Sdpi protest in Mysuru by opposing government decision to take back case against Pramod mutalik and Chaitra kundapur

SDPI: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ

ಮೈಸೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತೀವ್ರ…

Read More
cm siddaramaiah caste census report master stroke

CM Siddaramaiah: ಉತ್ತರ ಕನ್ನಡ ಕಡಲತೀರದಲ್ಲಿ ಘೋರ ದುರಂತ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…

Read More
Annabhagya Scheme rice problem in state

Annabhagya Scheme: ಮೇ ತಿಂಗಳಲ್ಲಿ ‘ಅನ್ನಭಾಗ್ಯ’ ಗ್ಯಾರಂಟಿಗೆ ಬ್ರೇಕ್: ಪಡಿತರ ಕೇಂದ್ರಗಳಲ್ಲಿ ರಾಜ್ಯದ ಪಾಲಿನ ಅಕ್ಕಿ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಅನ್ನಭಾಗ್ಯ’ (Annabhagya Scheme) ಯೋಜನೆಗೆ ಮೇ ತಿಂಗಳಿನಲ್ಲಿ ದಿಢೀರ್ ಹಿನ್ನಡೆಯಾಗಿದೆ. ಈ ತಿಂಗಳು ಅರ್ಹ ಫಲಾನುಭವಿಗಳಿಗೆ ಸಿಗಬೇಕಾಗಿದ್ದ ರಾಜ್ಯ ಸರ್ಕಾರದ ಪಾಲಿನ ಉಚಿತ ಹೆಚ್ಚುವರಿ ಅಕ್ಕಿ ವಿತರಣೆಯಾಗಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದ್ದು, ಇದು ರಾಜ್ಯದ ಲಕ್ಷಾಂತರ ಬಡ ಪಡಿತರ ಚೀಟಿದಾರರಿಗೆ ಭಾರಿ ನಿರಾಶೆ ಮೂಡಿಸಿದೆ. ಪ್ರಸ್ತುತ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಕೇಂದ್ರ ಸರ್ಕಾರದ ಕೋಟಾದ ಧಾನ್ಯವನ್ನು ಮಾತ್ರ ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಕೇಂದ್ರದ…

Read More
Kalaburagi Cops Win Praise After Cleaning Up Society Mess

Kalaburagi: ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದನೆ: ಮನೆ ಮುಂದೆ ಸತ್ತಿದ್ದ ಹೆಗ್ಗಣ ತೆರವುಗೊಳಿಸಿ ಮಾನವೀಯತೆ ಮೆರೆದ 112 ಪೊಲೀಸರು!

ಕಲಬುರಗಿ: ಸಮಾಜದಲ್ಲಿ (Kalaburagi) ಯಾವುದೇ ಸಣ್ಣ-ಪುಟ್ಟ ಸಮಸ್ಯೆ ಎದುರಾದರೂ ಸಾರ್ವಜನಿಕರಿಗೆ ಮೊದಲು ನೆನಪಾಗುವುದೇ ಪೊಲೀಸ್ ಇಲಾಖೆ. ಈ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಬೇಸತ್ತು ಮಹಿಳೆಯೊಬ್ಬರು ತುರ್ತು ಸಹಾಯವಾಣಿ 112 ಗೆ ಕರೆ ಮಾಡಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆ ಮುಂದೆ ಸತ್ತು ಬಿದ್ದಿದ್ದ ಹೆಗ್ಗಣವನ್ನು ತಾವೇ ಖುದ್ದಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ದಿನದಿಂದ ಸತ್ತು ಬಿದ್ದಿದ್ದ ಹೆಗ್ಗಣ ನಗರದ ಖಾದ್ರಿ ಚೌಕ್…

Read More
Wild life banned entry on hirebhaskara dam to tourist

Hirebhaskara: ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿ, ಹೀರೇಭಾಸ್ಕರ ಡ್ಯಾಮ್‌ಗೆ ನೋ ಎಂಟ್ರಿ

ಶಿವಮೊಗ್ಗ: ಮಲೆನಾಡು ಪ್ರವಾಸಿ ಪ್ರಿಯರ ನೆಚ್ಚಿನ ಸ್ಥಳ. ಇಲ್ಲಿ ನೋಡಲು ಪ್ರಕೃತಿ ಸೌಂದರ್ಯ ಸವಿಯಲು ಸಮಯವೇ ಸಾಕಾಗುವುದಿಲ್ಲ, ಈಗಂತೂ ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರ ದಂಡೇ ಸೇರಿರುತ್ತದೆ. ಆದರೆ ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ನಿರಾಸೆಯ ಸುದ್ದಿ ಒಂದಿದೆ. ಇತ್ತೀಚೆಗೆ ಬಹಳ ಫೇಮಸ್‌ ಆಗಿದ್ದ ಹೀರೇಭಾಸ್ಕರ (Hirebhaskara) ಡ್ಯಾಮ್‌ ಪ್ರವೇಶಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ನಿಷೇಧ ಹೇರಿದೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದ್ದು ಡ್ಯಾಂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅನೇಕ ಪ್ರಸಿದ್ದ ಸ್ಥಳಗಳಿದೆ. ಅದರಲ್ಲೂ…

Read More
MLC election cross voting BY Vijayendra position at risk

BY Vijayendra: ಇಂಧನ ದರ ಏರಿಕೆ: ತೆರಿಗೆ ಕಡಿತಕ್ಕೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತವಾಗಿ ಹೆಚ್ಚುತ್ತಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆರವಾಗಲು ರಾಜ್ಯ ಸರ್ಕಾರವು ತನ್ನ ಪಾಲಿನ ವ್ಯಾಟ್ (ತೆರಿಗೆ) ಅನ್ನು ತಕ್ಷಣವೇ ಕಡಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚುತ್ತಿರುವುದು ನಿಜವಾದರೂ, ರಾಜ್ಯ ಸರ್ಕಾರ ತೆರಿಗೆ ತಗ್ಗಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದಿದ್ದಾರೆ….

Read More
Cm siddaramaiah about building stadium

CM Siddaramaiah: 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸಜ್ಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ,…

Read More