I will not go to delhi says ut khader

UT Khader: ಮಂತ್ರಿಗಿರಿಗಾಗಿ ನಾನು ದೆಹಲಿಗೆ ಹೋಗಲ್ಲ, ಜನರ ಸೇವೆಗಾಗಿ ಮಂಗಳೂರಿಗೆ ಹೋಗ್ತೀನಿ: ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಬಿರುಸಿನಿಂದ ಸಾಗಿದ್ದು, ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಭಾರಿ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ (UT Khader) ಅತ್ಯಂತ ಪ್ರಮುಖ ಹೇಳಿಕೆ ನೀಡಿದ್ದಾರೆ. ಹೊಸ ಕ್ಯಾಬಿನೆಟ್‌ನಲ್ಲಿ ತಮಗೆ ಸ್ಥಾನ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟದ್ದು. ತಾವಂತೂ ಸಚಿವ ಸ್ಥಾನದ ಆಕಾಂಕ್ಷಿಯಾಗಿ ಹಠ ಹಿಡಿದು ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ….

Read More
Congress bk hariprasad trying to get ministry

Congress: ದೆಹಲಿಯಲ್ಲಿ ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು: ಮಂತ್ರಿಗಿರಿ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಬಿ.ಕೆ. ಹರಿಪ್ರಸಾದ್ ಭಾರಿ ಕಸರತ್ತು!

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಸುಖಾಂತ್ಯ ಕಾಣುತ್ತಿದ್ದಂತೆಯೇ, ಇತ್ತ ದೇಶದ ರಾಜಧಾನಿ ನವದೆಹಲಿಯಲ್ಲಿ ನೂತನ ಸಚಿವ ಸಂಪುಟ (Congress) ಸೇರ್ಪಡೆಗಾಗಿ ಭಾರಿ ಪೈಪೋಟಿ ಶುರುವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದು, ಹೊಸ ಕ್ಯಾಬಿನೆಟ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜಧಾನಿಯಲ್ಲಿ ಬೀಡುಬಿಟ್ಟು ಬಿರುಸಿನ ಸರ್ಕಸ್ ಆರಂಭಿಸಿದ್ದಾರೆ. ಲಾಭಿ ಆರಂಭಿಸಿದ ಬಿಕೆ ಹರಿಪ್ರಸಾದ್ ಈ ಸಚಿವ ಸಂಪುಟ ರಚನೆಯ ಕಸರತ್ತಿನ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…

Read More
R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More
sumalatha ambareesh ready to enter rajya sabha after loka sabha

Sumalatha Ambareesh: ಮಂಡ್ಯ ತ್ಯಾಗಕ್ಕೆ ಸಿಗುತ್ತಾ ಬಂಪರ್ ಗಿಫ್ಟ್? ರಾಜ್ಯಸಭೆ ರೇಸ್‌ನಲ್ಲಿ ಸುಮಲತಾ ಅಂಬರೀಶ್ ಮುಂಚೂಣಿ!

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಲೆಕ್ಕಾಚಾರಕ್ಕಾಗಿ ತಮ್ಮ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಕಮಲ ಮುಡಿದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗ ದೆಹಲಿ ರಾಜಕಾರಣದ ದೊಡ್ಡ ಬಾಗಿಲು ತೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಸುಮಲತಾ ಅಂಬರೀಶ್ ಅವರನ್ನು ಎನ್‌ಡಿಎ ಮೈತ್ರಿಕೂಟದ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 18 ರಂದು ರಾಜ್ಯಸಭೆಯ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳ…

Read More
Zameer Ahmed Khan audio about conspiracy against congress goes viral

Zameer Ahmed Khan: ದಾವಣಗೆರೆ ಆಂತರಿಕ ಒಳಸಂಚು ವಿವಾದ: ವೈರಲ್ ಆಡಿಯೋ ವಿರುದ್ಧ ಸೈಬರ್ ದೂರು ದಾಖಲಿಸಲು ಜಮೀರ್ ಸಜ್ಜು!

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ತಂತ್ರಗಳನ್ನು ಹಳಿತಪ್ಪಿಸಲು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸದ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಾತ್ಮಕ ಆಡಿಯೋ ರೆಕಾರ್ಡಿಂಗ್‌ಗಳು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ನವದೆಹಲಿ ಮಟ್ಟದಲ್ಲೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿರುವ ಜಮೀರ್ ಅಹಮದ್ ಖಾನ್, ಈ ಆಡಿಯೋ ಸಂಪೂರ್ಣ ಸುಳ್ಳು…

Read More
New cm dk shivakumar message to students for new school year

DK Shivakumar: ವಿದ್ಯಾರ್ಥಿಗಳಿಗೆ ಹೊಸ ಸಿಎಂ ಶುಭ ಹಾರೈಕೆ

ಬೆಂಗಳೂರು: “ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ…

Read More
Sagara havyaka pratibimba function tomorrow

‌Sagara: ನಾಳೆ ತುಮರಿಯಲ್ಲಿ ಹವ್ಯಕ ಸಮಾಜ ಬಾಂಧವರಿಗಾಗಿ ವಿಶೇಷ ‘ಪ್ರತಿಬಿಂಬ’ ಕಾರ್ಯಕ್ರಮ ಆಯೋಜನೆ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ಹುಲ್ಕೋಡಿನ ಶ್ರೀ ಭಾರತಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಾಳೆ (ಭಾನುವಾರ) ಹವ್ಯಕ ಸಮಾಜ ಬಾಂಧವರಿಗಾಗಿ ‘ಪ್ರತಿಬಿಂಬ’(Sagara) ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಹೊಸನಗರ ಪ್ರಾಂತ್ಯದ ಒಳಪಡುವ ಎಲ್ಲಾ ಹವ್ಯಕ ಬಂಧುಗಳಿಗಾಗಿ ಈ ವಿಶಿಷ್ಟ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿವಿಧ ಚಟುವಟಿಕೆಗಳೊಂದಿಗೆ ಇಡೀ ದಿನ ಕಾರ್ಯಕ್ರಮ ಜರುಗಲಿದೆ. ಹವ್ಯಕ ಸಮುದಾಯದ ಪ್ರತಿಭೆಗಳನ್ನು…

Read More