Golden hour guardian training by apollo in Mysuru

Mysuru: ‘ಅತ್ಯಮೂಲ್ಯ ಸಮಯ ರಕ್ಷಕರುʼ ಕುರಿತು ತರಬೇತಿ, ಅಪೋಲೋದಿಂದ ವಿಶೇಷ ಕಾರ್ಯ

ಮೈಸೂರು: ಮೈಸೂರಿನ (Mysuru) ಅಪೋಲೊ ಬಿಜಿಎಸ್ ಆಸ್ಪತ್ರೆ, ಯಂಗ್ ಇಂಡಿಯನ್ಸ್ (Yi), ಮೈಸೂರು ನಗರ ಟ್ರಾಫಿಕ್ ಪೊಲೀಸ್, ಆಟೋ ಚಾಲಕರ ಸಂಘ ಮತ್ತು ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು “ಅತ್ಯಮೂಲ್ಯ ಸಮಯ ರಕ್ಷಕರು (ಗೋಲ್ಡನ್ ಅವರ್ ಗಾರ್ಡಿಯನ್ಸ್) ತರಬೇತಿ 2026” ಕಾರ್ಯಕ್ರಮ ನಡೆಯಿತು. ತುರ್ತು ಸಂದರ್ಭಗಳಲ್ಲಿ ಸೂಕ್ತ ಸ್ಪಂದನೆ ಸಿಗುವಂಥ ವಾತಾರವಣವನ್ನು ಮೈಸೂರಿನಲ್ಲಿ ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಪೊಲೀಸ್ ಸಿಬ್ಬಂದಿ, ಆಟೋ ಚಾಲಕರು ಮತ್ತು ಕೆಎಸ್‌ಆರ್‌ಟಿಸಿ ಚಾಲಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ…

Read More
karnataka politics dk shivakumar to become 5th cm from ramanagar

DK Shivakumar: ರಾಮನಗರಕ್ಕೆ ಒಲಿದ ಸಿಎಂ ಗದ್ದುಗೆ: ರಾಮಕೃಷ್ಣ ಹೆಗಡೆ, ದೇವೇಗೌಡರ ಸಾಲಿಗೆ 5ನೇ ನಾಯಕನಾಗಿ ಡಿ.ಕೆ. ಶಿವಕುಮಾರ್ ಸೇರ್ಪಡೆ!

ರಾಮನಗರ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲಿ ಒಂದಾದ ರಾಮನಗರಕ್ಕೆ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಯ ಸೌಭಾಗ್ಯ ಸಿಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಂತೆ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಡಿ.ಕೆ. ಶಿವಕುಮಾರ್ ಅವರು ಸಿಎಂ ಪೀಠ ಅಲಂಕರಿಸಿದರೆ, ರಾಮನಗರ ಜಿಲ್ಲೆಯ ಇತಿಹಾಸದಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಐದನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು…

Read More
siddaramaiah becomes emotional after resignation

Siddaramaiah: ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾವುಕರಾದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸುದೀರ್ಘ ಹಾಗೂ ರೋಚಕ ರಾಜಕೀಯ ಪಯಣವನ್ನು ಅತ್ಯಂತ ಭಾವುಕರಾಗಿ ಮೆಲುಕು ಹಾಕಿದ್ದಾರೆ. ತಮಗೆ ರಾಜಕೀಯ ಆಶ್ರಯ ನೀಡಿ ಬೆಳೆಸಿದ ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರು ಮತ್ತು ತಮ್ಮ ಆಡಳಿತಾವಧಿಯಲ್ಲಿ ಸಾಥ್ ನೀಡಿದ ಸಹೋದ್ಯೋಗಿಗಳಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನಪಿಸಿಕೊಂಡ ಅವರು, ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು…

Read More
BJP announced new president selected in 4 state

BJP: ನಾಲ್ಕು ರಾಜ್ಯಗಳ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ನವದೆಹಲಿ: ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (BJP) ಸಾಂಸ್ಥಿಕ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ದೆಹಲಿ, ಪಂಜಾಬ್, ಹರಿಯಾಣ ಮತ್ತು ತ್ರಿಪುರಾ ಸೇರಿದಂತೆ ನಾಲ್ಕು ರಾಜ್ಯಗಳ ತನ್ನ ಪಕ್ಷದ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಘೋಷಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಪರವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದಾರೆ. ನೂತನ ಬದಲಾವಣೆಯ ಅನ್ವಯ ದೆಹಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ,…

Read More
the two goddess who are behind dk shivakumar strength

DK Shivakumar: ಡಿಕೆಶಿ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ದಲಿತ ಸಂಘಟನೆಗಳ ಬಹಿರಂಗ ಬಂಡಾಯ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ತಿರುವು ಸಿಗುತ್ತಿದ್ದು, ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅವರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ನಡುವೆ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಯಶಸ್ಸಿನ ಹಿಂದೆ ಕನಕಪುರದ ದೊಡ್ಡಲಹಳ್ಳಿಯಲ್ಲಿರುವ ಅವರ ಮನೆದೇವರಾದ ಕೆಂಕೇರಮ್ಮ ಹಾಗೂ…

Read More
congress high command gives clarification about cm sidaramaiah resignation

Congress: ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆ ವದಂತಿಗಳಿಗೆ ಹೈಕಮಾಂಡ್ ಬ್ರೇಕ್: ಸದ್ಯಕ್ಕೆ ಯಾವುದೇ ರಾಜೀನಾಮೆ ಇಲ್ಲ ಎಂದ ಉಸ್ತುವಾರಿ ಸುರ್ಜೇವಾಲಾ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕಾಂಗ್ರೆಸ್ (Congress) ಹೈಕಮಾಂಡ್ ಪೂರ್ಣವಿರಾಮ ಇಟ್ಟಿದೆ. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜಧಾನಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಇಲ್ಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

Read More
congress rahul gandhi rules regarding dk shivakumar about his cabinet

DK Shivakumar: ಶಿವಕುಮಾರ್ ನೂತನ ಸಂಪುಟಕ್ಕೆ ರಾಹುಲ್ ಗಾಂಧಿ ಹೊಸ ಸೂತ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಮಹತ್ವದ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನ ಹಾಗೂ ಡಿ.ಕೆ. ಶಿವಕುಮಾರ್ ಅವರ ನೂತನ ನಾಯಕತ್ವದ ಹಾದಿ ಸುಗಮಗೊಳ್ಳುತ್ತಿದ್ದಂತೆ, ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಗಂಭೀರ ಕಸರತ್ತು ನಡೆಸಿದೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನೂತನ ಶಿವಕುಮಾರ್ (DK Shivakumar)ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದ್ದು, ಇದು ಕೈ ಪಾಳಯದಲ್ಲಿ…

Read More