double decker fly over in namma metro orange line

Namma Metro: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ‘ಆರೆಂಜ್ ಲೈನ್’ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ!

ಬೆಂಗಳೂರು: ರಾಜಧಾನಿಯ ಹೊರವರ್ತುಲ ರಸ್ತೆ (ORR) ಭಾಗದ ನಿವಾಸಿಗಳು ಹಾಗೂ ವಾಹನ ಸವಾರರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ನಡೆಸಿದ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಮ್ಮ ಮೆಟ್ರೋದ (Namma Metro) 3ನೇ ಹಂತದ ‘ಆರೆಂಜ್ ಲೈನ್’ ಮಾರ್ಗದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಹಳಿಗೆ ಬರಲುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷದ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಲೈನ್…

Read More
Bengaluru condiments association called for strike on june 18 against rowdies harassment

Bengaluru: ಹಫ್ತಾ ವಸೂಲಿ, ಅಧಿಕಾರಿಗಳ ದರ್ಪಕ್ಕೆ ಬೇಸತ್ತ ವರ್ತಕರು: ಜೂನ್ 18 ರಿಂದ ಬೆಂಗಳೂರಿನಲ್ಲಿ ಬೇಕರಿ, ಸಣ್ಣ ಅಂಗಡಿಗಳು ಬಂದ್!

ಬೆಂಗಳೂರು: ರಾಜಧಾನಿಯ ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಬೇಕರಿ ಮಾಲೀಕರು ಅಸಹನೀಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪುಡಿ ರೌಡಿಗಳ ಹಾವಳಿ, ಮಾಮೂಲಿಗಾಗಿ ಪೀಡಿಸುವ ದಂಧೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಿರಂತರ ಕಿರುಕುಳಕ್ಕೆ (Bengaluru) ಶಾಶ್ವತ ಪರಿಹಾರ ಕೋರಿ, ನಗರದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಮತ್ತು ಬೀದಿಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ. ಬೆಂಗಳೂರು ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, “ನಮಗೆ ನೆಮ್ಮದಿಯಿಂದ ವ್ಯಾಪಾರ…

Read More
Sagara karuru no teachers in government people protest

Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು

ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…

Read More
Cm vijay first Karnataka visit took darshana of kolluru mookambike devi

CM Vijay: ಮೂಕಾಂಬಿಕೆ ದರ್ಶನ ಪಡೆದ ದಳಪತಿ‌ ಸಿಎಂ ವಿಜಯ್

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾಲಿವುಡ್‌ನ ‘ದಳಪತಿ’ ಜೋಸೆಫ್ ವಿಜಯ್ (CM Vijay) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರು ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲದೆ ಕೇವಲ ಶಕ್ತಿ ಆರಾಧನೆಗಾಗಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ದೇವಿಯ ದರ್ಶನ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕುತೂಹಲ ಮೂಡಿಸಿದ…

Read More
Siddaramaiah clarification about partiality in grants

Siddaramaiah: ಸಮುದಾಯ ಭವನ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ: ವಿರೋಧಿಗಳ ಆರೋಪಕ್ಕೆ ಅಂಕಿ-ಅಂಶಗಳ ಸಮೇತ ಸಿದ್ದರಾಮಯ್ಯ ತಿರುಗೇಟು!

ಬೆಂಗಳೂರು: ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಗ್ರ್ಯಾಂಟ್ ರಿಲೀಸ್ ಮಾಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ದೂರುಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಇಲಾಖೆಯಿಂದ ಸದ್ಯ ಹೊರಬಿದ್ದಿರುವ ಆರ್ಡರ್ ಕೇವಲ ಆರಂಭಿಕ ಹಂತದ ಪೂರ್ವಭಾವಿ ಮಂಜೂರಾತಿಯಾಗಿದೆಯೇ ಹೊರತು, ಇದು ಅಂತಿಮವಾಗಿ ಹಣ ಬಿಡುಗಡೆ ಮಾಡುವ ಲಿಸ್ಟ್ ಅಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರದ ನಿಯಮಾವಳಿಗಳು ಮತ್ತು ಮೀಸಲಾತಿ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯ ಅಥವಾ ಉದ್ದೇಶಪೂರ್ವಕ…

Read More
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More
pro KS bhagavan controversial statement about lord rama

KS Bhagavan: ಶ್ರೀರಾಮನ ಚಾರಿತ್ರ್ಯ ವಿಮರ್ಶಿಸಿ ಮತ್ತೆ ಕಿಡಿ ಹೊತ್ತಿಸಿದ ಪ್ರೊ. ಭಗವಾನ್; ಡಿಜಿಪಿಗೆ ದೂರು

ಬೆಂಗಳೂರು: ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ (KS Bhagavan) ಅವರು ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತೊಮ್ಮೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ‘ಹಿಂದೂ ಜನಜಾಗೃತಿ ಸಮಿತಿ’ಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಗುರುವಾರ ಅಧಿಕೃತ ದೂರು ನೀಡಿದೆ. ದಾವಣಗೆರೆ ಭಾಷಣದಲ್ಲಿ ಭಗವಾನ್ ವಾದಿಸಿದ ಜಟಾಪಟಿ ಅಂಶಗಳೇನು? ದಾವಣಗೆರೆ ಜಿಲ್ಲೆಯ ಹರಿಹರ…

Read More