TOP NEWS
G Parameshwar about appointing 600 psi

G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದ  ಪೊಲೀಸ್‌‍ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌‍ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌‍ಐ ಗಳ ನೇಮಕಕ್ಕೆ  ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ  ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್‌‍ ನೇಮಕಾತಿ…

Read More
dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More
ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More