TOP NEWS
remove road side shops which is near to compounds says dk shivakumar

DK Shivakumar: ಕಾಂಪೌಂಡ್ ಪಕ್ಕ ಇರುವ ಬೀದಿ ವ್ಯಾಪಾರಿಗಳ ತೆರವಿಗೆ ಸೂಚನೆ

ಬೆಂಗಳೂರು: ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಈ ಘಟನೆ ಆಗಬಾರದಿತ್ತು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆಯೇ ಎಂದು ಕೇಳಿದಾಗ, “ಈ ದುರ್ಘಟನೆ ಸಂಭವಿಸಬಾರದಿತ್ತು, ಆದರೂ ಸಂಭವಿಸಿದೆ ಯಾವ ಅಧಿಕಾರಿಗಳ ನಿರ್ಲಕ್ಷ್ಯ ಎಂದು…

Read More
Divorce allowed without marriage registration orders Karnataka High court

High Court: ವಿವಾಹ ನೋಂದಣಿಯಾಗದಿದ್ದರೂ ವಿಚ್ಛೇದನ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ಅಧಿಕೃತ ನೋಂದಣಿ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ವಿವಾಹ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದು ಪ್ರಕರಣ? ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಥ ರಾವ್ ಅವರ ಪೀಠವು ಈ ಆದೇಶ ನೀಡಿದೆ. ಈ ದಂಪತಿಗಳು 2006ರಲ್ಲಿ ತಮ್ಮ…

Read More
New rules to rural officers from state government

New Rules: ಗ್ರಾಮ ಪಂಚಾಯತಿ ಅಧಿಕಾರಿಗಳೇ ಇನ್ಮುಂದೆ ಕಚೇರಿಯಲ್ಲಿ ಸಿಗಲೇಬೇಕು: ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಹೊಸ ನಿಯಮ ಜಾರಿ

ಬೆಂಗಳೂರು: ಗ್ರಾಮ ಪಂಚಾಯತಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸಿಗುತ್ತಿಲ್ಲ ಎಂಬ ದೂರುಗಳಿಗೆ ಇತಿಶ್ರೀ ಹಾಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ (New Rules) ಕೈಗೊಂಡಿದೆ. ಇನ್ಮುಂದೆ ಪಂಚಾಯತಿ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲೇ ಇರುವುದನ್ನು ಖಚಿತಪಡಿಸಿಕೊಳ್ಳಲು ಪಂಚಾಯತ್ ರಾಜ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಯೋಮೆಟ್ರಿಕ್‌ ಕಡ್ಡಾಯ ಹೊಸ ನಿಯಮದ ಪ್ರಕಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಮತ್ತು ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲರೂ ‘ಪಂಚತಂತ್ರ…

Read More
congress suspended more leaders for supporting bjp

Congress: ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿಸಿದ ಮೂವರು ಪ್ರಭಾವಿ ನಾಯಕರ ಅಮಾನತು

ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್‌ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…

Read More
cooker bomb blast case 10 years jail for accused but victim is unhappy

Cooker Bomb Case: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ; ಶಿಕ್ಷೆ ಸಾಕಾಗದು ಎಂದ ಸಂತ್ರಸ್ತ ಆಟೋ ಚಾಲಕ

ಮಂಗಳೂರು: 2022ರ ನವೆಂಬರ್ 19ರಂದು ನಡೆದಿದ್ದ ಬಹುಚರ್ಚಿತ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Cooker Bomb Case) ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆಯನ್ನು ವಿಧಿಸಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿ, ಈ ಶಿಕ್ಷೆಯ ಪ್ರಮಾಣ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವಾವಾಧಿ ಶಿಕ್ಷೆ ಆಗಬೇಕಿತ್ತು ಅಪರಾಧಿಗೆ ಶಿಕ್ಷೆಯಾಗಿರುವುದು ಒಳ್ಳೆಯದೇ ಆದರೂ, ಇಂತಹ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು…

Read More
d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More