HD Kumaraswamy: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್ಡಿ ಕುಮಾರಸ್ವಾಮಿ
ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ಹಲವೆಡೆ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು, ಕೃಷಿ ಭೂಮಿಯನ್ನು ವಶಪಡಿಸಿಕೊಂಡು, ರೈತರಿಗೆ ವಂಚನೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಕೃಷಿಭೂಮಿ ಸ್ವಾಧೀನ ಕೈಬಿಡಬೇಕು ಭೈರಮಂಗಲ ಗ್ರಾಮದಲ್ಲಿ ನಿನ್ನೆ ಸಚಿವರು ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡಿದಿಯ ಬೈರಮಂಗಲದಲ್ಲೂ ರೈತರ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ. ರೈತರ ಕೃಷಿ ಭೂಮಿಯನ್ನು ಯಾವುದೇ…
