಿ ಪೇಟಾ ಧರಿಸಿ ಬರುವುದಕ್ಕೆ ಸಮ್ಮತಿ ಇಲ್ಲ ಎಂದು ಅವರು ತಿಳಿಸಿದ್ದಾರೆ. ಸಾಂಪ್ರದಾಯಿಕ ಪೇಟಕ್ಕೆ ಸಮ್ಮತಿ, ಹೊಸ ರೂಪಕ್ಕೆ ತಡೆ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೊದಲಿನಿಂದಲೂ ಧರಿಸುತ್ತಿದ್ದ ಸಾಂಪ್ರದಾಯಿಕ ಪೇಟಗಳನ್ನು ಧರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಬಣ್ಣ ಬದಲಾಯಿಸಿ…

Read More
State Politics samarth mallikarjun and umesh meti took oath

Politics: ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಮಲ್ಲಿಕಾರ್ಜುನ್ ಪ್ರಮಾಣ ವಚನ: ಸಂಪುಟ ಪುನಾರಚನೆಯ ಸುಳಿವು ನೀಡಿದ ಸಿಎಂ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (Politics) ಇಂದು ಮಹತ್ವದ ವಿದ್ಯಮಾನಗಳು ಜರುಗಿದ್ದು, ಇತ್ತೀಚಿನ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ನೂತನ ಶಾಸಕರು ಅಧಿಕೃತವಾಗಿ ಶಾಸನಸಭೆ ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡುವ ಮೂಲಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ನೂತನ ಶಾಸಕರ ಪದಗ್ರಹಣ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ದಾವಣಗೆರೆ ದಕ್ಷಿಣದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಶಾಸಕರಾಗಿ ಪ್ರಮಾಣ…

Read More
kalaburagi rotti goes international Priyank kharge post

Kalaburagi Rotti: ವಿಶ್ವಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾದ ‘ಕಲಬುರಗಿ ಜೋಳದ ರೊಟ್ಟಿ’

ಕಲಬುರಗಿ: ಜಿಲ್ಲೆಯ ಹೆಮ್ಮೆಯ ‘ಕಲಬುರಗಿ ಜೋಳದ ರೊಟ್ಟಿ’ (Kalaburagi Rotti) ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದೆ. ಸ್ಥಳೀಯ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ರೊಟ್ಟಿಗಳ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯರು ತಮ್ಮೂರಿನ ರೊಟ್ಟಿಯ ರುಚಿಯನ್ನು ಸವಿಯಬಹುದಾಗಿದೆ. ಜಾಗತಿಕ ಮಾರುಕಟ್ಟೆಗೆ ಲಗ್ಗೆ ಈ ಐತಿಹಾಸಿಕ ಬೆಳವಣಿಗೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದು, ಪ್ರತಿ ತಿಂಗಳು ಅಮೆರಿಕ ಮತ್ತು ಆಸ್ಟ್ರೇಲಿಯಾ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
davanagere vachanananda Swamiji gets big relief in pocso case

Davanagere: ಪೋಕ್ಸೋ ಪ್ರಕರಣ, ವಚನಾನಂದ ಸ್ವಾಮೀಜಿಗೆ ಬಿಗ್‌ ರಿಲೀಫ್

ಹರಿಹರದ ವೀರಶೈವ (Davanagere) ಲಿಂಗಾಯತ ಪಂಚಮಸಾಲಿ ಪೀಠದ ಮಾಜಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅವರಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಿದ ನ್ಯಾಯಾಲಯ ತಮ್ಮ ವಿರುದ್ಧದ ಗಂಭೀರ ಆರೋಪಗಳಿಂದಾಗಿ ಬಂಧನಕ್ಕೊಳಗಾಗುವ ಆತಂಕದಲ್ಲಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಭಾರತೀಯ ನಾಗರಿಕ…

Read More