bjp state president related discussion started

BJP: ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟಕ್ಕಾಗಿ ಶ್ರೀರಾಮುಲು ಭರ್ಜರಿ ಲಾಬಿ: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶುರುವಾಯ್ತು ಪೈಪೋಟಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಸದ್ಯಕ್ಕೆ ಸದ್ದಿಲ್ಲದೆಯೇ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಮೂರು ವರ್ಷಗಳ ಅಧಿಕಾರಾವಧಿಯು 2026ರ ನವೆಂಬರ್‌ಗೆ ಕೊನೆಗೊಳ್ಳಲಿದ್ದು, ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಾಜಿ ಸಚಿವ ಬಿ. ಶ್ರೀರಾಮುಲು ಈ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಸಾರಥ್ಯ ವಹಿಸಿಕೊಳ್ಳಲು ಅವರು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಶ್ರೀರಾಮುಲು ಬೇಡಿಕೆಗಳ ಸರಮಾಲೆ ಬಿಜೆಪಿ…

Read More
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More
SSLC exam 2 key answers released by board here is the details

SSLC: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆವರೆಗಷ್ಟೇ ಅವಕಾಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ವಿಷಯವಾರು ಕರಡು ಕೀ ಉತ್ತರಗಳನ್ನು (Key Answers) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರು ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ, ಅದಕ್ಕೆ ನಾಳೆ ಕಡೆಯ ದಿನವಾಗಿದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ನಾಳೆ ಸಂಜೆ 5.30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೂಲಕವೇ ತಮ್ಮ ಆಕ್ಷೇಪಣೆಗಳನ್ನು…

Read More
protest march against nuclear power plant in sagara besuru village

Sagara: ಬೇಸೂರಿನಲ್ಲಿ ಅಣುಸ್ಥಾವರ ವಿರೋಧಿಸಿ ಪಾದಯಾತ್ರೆ, NOC ಕೊಡದಂತೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪಾದಯಾತ್ರೆ ನಡೆಸಲಾಗಿದೆ. ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗಿ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಯಿಂದ ಬೇಸೂರಿನಿಂದ ಸಾಗರ ಎಸಿ ಕಚೇರಿಯ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನ ಬೆಳಿಗ್ಗೆ 7 ಗಂಟೆಗೆ ಬೇಸೂರು ನಿಂದ ಸಾಗರ ತಾಲೂಕು ಕಚೇರಿ ವರೆಗೆ ಸರಿಸುಮಾರು 30 ಕಿಲೋಮೀಟರ್…

Read More
No entry to hijab in sslc second exam also

Hijab: ರಾಜ್ಯದಲ್ಲಿ ಇಂದಿನಿಂದ ಎಸ್​​ಎಸ್​​ಎಲ್​​ಸಿ 2ನೇ ಪರೀಕ್ಷೆ ಆರಂಭ: ಹಿಜಾಬ್ ನಿಯಮದ ಸುತ್ತ ಗೊಂದಲ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮೇ 18) ಎಸ್​​ಎಸ್​​ಎಲ್​​ಸಿ (SSLC) ಎರಡನೇ ಪರೀಕ್ಷೆಗಳು ಆರಂಭಗೊಂಡಿವೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡುವ ಕುರಿತು ಸರ್ಕಾರ ಇತ್ತೀಚೆಗಷ್ಟೇ ಹೊಸ ಮಾರ್ಗಸೂಚಿ ಪ್ರಕಟಿಸಿತ್ತಾದರೂ, ಪ್ರಸಕ್ತ ಪರೀಕ್ಷೆಯಲ್ಲಿ ಹಿಜಾಬ್ (Hijab) ಧರಿಸಿ ಬರೆಯಲು ವಿದ್ಯಾರ್ಥಿನಿಯರಿಗೆ ಅವಕಾಶ ಸಿಕ್ಕಿಲ್ಲ. ಜನಿವಾರ, ಶಿವದಾರ, ಲಿಂಗ ಮತ್ತು ರುದ್ರಾಕ್ಷಿ ಧರಿಸಲು ಸಮ್ಮತಿ ಇದ್ದರೂ, ಹಿಜಾಬ್ ನಿಷೇಧ ಮುಂದುವರಿದಿದೆ. ಹಳೆಯ ನಿಯಮದಂತೆಯೇ ಪರೀಕ್ಷೆ ಮೊದಲನೇ ಪರೀಕ್ಷೆಯ ಮಾದರಿಯಲ್ಲೇ ಈ ಬಾರಿಯೂ ಪರೀಕ್ಷಾ ಪ್ರಕ್ರಿಯೆಗಳು ನಡೆಯುತ್ತಿವೆ. ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ…

Read More
one nation one election concept is not good for country says dk shivakumar

DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್‌ ನೇಷನ್‌, ಒನ್‌ ಎಲೆಕ್ಷನ್‌) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…

Read More
good news Karnataka state gets 1122 extra medical seat from central

Good News: ವೈದ್ಯಕೀಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದ ಭರ್ಜರಿ ಉಡುಗೊರೆ: ಕರ್ನಾಟಕಕ್ಕೆ ದಾಖಲೆಯ 1,122 ಹೆಚ್ಚುವರಿ ಮೆಡಿಕಲ್ ಸೀಟುಗಳು ಮಂಜೂರು

ಬೆಂಗಳೂರು: ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣಪ್ರಕಾಶ ಪಾಟೀಲ್ ಅವರು, ಒಂದೇ ರಾಜ್ಯಕ್ಕೆ ಏಕಕಾಲದಲ್ಲಿ ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳು (Good News) ಹಂಚಿಕೆಯಾಗಿರುವುದು ಒಂದು ಐತಿಹಾಸಿಕ ಮತ್ತು ದಾಖಲೆಯ ಸಾಧನೆಯಾಗಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ ಎಂದ ಅವರು, ಈ ನೂತನ ಸೀಟುಗಳನ್ನು ಕೊಪ್ಪಳ, ಗದಗ್, ಚಾಮರಾಜನಗರ, ಕಾರವಾರ ಮತ್ತು ಕಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹಂಚಿಕೆ ಮಾಡಲಾಗುವುದು, ಇದರಿಂದ ಆಯಾ…

Read More