Good work in belthangady 16 cobra eggs rescued

Good Work: 16 ನಾಗರಹಾವಿನ ಮರಿಗಳಿಗೆ ಜೀವದಾನ ನೀಡಿ ಕಾಡಿಗೆ ಬಿಟ್ಟ ಉರಗ ಮಿತ್ರ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Good Work) ತಾಲೂಕಿನ ನೆರಿಯ ಗ್ರಾಮದಲ್ಲಿ ಅಪರೂಪದ ಜೀವ ಸಂರಕ್ಷಣಾ ಕಾರ್ಯವೊಂದು ನಡೆದಿದೆ. ಮನೆಯೊಂದರ ಗೋಡೆಯಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ರಕ್ಷಿಸಿ, ಕೃತಕವಾಗಿ ಕಾವು ಕೊಡುವ ಮೂಲಕ ಮರಿಗಳನ್ನು ಮಾಡಿ ಅರಣ್ಯಕ್ಕೆ ಬಿಡಲಾಗಿದೆ. ಮೊಟ್ಟೆಗಳ ಮೇಲೆ ಇರುವೆಗಳ ದಾಳಿ: ನೆರಿಯದ ಬೊಮ್ಮಣ್ಣ ಗೌಡ ಅವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು. ಇದನ್ನು ಹಿಡಿಯಲು ಬಂದ ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ಸೆರೆಹಿಡಿಯುವಾಗ ಅಲ್ಲಿ…

Read More
sringeri controversy sabarimala prediction about dn jeevaraj become true

DN Jeevaraj: ಶೃಂಗೇರಿ ಕೋರ್ಟ್ ಕದನ ಗೆದ್ದ ಜೀವರಾಜ್: ನಿಜವಾಯಿತು ಶಬರಿಮಲೆ ಪೂಜಾರಿಯ ಭವಿಷ್ಯವಾಣಿ!

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ (DN Jeevaraj) ಅವರು ವಿಜಯಶಾಲಿಯಾಗಿದ್ದಾರೆ. ಇದರೊಂದಿಗೆ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಅಧಿಕೃತ ತೆರೆ ಬಿದ್ದಂತಾಗಿದೆ. ಆದರೆ ಈ ರಾಜಕೀಯ ವಿಜಯದ ಜೊತೆಗೆ ಈಗ ದೈವಿಕ ಪವಾಡವೊಂದು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಏನಿದು ದೈವಿಕ ಪವಾಡ? ನಾಲ್ಕು ತಿಂಗಳ ಹಿಂದೆ ಶಬರಿಮಲೆಯಲ್ಲಿ ಪೂಜಾರಿಯೊಬ್ಬರು ಜೀವರಾಜ್ ಗೆಲುವಿನ ಬಗ್ಗೆ ನುಡಿದಿದ್ದ…

Read More
dk suresh cryptic statement about cm change row

DK Suresh: ಕಾಲ ಕೂಡಿ ಬರಲಿ ಎಂದು ಕಾಯುತ್ತಿದ್ದೇವೆ: ನಾಯಕತ್ವ ಬದಲಾವಣೆ ಕುರಿತು ಡಿ.ಕೆ. ಸುರೇಶ್ ಮಾರ್ಮಿಕ ಮಾತು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ‘ಅಧಿಕಾರ ಹಂಚಿಕೆ’ಯ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಶೇಷ ದಿನದಂದು ಹೈಕಮಾಂಡ್‌ನಿಂದ ಶುಭ ಸುದ್ದಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಅವರು ಕುತೂಹಲಕಾರಿ ಪ್ರತಿಕ್ರಿಯೆ ನೀಡಿದ್ದಾರೆ. 64ನೇ ವಸಂತಕ್ಕೆ ಕಾಲಿಡುವುದೇ ಶುಭ ಸುದ್ದಿ: ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, “ಶಿವಕುಮಾರ್ ಅವರಿಗೆ 63 ವರ್ಷ ಮುಗಿದು 64ನೇ ವರ್ಷಕ್ಕೆ ಕಾಲಿಡುತ್ತಿರುವುದೇ…

Read More
two peacocks lost life due to bird flu

Bird Flu: ತುಮಕೂರಿನಲ್ಲಿ ನವಿಲುಗಳ ಮಾರಣಹೋಮ: ಹಕ್ಕಿಜ್ವರಕ್ಕೆ ಮತ್ತೆರಡು ಬಲಿ

ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಮುಂದುವರಿದಿದ್ದು, ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಹಕ್ಕಿಜ್ವರದ (Bird Flu) ಬಾಧೆಯಿಂದಾಗಿ ತಾಲೂಕಿನ ಗೂಳರಿವೆ ಗ್ರಾಮದ ‘ಸುಣ್ಣಕಲ್ಲು ಕಟ್ಟೆ’ ಬಳಿ ಮತ್ತೆರಡು ನವಿಲುಗಳು ಮೃತಪಟ್ಟಿವೆ. ಈ ಭಾಗದಲ್ಲಿ ಸತತವಾಗಿ ನವಿಲುಗಳು ಸಾವನ್ನಪ್ಪುತ್ತಿರುವುದು ಪ್ರಕೃತಿ ಪ್ರೇಮಿಗಳ ನಿದ್ರೆ ಗೆಡಿಸಿದೆ. ಬೀದಿ ನಾಯಿಗಳ ಪಾಲಾದ ಮೃತದೇಹ: ಘಟನಾ ಸ್ಥಳದಲ್ಲಿ ಮೃತ ನವಿಲುಗಳ ದೇಹಗಳು ಅನಾಥವಾಗಿ ಬಿದ್ದಿದ್ದು, ಅವುಗಳನ್ನು ಬೀದಿ ನಾಯಿಗಳು ಕಿತ್ತು ತಿನ್ನುತ್ತಿರುವ ದೃಶ್ಯ ಮನಕಲಕುವಂತಿದೆ. ಇತ್ತೀಚೆಗಷ್ಟೇ ಈ ಭಾಗದಲ್ಲಿ…

Read More
Protest rally to oppose Nuclear power plant in sagara taluk besur village

Sagara: ಅಣುವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ವಿರೋಧಿಸಿ ನಾಳೆ ಪ್ರತಿಭಟನೆ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಜನಹೋರಾಟ ವೇದಿಕೆವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಣುಸ್ಥಾವರದಿಂದ ಅಲ್ಲಿನ ಜನರ ಬದುಕಿಗೆ ಮಾರಕವಾಗುವುದು ಬೇಡ ಎಂದು ಜನ ಆಗ್ರಹ ಮಾಡಿದ್ದಾರೆ, ಎಲ್ಲಿ ಪ್ರತಿಭಟನೆ?ನಾಳೆ ಬೆಳಿಗ್ಗೆ 10-30ಕ್ಕೆ ಸಾಗರದ ಶಿವಪ್ಪ ನಾಯ್ಕ ವೃತ್ತದಿಂದ ಈ ಪ್ರತಿಭಟನೆ ರ್ಯಾಲಿ ಪ್ರಾರಂಭ ಮಾಡಲು ನಿರ್ಧಾರ…

Read More
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More
high court gives stay to state primary school association election procedure

High Court: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಕೆಳ ಹಂತದ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು, ಸದ್ಯಕ್ಕೆ ಯಾವುದೇ ಚುನಾವಣಾ ಚಟುವಟಿಕೆ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದಾಗಿ ಹಾಲಿ ಪದಾಧಿಕಾರಿಗಳಿಗೆ ಭಾರಿ ಹಿನ್ನಡೆಯಾಗಿದೆ. ಗಂಭೀರ ಸ್ವರೂಪದ ಅಕ್ರಮಗಳ ಆರೋಪ: ಸಂಘದ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮತ್ತು ಕಾರ್ಯದರ್ಶಿ ಚೇತನ್ ನುಗ್ಲಿ ಅವರು ಚುನಾವಣೆಯಲ್ಲಿ ಗೆಲ್ಲುವ…

Read More