TOP NEWS
DK Shivakumar social media post about GBA north budget

DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. 108 ಕೋಟಿ ಆದಾಯದ ನಿರೀಕ್ಷೆ ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು…

Read More
West asia war oil ship reached Mangaluru port

Mangaluru: ನವ ಮಂಗಳೂರು ಬಂದರಿಗೆ ಬಂದ ಕಚ್ಚಾತೈಲ ನೌಕೆ

ಮಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಮುಂದುವರಿದಿದ್ದು, ನವ ಮಂಗಳೂರು (Mangaluru) ಬಂದರಿಗೆ ನಾಲ್ಕನೇ ಕಚ್ಚಾತೈಲ ಹೊತ್ತ ಸರಕು ನೌಕೆಯು ನಿನ್ನೆ ರಾತ್ರಿ ಆಗಮಿಸಿದೆ. ಬಂದರಿನಲ್ಲಿ ಸೂಕ್ತ ಭದ್ರತೆ  ಸಂಘರ್ಷದ ಹಿನ್ನೆಲೆಯಲ್ಲಿ ಬಂದರಿನಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂದು ಬೆಳಿಗ್ಗೆಯಿಂದಲೇ ನೌಕೆಯಿಂದ ತೈಲವನ್ನು ಹೊರತೆಗೆಯುವ ಕಾರ್ಯ ಯಶಸ್ವಿಯಾಗಿ ಆರಂಭಗೊಂಡಿದೆ.  ಸೌದಿ ಅರೇಬಿಯಾದಿಂದ ನವ ಮಂಗಳೂರಿಗೆ ಆಗಮಿಸಿರುವ ಈ ಬೃಹತ್ ಹಡಗು 1.41 ಲಕ್ಷ ಮೆಟ್ರಿಕ್ ಟನ್ ಕಚ್ಚಾತೈಲವನ್ನು ಹೊತ್ತು ತಂದಿದೆ. ಮಂಗಳೂರು…

Read More
Chikkamagaluru Heavy Rain effects on people

Heavy Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಆಸ್ತಿಪಾಸ್ತಿಗೆ ಹಾನಿ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರಿ ಮಳೆಗೆ (Heavy Rain) ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಆಸ್ತಿಪಾಸ್ತಿಗೆ ಅಪಾರ ಹಾನಿ ಸಂಭವ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿದೆ.  ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಮತ್ತು ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಮಳೆಯ ಆರ್ಭಟಕ್ಕೆ…

Read More
Kolar mp mallesh babu inaugurated road construction work

Kolar: ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ

ಕೋಲಾರ:  ಶ್ರೀನಿವಾಸಪುರ (Kolar) ವಿಧಾನಸಭಾ ಕ್ಷೇತ್ರದ ಸುಗಟೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಜಂಟಿಯಾಗಿ ಚಾಲನೆ ನೀಡಿದರು. ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ…

Read More
KMF to copower RCB matches this year

KMF: ಆರ್‌ಸಿಬಿಗೆ KMF ಪ್ರಯೋಜಕತ್ವ, 4 ಕೋಟಿಗೆ ಟೆಂಡರ್‌

ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆ.ಎಂ.ಎಫ್ (KMF) 2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡಕ್ಕೆ ಪ್ರಾಯೋಕತ್ವ ನೀಡಿದೆ. 4 ಕೋಟಿ ವೆಚ್ಚದಲ್ಲಿ ಟೆಂಡರ್‌  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಒಟ್ಟು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಎಂ.ಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ತಿಳಿಸಿದ್ದಾರೆ.  ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡದ  ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿವೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕಲ್…

Read More
Big news teachers transfer restriction bill sanctioned

Big News: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.  ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…

Read More
CM Siddaramaiah clarification regarding yuvanidhi

CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ  2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…

Read More