Deadlock Over Indira Kit Government to Pause Free Ration Kit Scheme After 8 Months of Delay

Indira Kit: ಆರಂಭಕ್ಕೂ ಮುನ್ನವೇ ‘ಇಂದಿರಾ ಕಿಟ್’ ಯೋಜನೆಗೆ ಗ್ರಹಣ: ಟೆಂಡರ್ ಲಾಬಿ, ಕೋರ್ಟ್ ಭೀತಿಯಿಂದ ಬಡವರ ನಿರೀಕ್ಷೆ ಹುಸಿ!

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಬಡವರಿಗೆ ವಿತರಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ‘ಇಂದಿರಾ ಕಿಟ್’ (Indira Kit) ಯೋಜನೆ ಶುರುವಾಗುವ ಮುನ್ನವೇ ಮೂಲೆಗುಂಪಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆಡಳಿತಾತ್ಮಕ ಹಾಗೂ ಕಾನೂನು ತೊಡಕುಗಳಿಂದಾಗಿ ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವ ಚಿಂತನೆಯಲ್ಲಿ ಸರ್ಕಾರ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಏನಿದು ಇಂದಿರಾ ಕಿಟ್ ಯೋಜನೆ? ರಾಜ್ಯದ ಲಕ್ಷಾಂತರ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪೌಷ್ಟಿಕ ಆಹಾರ ಒದಗಿಸುವ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿತ್ತು….

Read More
Technical Issues and Public Backlash Slow Down GruhaJyothi Door to Door Survey

Gruhajyoti: ಗೃಹಜ್ಯೋತಿ ಗ್ರಾಹಕರ ಡೇಟಾ ಸಂಗ್ರಹಕ್ಕೆ ತಾಂತ್ರಿಕ ಗ್ರಹಣ: ಸೌಲಭ್ಯ ರದ್ದಾಗುವ ಆತಂಕದಲ್ಲಿ ಜನಸಾಮಾನ್ಯರು

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ (Gruhajyoti) ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹದ ಜವಾಬ್ದಾರಿ ಹೊತ್ತಿರುವ ಎಸ್ಕಾಂಗಳ ಸಿಬ್ಬಂದಿಗೆ ಹಲವು ತಾಂತ್ರಿಕ ಅಡಚಣೆಗಳು ತಲೆನೋವಾಗಿ ಪರಿಣಮಿಸಿವೆ. ಸ್ಥಳೀಯವಾಗಿ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಆ್ಯಪ್‌ಗಳ ಕೈಕೊಡುತ್ತಿರುವುದು ಹಾಗೂ ಸಾರ್ವಜನಿಕರ ಅಸಹಕಾರ ಸಿಬ್ಬಂದಿಯನ್ನು ಹೈರಾಣಾಗಿಸಿದೆ. ಸಿಬ್ಬಂದಿಯನ್ನು ಕಾಡುತ್ತಿರುವ ತಾಂತ್ರಿಕ ದೋಷಗಳು ಮೊಬೈಲ್ ಆ್ಯಪ್‌ನಲ್ಲಿ ಗ್ರಾಹಕರ ವಿದ್ಯುತ್ ಸಂಪರ್ಕದ ಆರ್‌ಆರ್ (RR) ಸಂಖ್ಯೆಯನ್ನು ನಮೂದಿಸಿದ ತಕ್ಷಣ, ಮಾಲೀಕರ ಹೆಸರು ಮತ್ತು ಯೋಜನೆಗೆ ನೋಂದಾಯಿತರಾದವರ ವಿವರಗಳು ಸ್ವಯಂಚಾಲಿತವಾಗಿ ಮೂಡಬೇಕಿದೆ. ಆದರೆ, ಹಲವು ಫಲಾನುಭವಿಗಳ…

Read More
Good news monsoon rain effect hemavathi dam water increased

Good News: ಹರ್ಷ ತಂದ ಹೇಮಾವತಿ ಒಳಹರಿವು, ರೈತರಲ್ಲಿ ಮೂಡಿದ ಆಶಾಕಿರಣ

ಹಾಸನ: ಮಲೆನಾಡು ಭಾಗ ಹಾಗೂ ನದಿಯ ಉಗಮ ಸ್ಥಾನಗಳಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೊರೂರಿನ ಪ್ರಸಿದ್ಧ ಹೇಮಾವತಿ ಜಲಾಶಯಕ್ಕೆ ಒಳಹರಿವು (Good News) ಗಣನೀಯವಾಗಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿರುವುದರಿಂದ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ತೇಜಿಯಾಗಿ ಹೆಚ್ಚುತ್ತಿದೆ. ಇದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಗುರುವಾರ ಬೆಳಗ್ಗೆ ಕೇವಲ 1,000 ಕ್ಯೂಸೆಕ್ಸ್‌ನಷ್ಟಿದ್ದ ಒಳಹರಿವು ಸಂಜೆಯ ವೇಳೆಗೆ ದಿಢೀರ್ ಹೆಚ್ಚಳವಾಗಿತ್ತು. ಶುಕ್ರವಾರ…

Read More
No Tolerance For Indiscipline seemath kumar Warns Of Direct Dismissal For Errant Officers

Seemanth Kumar: ಅಶಿಸ್ತು ತೋರಿದರೆ ಪೊಲೀಸ್ ಸಿಬ್ಬಂದಿ ವಜಾ: ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖಡಕ್ ವಾರ್ನಿಂಗ್!

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಅಶಿಸ್ತು ತೋರುವ ಯಾವುದೇ ದರ್ಜೆಯ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಮಾಡಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ (Seemanth Kumar) ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್‌ ದಕ್ಷಿಣ ಕವಾಯಿತು ಮೈದಾನದಲ್ಲಿ ನಡೆದ ಮಾಸಿಕ ಪರೇಡ್‌ ವೀಕ್ಷಿಸಿ ಅವರು ಮಾತನಾಡಿದರು. ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕರ್ತವ್ಯ ಲೋಪ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಅಮಾನತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಶಿಸ್ತು ಪ್ರದರ್ಶಿಸಿದ ಕೆಲವರ ವಿರುದ್ಧ ಕಠಿಣ…

Read More
Monsoon Session of Parliament to Begin After Completion of SIR Process

DK Shivakumar: SIR ಪ್ರಕ್ರಿಯೆ ಮುಗಿದ ನಂತರ ಮುಂಗಾರು ಅಧಿವೇಶನ: ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ,…

Read More
Lokayukta Complaint Against MLA Suresh Kumar BJP Leader Denies Corruption Allegations

Suresh Kumar: ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ರಾಜಕೀಯ ದುರುದ್ದೇಶದ ಸುಳ್ಳು ಆರೋಪ ಎಂದು ಬಿಜೆಪಿ ಹಿರಿಯ ನಾಯಕ ಕಿಡಿ!

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ (Suresh Kumar) ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಭ್ರಷ್ಟಾಚಾರ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಕುರಿತು ಗಂಭೀರ ದೂರು ಸಲ್ಲಿಕೆಯಾಗಿದೆ. ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ತಮ್ಮ ಮೇಲಿನ ಆರೋಪಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ರಾಜಕೀಯವಾಗಿ ಮಸಿ ಬಳಿಯುವ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಲೋಕಾಯುಕ್ತ ಕಚೇರಿಯಿಂದ ತಮಗೆ ನೋಟಿಸ್ ಬರುವ ಮುನ್ನವೇ, ಮುಂದಿನ…

Read More
Karnataka Extends Deadline for Submitting Residential OC and CC Until August 15

DK Shivakumar: ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್: ಓಸಿ, ಸಿಸಿ ದಾಖಲೆ ಸಲ್ಲಿಕೆ ಅವಧಿ ಆಗಸ್ಟ್ 15 ರವರೆಗೆ ವಿಸ್ತರಣೆ!

ಬೆಂಗಳೂರು: ರಾಜ್ಯದ ಲಕ್ಷಾಂತರ ಮನೆ ಹಾಗೂ ಅಪಾರ್ಟ್‌ಮೆಂಟ್ ಮಾಲೀಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಟ್ಟಡಗಳ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಮೆನ್ಸ್‌ಮೆಂಟ್ ಸರ್ಟಿಫಿಕೇಟ್ (CC) ಒದಗಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಮುಂಬರುವ ಆಗಸ್ಟ್ 15 ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಟ್ಟಡಗಳ ಮಾಲೀಕತ್ವ ಹಾಗೂ ನಿರ್ಮಾಣ ಪೂರ್ಣಗೊಂಡಿರುವ ಅಧಿಕೃತ ದಾಖಲೆಗಳ (ಓಸಿ-ಸಿಸಿ)…

Read More