CM Siddaramaiah clarification regarding hijab and saffron turban

CM Siddaramaiah: ಹೊಸ ರೂಪದ ಕೇಸರಿ ಪೇಟಾ ಧರಿಸುವಂತಿಲ್ಲ; ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳ ಮಹತ್ವದ ಹೇಳಿಕೆ

ಮೈಸೂರು: ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೇಸರಿ ಪೇಟಾ ಮತ್ತು ಹಿಜಬ್ ಧರಿಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಶಾಲೆಗಳಿಗೆ ಕೇಸರಿ ಶಾಲು ಅಥವಾ ಹೊಸ ಮಾದರಿಯ ಕೇಸರಿ ಪೇಟಾ ಧರಿಸಿ ಬರುವುದಕ್ಕೆ ಸಮ್ಮತಿ ಇಲ್ಲ ಎಂದು ಅವರು ತಿಳಿಸಿದ್ದಾರೆ. ಸಾಂಪ್ರದಾಯಿಕ ಪೇಟಕ್ಕೆ ಸಮ್ಮತಿ, ಹೊಸ ರೂಪಕ್ಕೆ ತಡೆ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೊದಲಿನಿಂದಲೂ ಧರಿಸುತ್ತಿದ್ದ ಸಾಂಪ್ರದಾಯಿಕ ಪೇಟಗಳನ್ನು ಧರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಬಣ್ಣ ಬದಲಾಯಿಸಿ…

Read More
State Politics samarth mallikarjun and umesh meti took oath

Politics: ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಮಲ್ಲಿಕಾರ್ಜುನ್ ಪ್ರಮಾಣ ವಚನ: ಸಂಪುಟ ಪುನಾರಚನೆಯ ಸುಳಿವು ನೀಡಿದ ಸಿಎಂ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (Politics) ಇಂದು ಮಹತ್ವದ ವಿದ್ಯಮಾನಗಳು ಜರುಗಿದ್ದು, ಇತ್ತೀಚಿನ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ನೂತನ ಶಾಸಕರು ಅಧಿಕೃತವಾಗಿ ಶಾಸನಸಭೆ ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡುವ ಮೂಲಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ನೂತನ ಶಾಸಕರ ಪದಗ್ರಹಣ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ದಾವಣಗೆರೆ ದಕ್ಷಿಣದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಶಾಸಕರಾಗಿ ಪ್ರಮಾಣ…

Read More
kalaburagi rotti goes international Priyank kharge post

Kalaburagi Rotti: ವಿಶ್ವಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾದ ‘ಕಲಬುರಗಿ ಜೋಳದ ರೊಟ್ಟಿ’

ಕಲಬುರಗಿ: ಜಿಲ್ಲೆಯ ಹೆಮ್ಮೆಯ ‘ಕಲಬುರಗಿ ಜೋಳದ ರೊಟ್ಟಿ’ (Kalaburagi Rotti) ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದೆ. ಸ್ಥಳೀಯ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ರೊಟ್ಟಿಗಳ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯರು ತಮ್ಮೂರಿನ ರೊಟ್ಟಿಯ ರುಚಿಯನ್ನು ಸವಿಯಬಹುದಾಗಿದೆ. ಜಾಗತಿಕ ಮಾರುಕಟ್ಟೆಗೆ ಲಗ್ಗೆ ಈ ಐತಿಹಾಸಿಕ ಬೆಳವಣಿಗೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದು, ಪ್ರತಿ ತಿಂಗಳು ಅಮೆರಿಕ ಮತ್ತು ಆಸ್ಟ್ರೇಲಿಯಾ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
davanagere vachanananda Swamiji gets big relief in pocso case

Davanagere: ಪೋಕ್ಸೋ ಪ್ರಕರಣ, ವಚನಾನಂದ ಸ್ವಾಮೀಜಿಗೆ ಬಿಗ್‌ ರಿಲೀಫ್

ಹರಿಹರದ ವೀರಶೈವ (Davanagere) ಲಿಂಗಾಯತ ಪಂಚಮಸಾಲಿ ಪೀಠದ ಮಾಜಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅವರಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಿದ ನ್ಯಾಯಾಲಯ ತಮ್ಮ ವಿರುದ್ಧದ ಗಂಭೀರ ಆರೋಪಗಳಿಂದಾಗಿ ಬಂಧನಕ್ಕೊಳಗಾಗುವ ಆತಂಕದಲ್ಲಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಭಾರತೀಯ ನಾಗರಿಕ…

Read More
Karnataka honoured for top performance in DigiLocker integration

Digi Locker: ಡಿಜಿಲಾಕರ್ ಯಶಸ್ವಿ ಅನುಷ್ಠಾನ, ಕರ್ನಾಟಕ್ಕೆ ಕೇಂದ್ರ ಗೌರವ

ನವದೆಹಲಿ: ಡಿಜಿಟಲ್ ಆಡಳಿತಕ್ಕೆ ವೇಗ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಡಿಜಿಲಾಕರ್’ (Digi Locker) ವ್ಯವಸ್ಥೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರವು ವಿಶೇಷ ಗೌರವ ನೀಡಿದೆ. ನವದೆಹಲಿಯಲ್ಲಿ ಮೇ 11ರಂದು ನಡೆದ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ಈ ಸಾಧಕ ರಾಜ್ಯಗಳನ್ನು ಸನ್ಮಾನಿಸಲಾಯಿತು. ಡಿಜಿಟಲ್ ಇಂಡಿಯಾ ಅಭಿಯಾನದಡಿ ಜನಸಾಮಾನ್ಯರ ಕೆಲಸಗಳನ್ನು ಸುಲಭಗೊಳಿಸಲು ಶ್ರಮಿಸಿದ ಕರ್ನಾಟಕ, ಗುಜರಾತ್, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳ ಅಧಿಕಾರಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More
r ashok cuts his Escort vehicle numbers

R Ashok: ಪ್ರಧಾನಿ ಮಾತಿಗೆ ಅಶೋಕ್‌ ಸಾಥ್‌, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…

Read More