TOP NEWS
Dk shivakumar talks about by election result

DK Shivakumar: ತಮಿಳುನಾಡು ಫಲಿತಾಂಶ ಅಚ್ಚರಿ ತಂದಿದೆ, ಅಲ್ಲಿ ಹೊಸ ಯುಗಾರಂಭ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶವು ತಮಗೆ ಅಚ್ಚರಿ ಮೂಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡಿನಲ್ಲಿ (DK Shivakumar) ಹೊಸ ಯುಗಾರಂಭ “ತಮಿಳುನಾಡು ಫಲಿತಾಂಶವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ. ಅಲ್ಲಿ 30-40% ರಷ್ಟು ಮತಗಳು ಬೇರೆಡೆ ಹೋಗಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಉಂಟಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಅಲ್ಲಿ ನಿಜಕ್ಕೂ ಒಂದು ಹೊಸ ಯುಗ…

Read More
CM Siddaramaiah meetings with senior officers

CM Siddaramaiah: ವಿಧಾನಸೌಧದಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಘೋಷಣೆ ಜಾರಿಗೆ ಕಟ್ಟುನಿಟ್ಟಿನ ಗಡುವು

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಜೆಟ್ ಘೋಷಣೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಅವು ನಿಗದಿತ ಅವಧಿಯೊಳಗೆ ಜನರಿಗೆ ತಲುಪಬೇಕು ಎಂದು ಕಟ್ಟುನಿಟ್ಟಿನ…

Read More
Ration Card problem people are not getting government facilities

Ration Card: ಬಿಪಿಎಲ್ ಕಾರ್ಡ್‌ಗಾಗಿ 3 ವರ್ಷಗಳಿಂದ ಕಾಯುತ್ತಿರುವ ಬಡವರು: ಸರ್ಕಾರಿ ಸೌಲಭ್ಯಗಳಿಂದ ಲಕ್ಷಾಂತರ ಕುಟುಂಬಗಳು ವಂಚಿತ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಹೊಸ ಪಡಿತರ ಚೀಟಿ (Ration Card) ವಿತರಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಲಕ್ಷಾಂತರ ಬಡ ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲಾಗದೆ ಸಂಕಷ್ಟಕ್ಕೆ ಸಿಲುಕಿವೆ. ಹೊಸ ಅರ್ಜಿಗಳನ್ನು ಸ್ವೀಕರಿಸಲು ಆಹಾರ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಮತ್ತು ಗ್ಯಾರಂಟಿ ಯೋಜನೆಗಳಿಗೆ ಅಡ್ಡಿ: ಬಿಪಿಎಲ್ ಕಾರ್ಡ್ ಕೇವಲ ಅಕ್ಕಿ ಪಡೆಯಲು ಮಾತ್ರವಲ್ಲದೆ, ‘ಆಯುಷ್ಮಾನ್ ಭಾರತ್’ ಅಡಿ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಮತ್ತು ಸರ್ಕಾರದ ‘ಗೃಹ…

Read More
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
Belagavi traffic police uses solar cap

Solar Cap: ಬೆಳಗಾವಿ ಬಿಸಿಲಿಗೆ ಪೊಲೀಸ್ ಹೈಟೆಕ್ ಮೊರೆ: ಸೋಲಾರ್ ಟೋಪಿ ಧರಿಸಿ ಟ್ರಾಫಿಕ್ ಸಿಬ್ಬಂದಿ ಕರ್ತವ್ಯ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿನ ತಾಪಮಾನ 36 ರಿಂದ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇಂತಹ ಸುಡುವ ಬಿಸಿಲಿನಲ್ಲಿ ರಸ್ತೆಯ ಮಧ್ಯೆ ನಿಂತು ದಣಿವರಿಯದೆ ಕೆಲಸ ಮಾಡುವ ಸಂಚಾರಿ ಪೊಲೀಸರ ಕಷ್ಟ ಹೇಳತೀರದು. ಆದರೆ, ಬೆಳಗಾವಿಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಈ ಬಿಸಿಲಿನಿಂದ ಪಾರಾಗಲು ಕಂಡುಕೊಂಡಿರುವ ‘ಸೋಲಾರ್ ಕ್ಯಾಪ್’ (Solar Cap) ಉಪಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಟೋಪಿ ಮೇಲೆ ಸೋಲಾರ್‌…

Read More
FIR on people who tried to grabbing BDA land by fake documents

BDA: ಬಿಡಿಎ ಆಸ್ತಿ ಗುಳುಂ ಮಾಡಲು ಸ್ಕೆಚ್; 160 ಕೋಟಿ ಮೌಲ್ಯದ ಭೂ ಹಗರಣ ಬಯಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (BDA) ಸೇರಿದ ಸುಮಾರು 160 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ದೊಡ್ಡ ಜಾಲವೊಂದನ್ನು ಬಿಡಿಎ ವಿಚಕ್ಷಣಾ ದಳ ಭೇದಿಸಿದೆ. ಈ ಸಂಬಂಧ ಬೆಂಗಳೂರು ದಕ್ಷಿಣದ ಕೊತ್ತನೂರಿನ ನಿವಾಸಿಗಳಾದ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿವೆ. ಪ್ರಕರಣದ ಹಿನ್ನೆಲೆ ಕೊತ್ತನೂರಿನ ಸರ್ವೆ ನಂಬರ್ 177/1 ಮತ್ತು 176/1ರಲ್ಲಿರುವ 10 ಗುಂಟೆ ಬೆಲೆಬಾಳುವ ಆಸ್ತಿಯೇ…

Read More
KSRTC and BMTC strike on may 20

KSRTC: ಸಾರಿಗೆ ಸಮರ: ಮೇ 20 ರಿಂದ ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ (KSRTC) ನಡುವಿನ ವೇತನ ಜಟಾಪಟಿ ಈಗ ಮುಷ್ಕರದ ಹಂತಕ್ಕೆ ಬಂದು ತಲುಪಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20ರಿಂದ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಮಾತುಕತೆ ವಿಫಲ, ಮುಷ್ಕರ ಅನಿವಾರ್ಯ: ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಹಿನ್ನೆಲೆಯಲ್ಲಿ ನೌಕರರ ಜಂಟಿ ಕ್ರಿಯಾ…

Read More