TOP NEWS
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More
high court gives stay to state primary school association election procedure

High Court: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಕೆಳ ಹಂತದ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು, ಸದ್ಯಕ್ಕೆ ಯಾವುದೇ ಚುನಾವಣಾ ಚಟುವಟಿಕೆ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದಾಗಿ ಹಾಲಿ ಪದಾಧಿಕಾರಿಗಳಿಗೆ ಭಾರಿ ಹಿನ್ನಡೆಯಾಗಿದೆ. ಗಂಭೀರ ಸ್ವರೂಪದ ಅಕ್ರಮಗಳ ಆರೋಪ: ಸಂಘದ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮತ್ತು ಕಾರ್ಯದರ್ಶಿ ಚೇತನ್ ನುಗ್ಲಿ ಅವರು ಚುನಾವಣೆಯಲ್ಲಿ ಗೆಲ್ಲುವ…

Read More
panchamasali peetha controversy prohibitory order imposed

Panchamasali: ಪಂಚಮಸಾಲಿ ಪೀಠದಲ್ಲಿ ಲೆಕ್ಕದ ಸಂಘರ್ಷ: ಜಿಲ್ಲಾಡಳಿತದಿಂದ ನಿಷೇಧಾಜ್ಞೆ

ದಾವಣಗೆರೆ: ಹರಿಹರದ ಪಂಚಮಸಾಲಿ (Panchamasali) ಮಠದಲ್ಲಿ ವಚನಾನಂದ ಶ್ರೀಗಳ ಬೆಂಬಲಿಗರು ಹಾಗೂ ಟ್ರಸ್ಟ್ ಪದಾಧಿಕಾರಿಗಳ ನಡುವಿನ ಭಿನ್ನಮತ ತಾರಕಕ್ಕೇರಿದೆ. ಮಠದ ಒಳಜಗಳ ಬೀದಿ ರಂಪಾಟವಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಮಠದ ಆವರಣದಲ್ಲಿ ಒಂದು ತಿಂಗಳ ಕಾಲ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿ ಮಾಡಿದೆ. ಸಭೆ-ಸಮಾರಂಭಗಳಿಗೆ ಬ್ರೇಕ್: ಮಾರ್ಚ್ ತಿಂಗಳಿನಿಂದಲೂ ಮಠದ ಎರಡು ಬಣಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದ ಆವರಣದಲ್ಲಿ ನಡೆಯುವ ಸಭೆಗಳು ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತಿರುವುದರಿಂದ, ಮೇ 1 ರಿಂದ…

Read More
rb timmapur clarification about leadership change

RB Timmapur: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿಗೆ ಬ್ರೇಕ್ ಹಾಕಿದ ಸಚಿವ ತಿಮ್ಮಾಪುರ್

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ (RB Timmapur) ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಕುರಿತು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆಗಳು ನಡೆದಿಲ್ಲ. ಇದೆಲ್ಲವೂ ಕೇವಲ ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವ ಚರ್ಚೆಯಷ್ಟೇ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ವೈಯಕ್ತಿಕ ಹೇಳಿಕೆಗಳಿಗೆ ಮಹತ್ವವಿಲ್ಲ: ಇದೇ ಸಂದರ್ಭದಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅದು ಅವರ ವೈಯಕ್ತಿಕ ಅನಿಸಿಕೆಯಾಗಿರಬಹುದು. ಶಾಸಕರು ಸಚಿವ…

Read More
Congress high command final decision over cm change row

Congress: ಮೇ ಮಧ್ಯಭಾಗದಲ್ಲಿ ರಾಜ್ಯ ಕಾಂಗ್ರೆಸ್ ‘ಪವರ್ ಫೈಟ್’ಗೆ ಸುಖಾಂತ್ಯ? ಹೈಕಮಾಂಡ್ ಸಭೆಗೆ ಕ್ಷಣಗಣನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಹಗ್ಗಜಗ್ಗಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ (Congress) ನಿರ್ಧರಿಸಿದೆ. ರಾಜ್ಯ ರಾಜಕೀಯದ ಈ ಪ್ರಮುಖ ಗೊಂದಲಗಳನ್ನು ಬಗೆಹರಿಸಲು ಮೇ 15ರ ಒಳಗಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲು ಮುಹೂರ್ತ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಕೇರಳದ ಬಳಿಕ ಕರ್ನಾಟಕಕ್ಕೆ ಹೈಕಮಾಂಡ್ ಆದ್ಯತೆ: ಪ್ರಸ್ತುತ ಕೇರಳದ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಯಲ್ಲಿ ತೊಡಗಿರುವ ದೆಹಲಿ ನಾಯಕರು, ಮೇ 10ರ ಒಳಗಾಗಿ ಅಲ್ಲಿನ ಜವಾಬ್ದಾರಿಯನ್ನು ಪೂರ್ಣಗೊಳಿಸಲಿದ್ದಾರೆ. ಆ ಪ್ರಕ್ರಿಯೆ…

Read More
DN Jeevaraj reaction about dk shivakumar statement

DN Jeevaraj: ಶೃಂಗೇರಿ ಮರುಮತ ಏಣಿಕೆ, ಡಿಕೆಶಿಗೆ ಜೀವರಾಜ್‌ ಟಾಂಗ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಮರು ಎಣಿಕೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ (DN Jeevaraj) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳಿಗೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಬೆದರಿಕೆ ತಂತ್ರ ನಡೆಯಲ್ಲ: ಡಿಕೆಶಿಗೆ ಜೀವರಾಜ್ ಟಾಂಗ್ ಮರು ಎಣಿಕೆಯಲ್ಲಿ ಗೆಲುವು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ…

Read More
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More